ಭಗವದ್ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಮುಸ್ಲಿಂ ಬಾಲಕ
ಬೆಂಗಳೂರು, ಅಕ್ಟೋಬರ್ 04 : ದ್ವಾಪರ ಯುಗದಲ್ಲಿ ಅರ್ಜುನನಿಗೆ ಬೋಧಿಸಿದ ಭಗವದ್ ಗೀತೆಯನ್ನು ಯಾರು ಬೇಕಾದರೂ ಓದಿ, ಅದರ ಸಾರವನ್ನು ಅಳವಡಿಸಿಕೊಳ್ಳಬಹುದು. ಜ್ಞಾನಕ್ಕೆ ಯಾವ ಕುಲ, ಗೋತ್ರ, ಜಾತಿಯ ಹಂಗಿಲ್ಲ ಎಂಬುದು ಮತ್ತೆ ಸಾಬೀತಾಗಿದೆ.
ಭಗವದ್ ಗೀತೆ ಸ್ಪರ್ಧೆಯಲ್ಲಿ ಓರ್ವ ಮುಸ್ಲಿಂ ಹುಡುಗನೊಬ್ಬ ಪ್ರಥಮ ಸ್ಥಾನ ಪಡೆದು ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾನೆ. ಬೆಂಗಳೂರಿನಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿ ಶೇಖ್ ಮೊಯಿನುದಿನ್ ಆ ಬಾಲಕ.
ಸಂಜಯ್ ನಗರದ ಇಸ್ಕಾನ್ ಸಂಸ್ಥೆ ಆಯೋಜಿಸಿದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸುಭಾಷ್ ಮೆಮೋರಿಯಲ್ ಇಂಗ್ಲಿಷ್ ಶಾಲೆಯ ವಿದ್ಯಾರ್ಥಿಯಾಗಿರುವ ಶೇಖ್ ಮೊಯಿನುದಿನ್ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ತಮ್ಮ ಮುಡಿಗೆರಿಸಿಕೊಂಡಿದ್ದಾರೆ.

ಭಗವದ್ಗೀತೆ ಬಗ್ಗೆ ಮಕ್ಕಳಲ್ಲಿರುವ ಜ್ಞಾನ ಎಷ್ಟಿದೆ ಎಂಬ ಕುರಿತು ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ 14 ಶಾಲೆಗಳು ಪಾಲ್ಗೊಂಡಿದ್ದವು. ಈ ಸ್ಪರ್ಧೆಯಲ್ಲಿ ವಿಜಯಿಯಾದ ಶೇಖ್ ಮೊಯಿನುದಿನ್ ನಿಗೆ ಅಭಿನಂದನೆಗಳು.

ಮೂರು ವರ್ಷಗಳ ಹಿಂದೆ ಮುಂಬೈನಲ್ಲಿ ಇಸ್ಕಾನ್ ಆಯೋಜಿಸಿದ್ದ ಭಗವದ್ ಗೀತೆ ಸ್ಪರ್ಧೆಯಲ್ಲಿ ಹನ್ನೆರಡು ವರ್ಷದ ಮುಸ್ಲಿಂ ಬಾಲಕಿ ಮರಿಯಮ್ ಆಸಿಫ್ ಸಿದ್ದಿಕಿ ಪ್ರಥಮ ಸ್ಥಾನ ಪಡೆದಿದ್ದಳು. ಇಸ್ಕಾನ್ ಸಂಸ್ಥೆ ಸುಮಾರು 5000 ವಿದ್ಯಾರ್ಥಿಗಳಿಗೆ ಭಗವದ್ ಗೀತೆಯ ಪುಸ್ತಕವನ್ನು ಹಂಚಿ, ನಂತರ ಸ್ಪರ್ಧೆಯನ್ನು ನಡೆಸಿತ್ತು. ಆ ಸ್ಪರ್ಧೆಯಲ್ಲಿ ಮರಿಯಮ್ ವಿಜಯಿಯಾಗಿ ಎಲ್ಲರೂ ಅಚ್ಚರಿಯಾಗುವಂತೆ ಮಾಡಿದ್ದಳು.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್












Click it and Unblock the Notifications