ಟ್ವಿಟ್ಟರ್ ಖಾತೆ ಹ್ಯಾಕ್, ಗಾಂಧೀಜಿ ಕೊಲೆ ಸಮರ್ಥನೀಯವಲ್ಲ : ಅನಂತಕುಮಾರ್ ಹೆಗಡೆ
ಗಳೂರು, ಮೇ 17: ಬಿಜೆಪಿಯ 'ಉರಿ ನಾಲಗೆ' ಯ ಮುಖಂಡ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ತಮ್ಮ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ಖಾತೆ ಹ್ಯಾಕ್ ಅಗಿತ್ತು ಎಂದಿದ್ದಾರೆ.
ಮಹಾತ್ಮಾ ಗಾಂಧೀಜಿ ಅವರನ್ನು ಕೊಂದ ನಾಥೂರಮ್ ಗೋಡ್ಸೆ ಪರ ಅನೇಕ ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದರು. ಅದರಂತೆ ಅನಂತ್ ಕುಮಾರ್ ಹೆಗಡೆ ಅವರು ಕೂಡಾ ಟ್ವೀಟ್ ಮಾಡಿದ್ದರು. ಸದ್ಯ ಟ್ವೀಟ್ ಡಿಲೀಟ್ ಆಗಿದೆ.
My account was hacked since yesterday. There is no question of justifying Gandhi ji's murder. There can be no sympathy or justification of Gandhi ji's murder. We all have full respect for Gandhi ji's contribution to the nation.
— Chowkidar Anantkumar Hegde (@AnantkumarH) May 17, 2019
ನನ್ನ ಖಾತೆ ಹ್ಯಾಕ್ ಅಗಿದೆ. ಮಹಾತ್ಮಾ ಗಾಂಧೀಜಿ ಅವರ ಕೊಲೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ, ಕೊಲೆಗಾರನ ಬಗ್ಗೆ ಕರುಣೆ ಇಲ್ಲ, ಗಾಂಧೀಜಿ ಅವರ ಬಗ್ಗೆ ಅಪಾರ ಗೌರವವಿದೆ ಹಾಗೂ ದೇಶಕ್ಕೆ ಗಾಂಧೀಜಿ ಕೊಟ್ಟಿರುವ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಆದರೆ, ಇದಕ್ಕೂ ಮುನ್ನ ಮೋದಿಲೈ ಎಂದು ಆಕ್ಸ್ ಫರ್ಡ್ ಡಿಕ್ಷನರಿಯಲ್ಲಿ ಹುಡುಕಿ ಎಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನು ತರಾಟೆಗೆ ತೆಗೆದುಕೊಂಡು ಟ್ವೀಟ್ ಮಾಡಿದ್ದಾರೆ.
ಗೊಡ್ಸೆ, ಗಾಂಧೀಜಿ, ರಾಜೀವ್ ಗಾಂಧಿ ಬಗ್ಗೆ ಹೇಳಿಕೆ, ಟ್ವೀಟ್ ಮೂಲಕ ಪ್ರಜ್ಞಾ ಸಿಂಗ್ ಠಾಕೂರ್, ನಳೀನ್ ಕುಮಾರ್ ಕಟೀಲು ಸದ್ಯ ಟ್ರೆಂಡಿಂಗ್ ನಲ್ಲಿದ್ದಾರೆ. ಈ ನಡುವೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗರಂ ಆಗಿದ್ದು, ವೈಯಕ್ತಿಕ ಅಭಿಪ್ರಾಯಕ್ಕೆ ಆಯಾ ನಾಯಕರೇ ಹೊಣೆ ಎಂದಿದ್ದಾರೆ.
|
ನನ್ನ ಖಾತೆ ಹ್ಯಾಕ್ ಆಗಿದೆ
ನನ್ನ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಮಹಾತ್ಮಾ ಗಾಂಧೀಜಿ ಅವರ ಕೊಲೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ, ಕೊಲೆಗಾರನ ಬಗ್ಗೆ ಕರುಣೆ ಇಲ್ಲ, ಗಾಂಧೀಜಿ ಅವರ ಬಗ್ಗೆ ಅಪಾರ ಗೌರವವಿದೆ ಹಾಗೂ ದೇಶಕ್ಕೆ ಗಾಂಧೀಜಿ ಕೊಟ್ಟಿರುವ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.
|
ಕಳೆದವಾರದಿಂದ ಟ್ವಿಟ್ಟರ್ ವರ್ಕ್ ಆಗ್ತಿಲ್ಲ
ಕಳೆದ ಒಂದು ವಾರದಿಂದ ನನ್ನ ಟ್ವಿಟ್ಟರ್ ಖಾತೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಈ ಬಗ್ಗೆ ನನ್ನ ಟೈಮ್ ಲೈನ್ ನಲ್ಲಿ ಪೋಸ್ಟ್ ಹಾಕಿದ್ದೆ. ನನ್ನ ಹಳೆ ಪೋಸ್ಟ್ ಡಿಲೀಟ್ ಆಗಿದೆ. ನನ್ನ ಹೆಸರಿನಲ್ಲಿ ಬಂದ ಟ್ವೀಟ್ ಗಳ ಬಗ್ಗೆ ವಿಷಾದವಿದೆ.
|
ರಾಹುಲ್ ಗೆ ತರಾಟೆ ತೆಗೆದುಕೊಂಡ ಹೆಗಡೆ
ಮೋದಿಲೈ ಎಂದು ಆಕ್ಸ್ ಫರ್ಡ್ ಡಿಕ್ಷನರಿಯಲ್ಲಿ ಹುಡುಕಿ ಎಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನು ತರಾಟೆಗೆ ತೆಗೆದುಕೊಂಡು ಟ್ವೀಟ್ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮೂರ್ಖ ಕೌಶಲ್ಯ ಮಾಸ್ಟರ್ ನೀವು, ಇದೇ ರೀತಿ ಹುಚ್ಚಾಟ ಮುಂದುವರೆಸಿ ಎಂದು ಗೇಲಿ ಮಾಡಿದ್ದಾರೆ.
|
ನಳೀನ್ ಕುಮಾರ್ ರಿಂದ ಕ್ಷಮೆಯಾಚನೆ
ನನ್ನ ಟ್ವೀಟ್ ಗಳಿಂದ ಯಾರಿಗಾದರೂ ಅದರಿಂದ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಇತ್ತೀಚಿನ ಟ್ವೀಟ್ ನಲ್ಲಿ ಕ್ಷಮೆ ಕೋರಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications