ರೋಷನ್ ಬೇಗ್ ಅಮಾನತು, ತಕ್ಕ ಶಾಸ್ತಿ ಎಂದ ಹ್ಯಾರಿಸ್
ಬೆಂಗಳೂರು, ಜೂನ್ 19: ಕಾಂಗ್ರೆಸ್ ಪಕ್ಷದಿಂದ ರೋಷನ್ ಬೇಗ್ ಅವರನ್ನು ಅಮಾನತು ಮಾಡಿದ ಅಖಿಲ್ ಭಾರತ ಕಾಂಗ್ರೆಸ್ ಪಕ್ಷ(ಎಐಸಿಸಿ) ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಬೆಂಗಳೂರಿನ ಶಾಂತಿನಗರ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಗುರುತಿಸಿಕೊಂಡ ಕಾರಣಕ್ಕೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ಅಮಾನತು ಮಾಡಲಾಗಿತ್ತು.
ರೋಷನ್ ಬೇಗ್ ವಿರುದ್ಧ ಹೈಕಮಾಂಡಿಗೆ ದೂರು ಸಲ್ಲಿಸಿದ ಕೆಪಿಸಿಸಿ
ಸತತ ಎಚ್ಚರಿಕೆಗಳನ್ನು ನೀಡಿದ್ದರೂ ಮತ್ತು ಶೋಕಾಸ್ ನೋಟಿಸ್ ಕೊಟ್ಟಿದ್ದರೂ ಅವುಗಳನ್ನು ನಿರ್ಲಕ್ಷಿಸಿ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುವುದನ್ನು ಬೇಗ್ ಮುಂದುವರಿಸಿದ್ದರು. ಈ ಕಾರಣ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಕೆಪಿಸಿಸಿಗೆ ಎಐಸಿಸಿ ಅನುಮತಿ ನೀಡಿದೆ.
ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್ನಿಂದ ರೋಷನ್ ಬೇಗ್ ಅಮಾನತು
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಹ್ಯಾರಿಸ್, "ಕಾಂಗ್ರೆಸ್ ಪಕ್ಷದ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಒಬ್ಬ ಹಿರಿಯ ನಾಯಕರಾಗಿ ಅವರು ಪಕ್ಷದ ನಿಯಮ, ಶಿಸ್ತನ್ನು ಉಲ್ಲಂಘಸಿದ್ದಷ್ಟೇ ಅಲ್ಲ, ಪಕ್ಶಃದ ವಿರುದ್ಧ ಕೆಲಸ ಮಾಡಿದ್ದಾರೆ. ಆತನ ನಡೆ ಅಕ್ಷಮ್ಯ. ಕಾಂಗ್ರೆಸ್ ಎಂದಿಗೂ ಜನರಿಗಾಗಿ ಕೆಲಸಮಾಡಲು ಬಯಸುತ್ತದೆ" ಎಂದು ಹ್ಯಾರಿಸ್ ಹೇಳಿದ್ದಾರೆ.