ರೇವಾ ವಿಶ್ವವಿದ್ಯಾಲಯವನ್ನು ಕೊಂಡಾಡಿದ ನಾದಬ್ರಹ್ಮ ಹಂಸಲೇಖ
ಬೆಂಗಳೂರು, ಜೂನ್ 05 : ರೇವಾ ವಿಶ್ವವಿದ್ಯಾಲಯ ಹಚ್ಚ ಹಸಿರಿನ ನಿತ್ಯ ತೋರಣದ ವಿದ್ಯಾ ದೇವಾಲಯ ಎಂದು ಸಂಗೀತ ನಿರ್ದೇಶಕ ಹಂಸಲೇಖ ಬಣ್ಣಿಸಿದರು.
ರೇವಾ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಮಾಧ್ಯಮಕೇಂದ್ರ(ಮೀಡಿಯಾ ಸೆಂಟರ್)ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಗರ ಒತ್ತಡದ ಮತ್ತು ಸಂಚಾರ ದಟ್ಟಣೆಯ ಕಿಷ್ಕಿಂದೆ ಎಂದು ಹೆಸರಾಗುತ್ತಿದೆ.
ಅಂತಹ ಆಲೋಚನೆಗಳಿಂದ ಹೊರ ಬರಲು ಬೆಂಗಳೂರಿನಿಂದ ಕೊಂಚ ಹೊರವಲಯದಲ್ಲಿ ರೇವಾ ವಿದ್ಯಾದೇವಾಲಯವಿದೆ. ಇದರ ಮಾಧ್ಯಮಕೇಂದ್ರದ ಉದ್ಘಾಟನೆಗೆ ನನ್ನನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ. ಇದು ನನ್ನ ಪುಣ್ಯ. ಈ ವಿಶ್ವವಿದ್ಯಾಲಯದ ಬಗ್ಗೆ ಕೇಳಿದ್ದೆ. ಆದರೆ ಇವತ್ತು ನೋಡುವಂತಹ ಭಾಗ್ಯ ಲಭಿಸಿದೆ.

ಒಳಗೆ ಬಂದು ನೋಡಿದಾಗ ಇದೊಂದು ಹಚ್ಚ ಹಸಿರಿನ ನಿತ್ಯ ತೋರಣವೆಂದು ಭಾಸವಾಯಿತು ಎಂದರು. ಈ ರೇವಾ ವಿಶ್ವವಿದ್ಯಾಲಯದಲ್ಲಿ ಮಾಧ್ಯಮಕೇಂದ್ರವನ್ನು ವೃತ್ತಿಪರವಾಗಿ ನಿರ್ಮಾಣ ಮಾಡಲಾಗಿದೆ. ಇಂತಹ ಕೇಂದ್ರ ಉದ್ಘಾಟನೆಗೊಳ್ಳುವ ಮೂಲಕ ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪಿ. ಶ್ಯಾಮರಾಜು ಅವರ ಕನಸು ನನಸಾಗಿದೆ ಎಂದು ಪ್ರಶಂಸಿಸಿದರು.
ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪಿ. ಶ್ಯಾಮರಾಜುರವರು ಮಾತನಾಡಿ, ನಮ್ಮ ವಿಶ್ವವಿದ್ಯಾಲಯದಲ್ಲಿ 15 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇವತ್ತು ಉದ್ಘಾಟನೆಗೊಂಡಿರುವ ಸ್ಟುಡಿಯೋದಿಂದ ಪತ್ರಿಕೋದ್ಯಮ ಮತ್ತು ಇತರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ತರಗತಿಯಲ್ಲಿ ಒತ್ತಡದಲ್ಲಿರುವ ವಿದ್ಯಾರ್ಥಿಗಳು ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಕಲೆ ಮತ್ತು ತಂತ್ರಜ್ಞಾನದ ಬಗ್ಗೆ ತಿಳಿದುಕೊಂಡು ತಮ್ಮ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಪದವಿಯ ಜತೆಗೆ ತಂತ್ರಜ್ಞಾನಗಳ ಬಗ್ಗೆಯೂ ತಿಳಿದು ಹೊರಜಗತ್ತಿಗೆ ಕಾಲಿಡಲಿ ಎಂಬ ಉದ್ದೇಶದಿಂದ ಈ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಮಲ್ಟಿ ಮೀಡಿಯಾ, ಮೀಡಿಯಾ ಎಡಿಟಿಂಗ್, ಅನಿಮೇಶನ್ ತಂತ್ರಜ್ಞಾನ, ಕಂಪ್ಯೂಟರ್ ಗ್ರಾಫಿಕ್ಸ್, ಆನ್ಲೈನ್ ವಿಡಿಯೋ ಎಡಿಟಿಂಗ್, ಕ್ಯಾಂಪಸ್ ಟಿ.ವಿ., ಕ್ಯಾಂಪಸ್ ರೇಡಿಯೋ, ವೆಬ್ ರೇಡಿಯೋ ಹಾಗೂ ವಾರ್ತಾ ನಿರೂಪಣೆ, ಚರ್ಚೆಗೆ ಸಂಬಂಧಿಸಿದ ಸ್ಟುಡಿಯೋಗಳು ಮಾಧ್ಯಮ ಕೇಂದ್ರದಲ್ಲಿದ್ದು, ಒಂದು ಕೋಟಿ ವೆಚ್ಚದಲ್ಲಿ ಈ ಕೇಂದ್ರವನ್ನು ನಿರ್ಮಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications