ಸ್ಮಾರ್ಟ್ ಮಲ್ಲೇಶ್ವರಂಗೆ ನೀವು ಸಲಹೆ ನೀಡಬಹುದು
ಬೆಂಗಳೂರು, ಜೂ.22: ಬೆಂಗಳೂರು ಅಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮಲ್ಲೇಶ್ವರಂನ ವೈಭವ, ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ, ಕಡ್ಲೆಕಾಯಿ ಪರಿಷೆ, ಕರಗ, ಚಾಮರಾಜಪೇಟೆ, ಕೆಂಪೇಗೌಡ ಬಸ್ ನಿಲ್ದಾಣ, ಟ್ರಾಫಿಕ್ ನರಕ ... ಹೀಗೆ ನೂರಾರು ವಿಚಾರಗಳು ತಲೆಗೆ ಬರುತ್ತವೆ. ಉತ್ತಮವಾದದ್ದೂ ಇವೆ, ಕೆಟ್ಟವು ಇವೆ.
ಮಲ್ಲೇಶ್ವರಂನ ಕಾಡು ಮಲ್ಲೇಶ್ವರ ದೇವಾಲಯ, ರಾಣಿ ಅಮ್ಮಣ್ಣಿ ಕಾಲೇಜು, ಟಾಟಾ ವಿಜ್ಞಾನ ಸಂಸ್ಥೆ, ಸ್ಯಾಂಕಿ ಕೆರೆ, ಮೈಸೂರು ಲ್ಯಾಂಪ್ಸ್, ಚೌಡಯ್ಯ ಹಾಲ್ ಗಳು ಅದರದ್ದೇ ಆದ ಕಾರಣಕ್ಕೆ ಇಷ್ಟವಾಗುತ್ತವೆ. ಬದಲಾದ ಆಧುನಿಕ ಕಾಲಘಟ್ಟದ ವೇಗಕ್ಕೆ ಮಲ್ಲೇಶ್ವರಂ ಸಹ ಹೊಂದಿಕೊಂಡಿದೆ.[ನಮ್ಮ ಬೆಂಗಳೂರು ಹೀಗಾದರೆ ಚೆನ್ನ.. ವಿಡಿಯೋ ನೋಡಿ]

ಇಂಥ ಮಲ್ಲೇಶ್ವರಂನ್ನು ಮತ್ತಷ್ಟು ಸುಂದರವಾಗಿಸಲು ಶಾಸಕ ಡಾ. ಅಶ್ವತ್ಥ ನಾರಾಯಣ ಕಟಿಬದ್ಧರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ನಾರಾಯಣ ಮಲ್ಲೇಶ್ವರಂ ಉಳಿವಿಗೆ ಜನರಿಂದ ಸಲಹೆ ಕೇಳುತ್ತಿದ್ದಾರೆ. ನೀವು ಮಲ್ಲೇಶ್ವರಂ ನಿವಾಸಿ ಆಗಿದ್ದರೂ ಸರಿ, ಇಲ್ಲಾ ಮಲ್ಲೇಶ್ವರಂ ಪ್ರೀತಿ ಮಾಡುವರಾದರೂ ಸರಿ ನಿಮ್ಮ ಮಾತುಗಳನ್ನು ದಾಖಲು ಮಾಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.[ಮಹಾನಗರಕ್ಕೆ ವೇಷ ಹೊಂದಿಕೆಯಾಗ್ದಿದ್ರೆ ಅಷ್ಟೇ ಕತೆ!]
ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯ ಮುಂದುವರಿದ ಭಾಗವಾಗಿ ಡಾ. ಅಶ್ವತ್ಥ ನಾರಾಯಣ ಇಂಥ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸ್ಮಾರ್ಟ್ ಸಿಟಿಯಾಗಲೂ ಏನೆಲ್ಲ ಬೇಕು? ಯಾವ ಮಾರ್ಪಾಡುಗಳನ್ನು ನೀರಿಕ್ಷೆ ಮಾಡುತ್ತಿದ್ದೀರಿ? ಅಭಿವೃದ್ಧಿಗೆ ನಿಮ್ಮ ಸಲಹೆ ಏನು? ಎಂಬ ಎಲ್ಲ ವಿಚಾರಗಳನ್ನು ದಾಖಲು ಮಾಡಬಹುದು.[ಬೆಂಗಳೂರು: ವಾಸ್ತುದೋಷ ಕಾರಣ, ನೇರಳೆ ಮರದ ಜೀವ ಹರಣ?]
ಇದೆ ಕಾರಣಕ್ಕೆ ಶಾಸಕ ಡಾ. ಅಶ್ವತ್ಥ ನಾರಾಯಣ "ಮೈ ಮಲ್ಲೇಶ್ವರಂ" ಎಂಬ ಫೇಸ್ ಬುಕ್ ಪೇಜ್ ನ್ನು ಶುರುಮಾಡಿದ್ದು ಅಪ್ ಡೇಟ್ ಗಳನ್ನು ನೀಡುತ್ತಲೇ ಬಂದಿದ್ದಾರೆ. ನಿಮ್ಮ ಅಭಿಪ್ರಾಯವನ್ನು ಇಲ್ಲಿ ದಾಖಲು ಮಾಡಬಹುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications