ಮುರುಘಾ ಶ್ರೀ ಪ್ರಕರಣ: ಬಸವರಾಜನ್ ದಂಪತಿ ವಿರುದ್ಧದ ಕೌಂಟರ್ ಕೇಸ್ ರದ್ದು
ಬೆಂಗಳೂರು, ನವೆಂಬರ್ 4: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಪ್ರತಿಯಾಗಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದಡಿ ದಾಖಲಿಸಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಇದರಿಂದಾಗಿ ಬಸವರಾಜನ್ ದಂಪತಿ ನಿರಾಳರಾಗುವಂತೆ ಮಾಡಿದೆ. ಅವರೇ ಪಿತೂರಿ ನಡೆಸಿ ಸ್ವಾಮೀಜಿ ವಿರುದ್ಧ ಕೇಸ್ ದಾಖಲಿಸಿದ್ದಾರೆಂಬ ಆರೋಪ ದಂಪತಿ ವಿರುದ್ಧ ಕೇಳಿಬಂದಿತ್ತು. ಆದರೆ ಅವರು ಅದನ್ನು ನಿರಾಕರಿಸಿದ್ದರು.

ಬಸವರಾಜನ್ ಮತ್ತು ಸೌಭಾಗ್ಯ ದಂಪತಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗಳನ್ನು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
ಅರ್ಜಿದಾರರ ಪರ ವಕೀಲರು, ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ಈ ದೂರಿನಲ್ಲಿ ಯಾವುದೇ ಹುರುಳಿಲ್ಲ. ಶರಣರ ವಿರುದ್ಧ ಹೊರಿಸಲಾಗಿರುವ ಬಾಲಕಿಯರ ಮೇಲಿನ ಅತ್ಯಾಚಾರದ ಆಪಾದನೆಗಳಿಗೆ ರಕ್ಷಣೆ ಪಡೆಯಲು ಇಂತಹ ಪ್ರತಿ ದೂರು ದಾಖಲಿಸಲಾಗಿದೆ ಎಂದು ವಾದ ಮಂಡಿಸಿದ್ದರು. ಅದನ್ನು ನ್ಯಾಯಾಲಯ ಮಾನ್ಯ ಮಾಡಿದೆ. ವಿಸ್ತೃತ ಆದೇಶ ಇನ್ನೂ ಹೊರಬೀಳಬೇಕಿದೆ.
ಪ್ರಕರಣದ ಹಿನ್ನೆಲೆ
2022ರ ನವೆಂಬರ್ 9ರಂದು ಬಸವಪ್ರಭು ಸ್ವಾಮೀಜಿ ದಂಪತಿ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ-1860ರ ಕಲಂ 120 ಬಿ (ಅಪರಾಧ ಎಸಗಲು ಕ್ರಿಮಿನಲ್ ಪಿತೂರಿ), 384 (ಸುಲಿಗೆ), 420 (ವಂಚನೆಯ ಅಪರಾಧ), 366 ಎ (ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ವಶದಲ್ಲಿ ಇರಿಸಿಕೊಳ್ಳುವುದು) ಅಡಿಯಲ್ಲಿ ದೂರು ದಾಖಲಿಸಿದ್ದರು.
ಪೋಕ್ಸೋ ಪ್ರಕರಣದಲ್ಲಿ ಶರಣರ ಬಂಧನವಾದ ನಂತರ, 'ಸುಳ್ಳು ಕೇಸು ದಾಖಲಿಸಲು ಸಂತ್ರಸ್ತ ಬಾಲಕಿಗೆ ಅಥಣಿ ತಾಲೂಕಿನ ಜುಂಜರವಾಡ ಗ್ರಾಮದ ನಿವಾಸಿಯಾದ ಮಠದ ಶಾಲಾ ಶಿಕ್ಷಕ ಬಸವರಾಜೇಂದ್ರ ಮತ್ತು ಗಾಯತ್ರಿ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ಬಸವರಾಜೇಂದ್ರ ಅವರನ್ನು ಪೊಲೀಸರು ಕಳೆದ ನವೆಂಬರ್ 10ರಂದು ಬಂಧಿಸಿದ್ದರು.
ಇದೇ ಪ್ರಕರಣದಲ್ಲಿ ಶರಣರ ವಿರುದ್ಧ ಪಿತೂರಿ ನಡೆಸಿ ಸಂಚು ಹೆಣೆದ ಆರೋಪದಡಿ ಮಾಜಿ ಶಾಸಕರೂ ಆದ ಬಸವರಾಜನ್ ಮತ್ತು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆಯೂ ಆದ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನೂ ಪೊಲೀಸರು ಬಂಧಿಸಿದ್ದರು. ನಂತರ ಇಬ್ಬರೂ ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications