ಒಂದು Sorry ಕೇಳದೆ ಜೀವ ಕಳೆದುಕೊಂಡ ವ್ಯಕ್ತಿ, ಇಷ್ಟು ಸಣ್ಣ ವಿಷಯಕ್ಕೆ ಕೊಲೆ
ಎಷ್ಟು ಸಣ್ಣ ಸಣ್ಣ ವಿಷಯಗಳಿಗೆ ಕೊಲೆಯಾಗುತ್ತದೆ ಎನ್ನುವುದಕ್ಕೆ ಬೆಂಗಳೂರಿನಲ್ಲಿ ಸೋಮವಾರ ನಡೆದಿರುವ ಕೊಲೆಯೇ ಸಾಕ್ಷಿ. ಸೋಮವಾರ ಬೆಂಗಳೂರಿನಲ್ಲಿ ಅತ್ಯಂತ ಸಣ್ಣ ವಿಷಯಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಅಷ್ಟಕ್ಕೂ ಅವರಿಬ್ಬರ ನಡುವೆ ಅಂತಹ ಹೇಳಿಕೊಳ್ಳುವ ವಿಷಯಕ್ಕೂ ಜಗಳವಾಗಿರಲಿಲ್ಲ. ಆದರೆ, ಇಬ್ಬರೂ ಕುಡಿದ ಅಮಲಿನಲ್ಲಿ ಇದ್ದರು. ಸಣ್ಣ Sorry ಕೇಳಿದ್ದರೂ, ಜಗಳಕ್ಕೆ ಅಂತ್ಯವಾಡಬಹುದಿತ್ತು. ಆದರೆ, ಇಬ್ಬರೂ ಅದನ್ನು ಮಾಡಲಿಲ್ಲ.
ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ, ಮೆಟ್ರೋ, ಬಸ್ ಹಾಗೂ ರೈಲು ನಿಲ್ದಾಣ ಅಂತ ಎಲ್ಲೆಂದರಲ್ಲಿ ಒಬ್ಬರು ಮತ್ತೊಬ್ಬರನ್ನು ತಳ್ಳುವುದು ಅಥವಾ ಆಕಸ್ಮಿಕವಾಗಿ ತುಳಿಯುವುದು ಸಾಮಾನ್ಯ. ಈ ರೀತಿ ತಳ್ಳಿಸಿಕೊಂಡವರು ಹಾಗೂ ತುಳಿಸಿಕೊಂಡವರು ತುಳಿದವರನ್ನು ಕೊಂದರೆ ಏನು ಗತಿ. ಬೆಂಗಳೂರಿನಲ್ಲಿ ಸೋಮವಾರ ನಡೆದಿರುವುದು ಸಹ ಇಂತಹದ್ದೇ ಒಂದು ಸಣ್ಣ ಅಚಾತುರ್ಯ ಆದರೆ, ಅದಕ್ಕೆ ಒಬ್ಬರ ಅಮೂಲ್ಯ ಜೀವವೇ ಹೋಗಿದೆ. ಬೆಂಗಳೂರಲ್ಲಿ ಮುಂದಿನ ಮನೆಯ ವ್ಯಕ್ತಿ ಕಾಲು ತುಳಿದ ಎನ್ನುವ ಕಾರಣಕ್ಕೆ ಆ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮೂರ್ತಿ ಎನ್ನುವ ವ್ಯಕ್ತಿಯು ಸೋಮವಾರ ರಾತ್ರಿ ಅವರ ಮನೆಯ ಮುಂದೆ ಇರುವ ಕೀರ್ತಿ ಎನ್ನುವ ವ್ಯಕ್ತಿಯ ಕಾಲನ್ನು ತಿಳಿಯದೆ ತುಳಿದಿದ್ದಾರೆ. ಆದರೆ, ಇದೇ ಸಣ್ಣ ವಿಷಯಕ್ಕೆ ಜಗಳ ತೆಗೆದಿರುವ ಕೀರ್ತಿ ಎನ್ನುವ ವ್ಯಕ್ತಿ ಮೂರ್ತಿ ಅವರ ಮೇಲೆ ಹಲ್ಲೇ ಮಾಡಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಸಣ್ಣ ಸಣ್ಣ ವಿಷಯಗಳಿಗೂ ಕೊಲೆಯಾಗುವುದು ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ವರದಿಯಾಗುತ್ತಿದೆ. ಆದರೆ, ಕಾಲು ತುಳಿದರು ಎನ್ನುವ ವಿಚಾರ ಇಷ್ಟೊಂದು ವಿಕೋಪಕ್ಕೆ ಹೋಗಿದೆ.

ಘಟನೆಯ ಹಿನ್ನೆಲೆ ಏನು: ಬೆಂಗಳೂರಿನ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಪಿತೃಪಕ್ಷ ಪೂಜೆ ಆಯೋಜಿಸಲಾಗಿತ್ತು. ಈ ಪೂಜೆಗೆ ಮೂರ್ತಿ ಅವರ ಮನೆಗೆ ಕುಟುಂಬದವರೆಲ್ಲ ಬಂದಿದ್ದರು. ಕುಟುಂಬಸ್ಥರೆಲ್ಲ ಸೇರಿ ಹಿರಿಯ ಪೂಜೆ ಮಾಡಿ, ಕೆಲವರು ಊಟ ಮಾಡುತ್ತಿದ್ದರು. ಪೂಜೆಯ ದಿನವೇ ಮನೆಯಲ್ಲಿ ಎಣ್ಣೆ ಪಾರ್ಟಿಯನ್ನು ಸಹ ನಡೆಸಲಾಗಿದೆ. ಕುಡಿದು ಹೊರಗೆ ಬಂದಿರುವ ಮೂರ್ತಿ ತಿಳಿಯದೆ ಕೀರ್ತಿಯ ಕಾಲು ತುಳಿದಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಕೀರ್ತಿ, ಮೂರ್ತಿ ಎನ್ನುವವರ ಮೇಲೆ ರೇಗಾಡಿದ್ದಾನೆ. ಪರಸ್ಪರ ಮಾತು ಕೈ ಮೀರಿದೆ. ನೋಡ ನೋಡುತ್ತಿದ್ದಂತೆಯೇ ಮೂರ್ತಿ ಹೊಟ್ಟೆಗೆ ಕೀರ್ತಿ ಚಾಕು ಇರಿದಿದ್ದಾನೆ. ಚಾಕುವಿನ ಇರಿತಕ್ಕೆ ತೀವ್ರ ರಕ್ತಸ್ರಾವದಿಂದ ಮೂರ್ತಿ ಅವರು ಮೃತಪಟ್ಟಿದ್ದಾರೆ. ಆದರೆ, ಆರೋಪಿ ಚಾಕುವಿನಿಂದ ಚುಚ್ಚಿದ ಕೂಡಲೇ ಪರಾರಿಯಾಗಿದ್ದಾನೆ.
ತಪ್ಪಿಸಿಕೊಂಡಿದ್ದ ವ್ಯಕ್ತಿ: ಚಾಕುವಿನಿಂದ ಇರಿದು ಕೊಲೆ ಮಾಡಿದ ಕೂಡಲೇ ಕೀರ್ತಿ ಸ್ಥಳದಿಂದಲೇ ಪರಾರಿಯಾಗಿದ್ದಾನೆ. ಅವನನ್ನು ಹಿಡಿದುಕೊಳ್ಳಲು ಸ್ಥಳೀಯರು ಪ್ರಯತ್ನಿಸಿದರೂ, ಅವರ ಕೈಗೆ ಸಿಕ್ಕಿಲ್ಲ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ವ್ಯಕ್ತಿಯಲ್ಲಿ ಪತ್ತೆ ಹಚ್ಚಿ ಬಂದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯ ಮೊಬೈಲ್ ಲೊಕೇಷನ್ ಆಧಾರದ ಮೇಲೆ ಅವನನ್ನು ಬಂಧಿಸಲಾಗಿದೆ. ಜ್ಞಾನಭಾರತಿ ಠಾಣೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications