KSR Bengaluru: ನಿಲ್ದಾಣದಲ್ಲಿ ವಿಶೇಷ MTUS ಸೌಲಭ್ಯ, ಏನಿದು?: ವಿಶೇಷ ರೈಲು ಸೇವೆ ವಿಸ್ತರಣೆ
ಬೆಂಗಳೂರು, ನವೆಂಬರ್ 02: ದೀಪಾವಳಿ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯಗಳಲ್ಲಿ ಸಹ ಆಚರಣೆಗಳು ಇದೆ. ಹೀಗಾಗಿ ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಹಾಗೂ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನೈಋತ್ಯ ರೈಲ್ವೆ ವಲಯದಿಂದ (South Western Railway) ವಿಶೇಷ ರೈಲುಗಳ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ಹೊಸ ಟಿನ್ಸುಕಿಯಾ-ಬೆಂಗಳೂರು ವಿಶೇಷ ರೈಲು ಮುಂದುವರಿಸಲಾಗುತ್ತಿದೆ. ಹೌದು, ಹೊಸ ಟಿನ್ಸುಕಿಯಾ ಜಂಕ್ಷನ್ನಿಂದ ಎಸ್ಎಂವಿಟಿ ಬೆಂಗಳೂರಿಗೆ ಹಾಗೂ ಹಿಂದಿರುಗಿ ಬೆಂಗಳೂರಿನಿಂದ ಹೊಸ ಟಿನ್ಸುಕಿಯಾ ಜಂಕ್ಷನ್ಗೆ ಸಂಚರಿಸುವ ವಾರದ ವಿಶೇಷ ರೈಲುಗಳ ಸಂಚಾರಾವಧಿಯನ್ನು ವಿಸ್ತರಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಂಖ್ಯೆ, ವೇಳಾಪಟ್ಟಿ ವಿವರ
ಹೊಸ ಟಿನ್ಸುಕಿಯಾ - ಎಸ್ಎಂವಿಟಿ ಬೆಂಗಳೂರು ರೈಲು (ಸಂಖ್ಯೆ 05952) ಗುರುವಾರ ಸಂಚರಿಸಲಿದೆ. ಮೊದಲು 30 ಅಕ್ಟೋಬರ್ 2025ರವರೆಗೆ ನಿಗದಿಯಾಗಿದ್ದ ಈ ರೈಲು ಸಂಚಾರವನ್ನು 2025 6 ನವೆಂಬರ್ ರವರೆಗೆ ವಿಸ್ತರಿಸಲಾಗಿದೆ. ಎಸ್ಎಂವಿಟಿ ಬೆಂಗಳೂರು - ಹೊಸ ಟಿನ್ಸುಕಿಯಾ ರೈಲು (05951) ಸೋಮವಾರ ಸಂಚರಿಸಲಿದೆ. ಮೊದಲು 3 ನವೆಂಬರ್ 2025ರವರೆಗೆ ನಿಗದಿಯಾಗಿದ್ದ ಸಂಚಾರವನ್ನು 10 ನವೆಂಬರ್ 2025ರವರೆಗೆ ವಿಸ್ತರಿಸಲಾಗಿದೆ.
ರೈಲ್ವೆ ಪ್ರಯಾಣಿಕರು ಈ ವಿಶೇಷ ರೈಲುಗಳ ಸಮಯ, ಬೋಗಿ, ಸಂಚಾರ ವೇಳಾಪಟ್ಟಿ ಗಮನಿಸಿ ಪ್ರಯಾಣ ಯೋಜಿಸಬೇಕು. ಇತರ ವಿವರಗಳನ್ನು ತಿಳಿಯಲು ಅಧಿಕೃತ ವೆಬ್ಸೈಟ್ www.enquiry.indianrail.gov.in ಗೆ ಭೇಟಿ ನೀಡಬೇಕು. NTES ಆ್ಯಪ್ ಬಳಸಿ ಅಥವಾ 139 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕು.
KSR ರೈಲು ನಿಲ್ದಾಣದಲ್ಲಿ MUTS ನೇಮಕ, ಏನಿದು?
ನೈಋತ್ಯ ರೈಲ್ವೆ ವ್ಯಾಪ್ತಿಯ ಬೆಂಗಳೂರು ವಿಭಾಗವು ಕೆಎಸ್ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಕಾಯ್ದಿರಿಸದ ಟಿಕೆಟ್ಗಳನ್ನು ಪ್ರಯಾಣಿಕರಿಗೆ ನೀಡಲು ಎಂಯುಟಿಎಸ್ (ಮೊಬೈಲ್ ಯುಟಿಎಸ್) ಸಹಾಯಕ್ಗಳನ್ನು ನೇಮಿಸಿಕೊಂಡಿದೆ.
ಈ ಉಪಕ್ರಮದಿಂದ ಪ್ರಯಾಣಿಕರಿಗೆ ಕಾಯ್ದಿರಿಸದ ಟಿಕೆಟ್ಗಳನ್ನು ಬುಕ್ ಮಾಡಲು ಹೆಚ್ಚುವರಿ ಆಯ್ಕೆಯನ್ನು ಒದಗಿಸುತ್ತದೆ. ಕೌಂಟರ್ಗಳಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಯಾಣದ ಅನುಕೂಲವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ನೀವು ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಲಿದೆ. ರೈಲ್ವೆ ಮಂಡಳಿಯ ಎಂಯುಟಿಎಸ್ ಸಹಾಯಕ್ ಪೈಲಟ್ ಯೋಜನೆಗೆ ಆಯ್ಕೆಯಾದ 5 ನಿಲ್ದಾಣಗಳಲ್ಲಿ ಕೆಎಸ್ಆರ್ ಬೆಂಗಳೂರು ಸೇರಿದೆ ಮತ್ತು ಬೆಂಗಳೂರು ವಿಭಾಗ (ಎಸ್ಡಬ್ಲ್ಯುಆರ್) ಇದನ್ನು ಜಾರಿಗೆ ತಂದ ಮೊದಲ ನಿಲ್ದಾಣವಾಗಿದೆ.
ರೈಲ್ವೆ ಇಲಾಖೆಯು ಬೆಂಗಳೂರಿನಲ್ಲಿ ಇತರ ರೈಲ್ವೆ ನಿಲ್ದಾಣಗಳಾದ ಎಸ್ಎಂವಿಟಿ, ಯಶವಂತಪುರ ನಿಲ್ದಾಣಗಳಲ್ಲಿ ಈ ವ್ಯವಸ್ಥೆ ಜಾರಿಗೆ ತರುವ ವಿಶ್ವಾಸ ಇದೆ. ಇದರೊಂದಿಗೆ ಕರ್ನಾಟಕದ ಪ್ರಮುಖ ನಿಲ್ದಾಣಗಳಲ್ಲಿ (ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ ಮತ್ತಿತರರ ಕಡೆ) ಉಪಕ್ರಮ ಜಾರಿಗೊಳಿಸುವ ಚಿಂತನೆಯಲ್ಲಿದೆ.
-
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications