ಬೆಂಗಳೂರಿನ ಇನ್ನೊಂದು ಪ್ರಮುಖ ರಸ್ತೆಗೆ ವರನಟ ರಾಜಣ್ಣನ ಹೆಸರು
ಬೆಂಗಳೂರು, ಏ 11: ನಗರದ ಇನ್ನೊಂದು ಪ್ರಮುಖ ರಸ್ತೆಗೆ ವರನಟ ಡಾ. ರಾಜಕುಮಾರ್ ಹೆಸರು ನಾಮಕರಣ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಧರಿಸಿದೆ.
ಈಗಾಗಲೇ ರಾಜಾಜಿನಗರ ಸುಜಾತಾ ಟಾಕೀಸ್ ವೃತ್ತದಿಂದ ಯಶವಂತಪುರದ ಓರಿಯನ್ ಮಾಲ್ ವರೆಗಿನ ಸುಮಾರು ಎರಡುವರೆ ಕಿಲೋಮೀಟರ್ ರಸ್ತೆಗೆ ಡಾ. ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ.

ಈಗ ಮೈಸೂರು ರಸ್ತೆಯ ನಾಯಂಡಹಳ್ಳಿ ವೃತ್ತದಿಂದ ಪೀಣ್ಯ - ತುಮಕೂರು ರಸ್ತೆಯವರೆಗಿನ ಭಾರೀ ವಾಹನ ದಟ್ಟಣೆಯ ವರ್ತುಲ ರಸ್ತೆಗೆ " ಡಾ. ರಾಜಕುಮಾರ್ ಪುಣ್ಯಭೂಮಿ ರಸ್ತೆ" ಎಂದು ನಾಮಕರಣ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಇದೇ ರಸ್ತೆಯಲ್ಲಿ ರಾಜ್ ಸಮಾಧಿ ಇರುವುದು ಕೂಡಾ. (ರಾಜ್ ನಂತರ ಯಾರು: ಕೋರ್ಟ್)
ಭಾನುವಾರ (ಏ 12) ಬೆಳಿಗ್ಗೆ 10.30ಕ್ಕೆ ನಾಯಿಂಡಹಳ್ಳಿ ವಾರ್ಡ್ 131 ಕಚೇರಿಯಲ್ಲಿ ನಾಮಕರಣ ಸಮಾರಂಭ ನಡೆಯಲಿದೆ ಎಂದು ಬಿಬಿಎಂಪಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ಸಚಿವ ಮತ್ತು ಸಂಸದ ಅನಂತಕುಮಾರ್, ಮೇಯರ್ ಶಾಂತಕುಮಾರಿ, ಉಪಮೇಯರ್ ರಂಗಣ್ಣ, ರಾಜ್ಯ ಸಚಿವರಾದ ಕೆ ಜೆ ಜಾರ್ಜ್, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರೋಷನ್ ಬೇಗ್, ರಾಮಲಿಂಗ ರೆಡ್ಡಿ, ಶಾಸಕರಾದ ಪ್ರಿಯಕೃಷ್ಣ, ಮುನಿರತ್ನ, ಗೋಪಾಲಯ್ಯ, ಸ್ಥಳೀಯ ಕಾರ್ಪೋರೇಟರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಜು ಕುಟುಂಬದ ಪಾರ್ವತಮ್ಮ, ಶಿವಣ್ಣ, ರಾಘವೇಂದ್ರ ರಾಜಕುಮಾರ್ ಮತ್ತು ಪುನೀತ್ ರಾಜಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications