ದಸರಾ ಹಬ್ಬ: KSRTC ನಿಗಮದಿಂದ 2,300ಕ್ಕೂ ಅಧಿಕ ವಿಶೇಷ ಬಸ್ ಕಾರ್ಯಾಚರಣೆ: ನಿಲ್ದಾಣಗಳು ವಿವರ
ಬೆಂಗಳೂರು, ಸೆಪ್ಟಂಬರ್ 21: ಈ ವರ್ಷದ ಮೈಸೂರು ದಸರಾ-2025 ಮಹೋತ್ಸವ ಹಾಗೂ ದಸರಾ ರಜೆಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪ್ರಯಾಣಿಕರ ಸಂಚಾರ ಸೇವೆಗೆಂದು ವಿಶೇಷ ಬಸ್ಗಳ ಕಾರ್ಯಾಚರಣೆ ನಡೆಸಲಿದೆ. ಇಲ್ಲಿ ವೇಗದೂತ, ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್), ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ವೀಪರ್ ಹಾಗೂ ಅಶ್ವಮೇಧ ಬಸ್ಗಳು ಸಂಚರಿಸಲಿವೆ.
KSRTC ಒಟ್ಟು 2,300ಕ್ಕೂ ಹೆಚ್ಚು ವಿಶೇಷ ಬಸ್ಗಳನ್ನು ಬಿಡುಗಡೆ ಮಾಡಿದೆ. ದಸರಾ ರಜೆಗಳ ಸಂದರ್ಭದಲ್ಲಿ ಈ ಬಸ್ಗಳು ಸೆಪ್ಟಂಬರ್ 26, 27 ಮತ್ತು 30ರಂದು ಬೆಂಗಳೂರಿನ ಕೆಂಪೇಗೌಡ, ಮೈಸೂರು ರಸ್ತೆ ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ರಾಜ್ಯದ ಹಾಗೂ ಅಂತಾರಾಜ್ಯದ ಹಲವು ಭಾಗಗಳಿಗೆ ಸಂಚಾರ ನಡೆಸಲಿವೆ. ಅಕ್ಟೋಬರ್ 2 ಮತ್ತು 5ರಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ವಾಪಸ್ಸಾಗಲಿವೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಸರಾ ಬಸ್ಗಳ ಸಂಚಾರ ಮಾರ್ಗ
ಈ KSRTC ವಿಶೇಷ ಬಸ್ಗಳು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಸೇವೆ ನೀಡಲಿವೆ. ಅಷ್ಟು ಮಾತ್ರವಲ್ಲದೇ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿರಾಪಳ್ಳಿ, ಪುದುಕೋಟೆ, ಪಣಜಿ, ಶಿರಡಿ, ಪೂಣೆ, ಏರ್ನಾಕುಲಂ, ಪಾಲಕ್ಕಾಡ್ ಮುಂತಾದ ಅಂತರರಾಜ್ಯ ತಾಣಗಳಿಗೂ ಸಂಚಾರ ನಡೆಸಲಿವೆ.
ಮೈಸೂರು: 610 ವಿಶೇಷ ಬಸ್ಗಳ ಸಂಚಾರ
ಮೈಸೂರಿನ ದಸರಾ ಹಬ್ಬಕ್ಕೆ ವಿವಿಧ ಭಾಗಗಳಿಂದ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮಾತ್ರ 260 ಹೆಚ್ಚುವರಿ ಬಸ್ಗಳು ಸಂಚಾರ ಮಾಡಲಿವೆ. ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ, ಧಾರ್ಮಿಕ ಹಾಗೂ ಪ್ರೇಕ್ಷಣೀಯ ತಾಣಗಳಿಗೆ ಇನ್ನೂ 350 ಹೆಚ್ಚುವರಿ ಬಸ್ಗಳು ಸೇವೆ ನೀಡಲಿವೆ. ಮೈಸೂರಿಗೆ ಸಿಮೀತವಾಗಿ ಒಟ್ಟು 610 ವಿಶೇಷ ಬಸ್ಗಳು ಓಡಾಲಿವೆ.
ಟೂರ್ ಪ್ಯಾಕೇಜ್ ಸೇವೆ ಸಹ ಲಭ್ಯ
ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರಿನಿಂದ ಪ್ರಾರಂಭವಾಗುವ ವಿಶೇಷ ಒಂದು ದಿನದ ಪ್ಯಾಕೇಜ್ ಟೂರ್ಗಳನ್ನು ಕೂಡ KSRTC ವ್ಯವಸ್ಥೆ ಮಾಡಿದೆ. ಅದರಲ್ಲಿ "ಗಿರಿದರ್ಶಿನಿ' ಪ್ರವಾಸ ಪ್ಯಾಕೇಜ್ ಇದೆ. ಇದರಲ್ಲಿ ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗ ಬೆಟ್ಟ, ನಂಜನಗೂಡು, ಚಾಮುಂಡಿ ಬೆಟ್ಟಕ್ಕೆ (ದರ: ವಯಸ್ಕ-₹450 / ಮಕ್ಕಳು-₹300) ಹೋಗಿಬರಬಹುದು.

ಅದೇ ರಿತಿ "ಜಲದರ್ಶಿನಿ' ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ, ರಾಜಾಸೀಟ್, ಹಾರಂಗಿ, ಕೆ.ಆರ್.ಎಸ್.ಗೆ (ದರ: ವಯಸ್ಕ-₹500 / ಮಕ್ಕಳು-₹350), ಮತ್ತು "ದೇವದರ್ಶಿನಿ' ಪ್ಯಾಕೇಜ್ನಡಿ ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ದರ: ವಯಸ್ಕ-₹330/ಮಕ್ಕಳು-₹225)ಗೆ ಹೋಗಿ ಬರಲು ಅನುಕೂಲವಾಗುವಂತೆ ಮೈಸೂರು ಘಟಕದಿಂದ ಏಕ ದಿನದ ಟೂರ್ ಪ್ಯಾಕೇಜ್ ಘೋಷಣೆ ಆಗಿದ್ದು, ಸೆಪ್ಟೆಂಬರ್ 27ರಿಂದ ಅಕ್ಟೋಬರ್ 7ರವರೆಗೆ ಈ ಸೇವೆ ಸಿಗಲಿದೆ.
ಇತರ ಬಸ್ ಸೇವೆಗಳ ಪಟ್ಟಿ ಹೀಗಿದೆ
* ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ "ಫ್ಲೈ ಬಸ್' (FlyBus) ಸೌಲಭ್ಯ ಒದಗಿಸಲಾಗುತ್ತಿದೆ.
* ಮೈಸೂರು ನಗರ ಹಾಗೂ ಗ್ರಾಮಾಂತರ ಬಸ್ ನಿಲ್ದಾಣಗಳಲ್ಲಿ ವಿಶೇಷ "ಮಾಹಿತಿ ಕೇಂದ್ರಗಳು' ಕಾರ್ಯ ನಿರ್ವಹಿಸಲಿವೆ.
* ಮುಂಗಡ ಟಿಕೆಟ್ ಕಾಯ್ದಿರಿಸುವವರಿಗೆ ಶೇಕಡಾ 5ರಷ್ಟು ರಿಯಾಯಿತಿ ಮತ್ತು ಎರಡು ಬದಿ ಟಿಕೆಟ್ ಕಾಯ್ದಿರಿಸಿದರೆ ಶೇಕಡಾ 10ರಷ್ಟು ರಿಯಾಯಿತಿ ಸಿಗಲಿದೆ.
* ಆನ್ಲೈನ್ ಇ-ಟಿಕೆಟ್ಗಳನ್ನು [www.ksrtc.karnataka.gov.in] (http://www.ksrtc.karnataka.gov.in) ವೆಬ್ಸೈಟ್ ಹಾಗೂ ಮೊಬೈಲ್ ಆಪ್ ಮೂಲಕ ಬುಕ್ ಮಾಡಬಹುದು.
* ಬಸ್ಗಳಲ್ಲಿ ಆಸನ ಕಾಯ್ದಿರಿಸಿದವರು ತಮ್ಮ "ಪಿಕ್-ಅಪ್ ಪಾಯಿಂಟ್'ಗಳನ್ನು ಗಮನಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
* ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳ ವಿವಿಧ ಕೌಂಟರ್ಗಳಲ್ಲಿ ಗಣಕೀಕೃತ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಇದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications