ಸ್ಮಾರ್ಟ್ ಮಲ್ಲೇಶ್ವರಂಗೆ ನೀವು ಸಲಹೆ ನೀಡಬಹುದು
ಬೆಂಗಳೂರು, ಜೂ.22: ಬೆಂಗಳೂರು ಅಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮಲ್ಲೇಶ್ವರಂನ ವೈಭವ, ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ, ಕಡ್ಲೆಕಾಯಿ ಪರಿಷೆ, ಕರಗ, ಚಾಮರಾಜಪೇಟೆ, ಕೆಂಪೇಗೌಡ ಬಸ್ ನಿಲ್ದಾಣ, ಟ್ರಾಫಿಕ್ ನರಕ ... ಹೀಗೆ ನೂರಾರು ವಿಚಾರಗಳು ತಲೆಗೆ ಬರುತ್ತವೆ. ಉತ್ತಮವಾದದ್ದೂ ಇವೆ, ಕೆಟ್ಟವು ಇವೆ.
ಮಲ್ಲೇಶ್ವರಂನ ಕಾಡು ಮಲ್ಲೇಶ್ವರ ದೇವಾಲಯ, ರಾಣಿ ಅಮ್ಮಣ್ಣಿ ಕಾಲೇಜು, ಟಾಟಾ ವಿಜ್ಞಾನ ಸಂಸ್ಥೆ, ಸ್ಯಾಂಕಿ ಕೆರೆ, ಮೈಸೂರು ಲ್ಯಾಂಪ್ಸ್, ಚೌಡಯ್ಯ ಹಾಲ್ ಗಳು ಅದರದ್ದೇ ಆದ ಕಾರಣಕ್ಕೆ ಇಷ್ಟವಾಗುತ್ತವೆ. ಬದಲಾದ ಆಧುನಿಕ ಕಾಲಘಟ್ಟದ ವೇಗಕ್ಕೆ ಮಲ್ಲೇಶ್ವರಂ ಸಹ ಹೊಂದಿಕೊಂಡಿದೆ.[ನಮ್ಮ ಬೆಂಗಳೂರು ಹೀಗಾದರೆ ಚೆನ್ನ.. ವಿಡಿಯೋ ನೋಡಿ]

ಇಂಥ ಮಲ್ಲೇಶ್ವರಂನ್ನು ಮತ್ತಷ್ಟು ಸುಂದರವಾಗಿಸಲು ಶಾಸಕ ಡಾ. ಅಶ್ವತ್ಥ ನಾರಾಯಣ ಕಟಿಬದ್ಧರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ನಾರಾಯಣ ಮಲ್ಲೇಶ್ವರಂ ಉಳಿವಿಗೆ ಜನರಿಂದ ಸಲಹೆ ಕೇಳುತ್ತಿದ್ದಾರೆ. ನೀವು ಮಲ್ಲೇಶ್ವರಂ ನಿವಾಸಿ ಆಗಿದ್ದರೂ ಸರಿ, ಇಲ್ಲಾ ಮಲ್ಲೇಶ್ವರಂ ಪ್ರೀತಿ ಮಾಡುವರಾದರೂ ಸರಿ ನಿಮ್ಮ ಮಾತುಗಳನ್ನು ದಾಖಲು ಮಾಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.[ಮಹಾನಗರಕ್ಕೆ ವೇಷ ಹೊಂದಿಕೆಯಾಗ್ದಿದ್ರೆ ಅಷ್ಟೇ ಕತೆ!]
ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯ ಮುಂದುವರಿದ ಭಾಗವಾಗಿ ಡಾ. ಅಶ್ವತ್ಥ ನಾರಾಯಣ ಇಂಥ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸ್ಮಾರ್ಟ್ ಸಿಟಿಯಾಗಲೂ ಏನೆಲ್ಲ ಬೇಕು? ಯಾವ ಮಾರ್ಪಾಡುಗಳನ್ನು ನೀರಿಕ್ಷೆ ಮಾಡುತ್ತಿದ್ದೀರಿ? ಅಭಿವೃದ್ಧಿಗೆ ನಿಮ್ಮ ಸಲಹೆ ಏನು? ಎಂಬ ಎಲ್ಲ ವಿಚಾರಗಳನ್ನು ದಾಖಲು ಮಾಡಬಹುದು.[ಬೆಂಗಳೂರು: ವಾಸ್ತುದೋಷ ಕಾರಣ, ನೇರಳೆ ಮರದ ಜೀವ ಹರಣ?]
ಇದೆ ಕಾರಣಕ್ಕೆ ಶಾಸಕ ಡಾ. ಅಶ್ವತ್ಥ ನಾರಾಯಣ "ಮೈ ಮಲ್ಲೇಶ್ವರಂ" ಎಂಬ ಫೇಸ್ ಬುಕ್ ಪೇಜ್ ನ್ನು ಶುರುಮಾಡಿದ್ದು ಅಪ್ ಡೇಟ್ ಗಳನ್ನು ನೀಡುತ್ತಲೇ ಬಂದಿದ್ದಾರೆ. ನಿಮ್ಮ ಅಭಿಪ್ರಾಯವನ್ನು ಇಲ್ಲಿ ದಾಖಲು ಮಾಡಬಹುದು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications