ಸಮ್ಮಿಶ್ರ ಸರ್ಕಾರ ಬೀಳಿಸುವುದರಲ್ಲಿ ನನ್ನ ಸಣ್ಣ ಪಾತ್ರ ಇತ್ತು: ಎಸ್ಎಂ ಕೃಷ್ಣ
Recommended Video
ಬೆಂಗಳೂರು, ಡಿಸೆಂಬರ್ 3: ಸಮ್ಮಿಶ್ರ ಸರ್ಕಾರವನ್ನು ಬೀಳಿಸುವುದರಲ್ಲಿ ನನ್ನದು ಸಣ್ಣ ಪಾತ್ರವಿತ್ತು ಎಂದು ಬಿಜೆಪಿ ಹಿರಿಯ ಮುಖಂಡ ಎಸ್ಎಂ ಕೃಷ್ಣ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸರ್ಕಾರ ಬೀಳಿಸಿದ್ದು ನಾನೇ ಅಂತಾ ನಾನು ಎಲ್ಲಿಯೂ ಹೇಳಿಲ್ಲ. ಬೀಳಿಸುವುದರಲ್ಲಿ ನನ್ನ ಸಣ್ಣ ಪಾತ್ರವೂ ಇದೆ ಅಂತಾ ಹೇಳಿದ್ದೆ, ಈಗಲೂ ಅದೇ ಹೇಳುತ್ತೇನೆ ಎಂದರು.
ನಾನೂ ಕೂಡಾ ಬೇರೆ ಸಂಸ್ಕೃತಿಯಲ್ಲಿ ಬೆಳೆದು ಬಂದವನು, ನಾನು ಈಗ ಬಿಜೆಪಿಯಲ್ಲಿ ಒಡನಾಟ ಇಟ್ಟುಕೊಂಡಿದ್ದೇನೋ ಅದೇ ರೀತಿ ಗೆದ್ದು ಬರುವ ಶಾಸಕರು ಪಕ್ಷದಲ್ಲಿ ಒಡನಾಟ ಇಟ್ಟುಕೊಳ್ಳುತ್ತಾರೆ.
ಯಡಿಯೂರಪ್ಪ ಸರ್ಕಾರ ಮೂರೂವರೆ ವರ್ಷ ಪೂರ್ಣಗೊಳಿಸುತ್ತದೆ. ಮಹಾರಾಷ್ಟ್ರದಲ್ಲಿ ಪಕ್ಷಾಂತರ ಮಾಡಿದ ಶಾಸಕರು ಗೆಲ್ಲುವುದಿಲ್ಲ ಎಂಬ ಉದಾಹರಣೆಗೆ ಕರ್ನಾಟಕಕ್ಕೆ ಅನ್ವಯ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮರು ಮೈತ್ರಿ ಬಗ್ಗೆ ಕಾಂಗ್ರೆಸ್-ಜೆಡಿಎಸ್ ನಾಟಕ
ನನ್ನ ಯೋಗಕ್ಷೇಮ ವಿಚಾರಿಸಲು ಬಂದವರೊಂದಿಗೆ ನಾನು ರಾಜ್ಯದ ಯೋಗಕ್ಷೇಮ ಮಾತಾಡಿದ್ದೇನೆ. ಮರು ಮೈತ್ರಿಯ ಬಗ್ಗೆ ಕಾಂಗ್ರೆಸ್, ಜೆಡಿಎಸ್ ನಾಟಕ ಅಂತಾ ಹೇಳಿದ್ದೇನೆ.ವಿಪಕ್ಷದಲ್ಲಿರುವವರು ಒಬ್ಬೊಬ್ಬರು ಒಂದೊಂದು ರೀತಿ ಮಾತಾಡುತ್ತಿದ್ದಾರೆ.ಕೆಲವರಿಗೆ ಮಧ್ಯಂತರ ಚುನಾವಣೆ ಬೇಕು.ಇನ್ನು ಪಕ್ಷ ಬೀಳಿಸುವ ಬಗ್ಗೆ ಮಾತಾಡುತ್ತಿದ್ದಾರೆ. ಆದರೆ ಅವರಿಗೆ ಶಕ್ತಿ ಬೇಕಲ್ವಾ ಎಂದು ಪ್ರಶ್ನಿಸಿದರು.

ನಮ್ಮದು ಯಡಿಯೂರಪ್ಪ ಸರ್ಕಾರ ಗಟ್ಟಿಯಾಗಿಸುವ ಕನಸು
ಯಡಿಯೂರಪ್ಪ ಸರ್ಕಾರವನ್ನು ಗಟ್ಟಿಯಾಗಿಸುವ ಕನಸ್ಸನ್ನು ನಾವು ಕಾಣುತ್ತಿದ್ದೇವೆ, ಆದರೆ ವಿರೋಧ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ನನಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಯಾವುದೇ ವ್ಯಕ್ತಿಗತ ಅಸಮಾಧಾನ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಅವಸರದ ತೀರ್ಮಾನ ಕಾಲಾತೀತ ಆಗುವುದಿಲ್ಲ
ಸಮ್ಮಿಶ್ರ ಸರ್ಕಾರ ಅವಸರದಿಂದ ತೆಗೆದುಕೊಂಡ ತೀರ್ಮಾನ,ಅವಸರದ ತೀರ್ಮಾನ ಕಾಲಾತೀತ ಆಗುವುದಿಲ್ಲ.ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದೆ, ಹಾಗಾಗಿ ತನಿಖೆ ಮುಗಿಯುವವರೆಗೆ ಕಾಯಬೇಕಾಗುತ್ತದೆ ಎಂದರು.

ಮಾಧುಸ್ವಾಮಿ ಜಾತಿ ಆಧಾರದಲ್ಲಿ ಮತ ಕೇಳಿಲ್ಲ
ನನಗೆ ತಿಳಿದಂತೆ ಯಡಿಯೂರಪ್ಪ ಅಥವಾ ಮಾಧುಸ್ವಾಮಿ ಜಾತಿ ಆಧಾರದಲ್ಲಿ ಮತ ಕೇಳಿಲ್ಲ.ನಾವೆಲ್ಲರೂ ಬಿಜೆಪಿಗೆ ಮತ ಕೊಡಿ ಅಂತಾನೇ ಕೇಳುತ್ತೇವೆ.ಬಿಜೆಪಿ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಯಾರಾದರೂ ಹೇಳಿದರೆ ಅದನ್ನು ನಾನು ಸ್ವಾಗತಿಸುತ್ತೇನೆ .ಮಾಜಿ ಪ್ರಧಾನಿ ಬಾಯಿಂದ ಬಂದಿರುವ ಮಾತಿಗೆ ಕಿಮ್ಮತ್ತು ಇರಬೇಕು ಅಂತಾ ನಂಬುವವರಲ್ಲಿ ನಾನೂ ಒಬ್ಬ ಎಂದು ಹೇಳಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications