Namma Metro: ಪ್ರಯಾಣಿಕರೇ ಗಮನಿಸಿ, ಮೈಸೂರು ರಸ್ತೆ- ಕೆಂಗೇರಿ ಮಾರ್ಗದಲ್ಲಿ ನಾಲ್ಕು ದಿನ ಮೆಟ್ರೋ ಸ್ಥಗಿತ
ನೇರಳೆ ಬಣ್ಣದ ಮಾರ್ಗದಲ್ಲಿ ಪ್ರಯಾಣಿಸುವ ಮೆಟ್ರೋ ಪ್ರಯಾಣಿಕರೇ ಗಮನಿಸಿ, ಬಿಎಂಆರ್ಸಿಎಲ್ ಒಮದು ಸೂಚನೆ ಹೊರಡಿಸಿದ್ದು, ನಾಲ್ಕು ದಿನಗಳು ಈ ಮಾರ್ಗದಲ್ಲಿ ಮೆಟ್ರೋ ಸೇವೆ ದೊರೆಯುವುದಿಲ್ಲ. ವಿವರಗಳಿಗಾಗಿ ಮುಂದೆ ಓದಿರಿ.
ಬೆಂಗಳೂರು, ಜನವರಿ. 24: ಸಿಲಿಕಾನ್ ಸಿಟಿಯಲ್ಲಿ ಮೆಟ್ರೋ ಒಂಥರಾ ಜೀವನಾಡಿ ಎನ್ನುವಂತಾಗಿದೆ. ಪ್ರತಿದಿನ ಲಕ್ಷಾಂತರ ಜನರು ಮೆಟ್ರೋ ಮೂಲಕ ಪ್ರಯಾಣಿಸುತ್ತಾರೆ. ಮೆಟ್ರೋ ಸಂಚಾರವನ್ನು ಮತ್ತಷ್ಟು ವಿಸ್ತರಿಸಲಾಗುತ್ತಿದ್ದು, ಇದೇ ಹಿನ್ನೆಲೆ ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ನಮ್ಮ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕೆಂಗೇರಿಯಿಂದ ಚಲ್ಲಘಟ್ಟ ಮಾರ್ಗದ ವಿಸ್ತರಣೆ ಕಾಮಗಾರಿಗೆ ಸಂಬಂಧಿಸದಂತೆ ಜನವರಿ 27 ರಿಂದ ಕೆಲಸ ಆರಂಭವಾಗುತ್ತಿದ್ದು, ನಾಲ್ಕು ದಿನಗಳ ಕಾಲ ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ನಮ್ಮ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
"ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಸಂಬಂಧಿಸಿದ ನಿಯೋಜಿತ ಕಾಮಗಾರಿಗಳಿಗಾಗಿ, ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳನ್ನು ದಿನಾಂಕ ಜನವರಿ 27 (ಶುಕ್ರವಾರ) ದಿಂದ ಜನವರಿ 30 (ಸೋಮವಾರ) ದವರೆಗೆ, ಎರಡೂ ದಿನಗಳು ಒಳಗೊಂಡಂತೆ 4 ದಿನಗಳ ಅವಧಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು" ಎಂದು ಬಿಎಂಆರ್ಸಿಎಲ್ ಸೂಚನೆ ಹೊರಡಿಸಿದೆ.

ಆದರೆ, ಈ ದಿನಗಳಲ್ಲಿ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿವರೆಗಿನ ಮಾರ್ಗದಲ್ಲಿ ರೈಲು ಸೇವೆಗಳು 31ನೇ ಜನವರಿ 2023 ರಿಂದ ಬೆಳೆಗೆ 5.00 ಗಂಟೆಯಿಂದ ವೇಳಾಪಟ್ಟಿಯ ಪುಕಾರ ಪುನರಾರಂಭಿಸಲಾಗುತ್ತದೆ.

ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮೆಟ್ರೋ ರೈಲುಗಳು ವೇಳಾಪಟ್ಟಿಯ ಪ್ರಕಾರ ಚಲಿಸಲಿವೆ. ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಣಾ ಮಾರ್ಗದ ಕಾಮಗಾರಿಗಳನ್ನು ತ್ವರಿತಗೊಳಿಸಲು ಸಹಕರಿಸಬೇಕಾಗಿ ವಿನಂತಿ ಎಂದು ಮೆಟ್ರೋ ಪ್ರಯಾಣಿಕರಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಮನವಿ ಮಾಡಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications