ಸೆಪ್ಟೆಂಬರ್ನಿಂದ ಮಾಗಡಿ ರಸ್ತೆ-ಮೈಸೂರು ರಸ್ತೆ ಮೆಟ್ರೋ ಸಂಚಾರ
ಬೆಂಗಳೂರು, ಆ.27 : ಮಾಗಡಿ ರಸ್ತೆ-ನಾಯಂಡಹಳ್ಳಿ ಜಂಕ್ಷನ್ ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಮಾರ್ಗದಲ್ಲಿ ರೈಲು ಸುರಕ್ಷತಾ ಆಯುಕ್ತರು ಪರಿಶೀಲನೆ ಕಾರ್ಯ ಆರಂಭಿಸಿದ್ದಾರೆ. ಸೆಪ್ಟೆಂಬರ್ನಲ್ಲಿ ಈ ಮಾರ್ಗ ಜನರ ಸಂಚಾರಕ್ಕೆ ಮುಕ್ತವಾಗುವುದು ಖಾತ್ರಿಯಾಗಿದೆ.
ಆ.26ರ ಬುಧವಾರದಿಂದ ಮಾಗಡಿ ರಸ್ತೆ-ನಾಯಂಡಹಳ್ಳಿ ನಡುವಿನ 6.4 ಕಿ.ಮೀ ಮಾರ್ಗದಲ್ಲಿ ರೈಲು ಸುರಕ್ಷತಾ ಆಯುಕ್ತರು (ಎಂಸಿಆರ್ಎಸ್) ಪರಿಶೀಲನೆ ಕಾರ್ಯ ಆರಂಭಿಸಿದ್ದಾರೆ. ಮೂರು ದಿನಗಳ ಕಾಲ ಆಯುಕ್ತರು ಪರಿಶೀಲನೆ ನಡೆಸಲಿದ್ದು, ನಂತರ ಸಾರ್ವಜನಿಕ ಸಂಚಾರಕ್ಕೆ ಒಪ್ಪಿಗೆ ನೀಡಲಿದ್ದಾರೆ. [ಮಾಗಡಿ ರಸ್ತೆ-ಮೈಸೂರು ರಸ್ತೆ ಮೆಟ್ರೋ ರೈಲು ಸಂಚಾರಕ್ಕೆ ಸಿದ್ಧ]

ಮಾರ್ಗದಲ್ಲಿನ ಸುರಕ್ಷತೆ ಬಗ್ಗೆ ವಿವಿಧ ಅಂಶಗಳ ಕುರಿತು ಪರಿಶೀಲನೆ ನಡೆಸುವ ಆಯುಕ್ತರು ಒಂದು ಅಥವ ಎರಡು ವಾರದಲ್ಲಿ ಸುರಕ್ಷತಾ ಪತ್ರವನ್ನು ನೀಡಲಿದ್ದಾರೆ. ಸುರಕ್ಷತಾ ಪತ್ರ ಸಿಕ್ಕರೆ ಸಾರ್ವಜನಿಕ ಸಂಚಾರಕ್ಕೆ ಅನುಮತಿ ಸಿಕ್ಕಿದಂತೆಯೇ. ನಂತರ ಸರ್ಕಾರ ಉದ್ಘಾಟನೆ ದಿನಾಂಕ ನಿಗದಿಪಡಿಸಲಿದೆ. [ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ವಿವರಗಳು]
6 ನಿಲ್ದಾಣಗಳಿವೆ : ಮಾಗಡಿ ರಸ್ತೆ-ನಾಯಂಡಹಳ್ಳಿ ನಡುವಿನ 6.4 ಕಿ.ಮೀ ಮಾರ್ಗದಲ್ಲಿ ಮಾಗಡಿ ರಸ್ತೆ, ಹೊಸಹಳ್ಳಿ, ವಿಜಯನಗರ, ಅತ್ತಿಗುಪ್ಪೆ, ದೀಪಾಂಜಲಿ ನಗರ, ಮೈಸೂರು ರಸ್ತೆ ನಿಲ್ದಾಣಗಳಿವೆ.

ಈಗಾಗಲೇ ನಮ್ಮ ಮೆಟ್ರೋ ರೈಲು ಎಂ.ಜಿ.ರಸ್ತೆ ಬೈಯಪ್ಪನಹಳ್ಳಿ ಮತ್ತು ಸಂಪಿಗೆ ರಸ್ತೆ ನಾಗಸಂದ್ರ ನಡುವೆ ಸಂಚಾರ ನಡೆಸುತ್ತಿದೆ. ಈ ಮಾರ್ಗದ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾದರೆ ಮೊದಲ ಹಂತದ ಮೆಟ್ರೋ ಯೋಜನೆಯ ಮೂರನೇ ಮಾರ್ಗ ಉದ್ಘಾಟನೆಯಾದಂತಾಗುತ್ತದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications