ಬೆಂಗಳೂರು ಉಳಿವಿಗಾಗಿ ನಾಗರಿಕರು, ಜನಪ್ರತಿನಿಧಿಗಳ ಒಂದು ಸಂವಾದ
ಬೆಂಗಳೂರು, ಸೆಪ್ಟೆಂಬರ್ 22: ಯುನೈಟೆಡ್ ಬೆಂಗಳೂರು ಸಂಸ್ಥೆಯು ಬೆಂಗಳೂರಿನ ಉಳಿವಿಗಾಗಿ 'ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ನಾಗರಿಕರ ಸಂವಾದ' ವನ್ನು ಸೆ.29ರಂದು ಶನಿವಾರ ಇಂದಿರಾನಗರ ಕ್ಲಬ್ನಲ್ಲಿ ಹಮ್ಮಿಕೊಂಡಿದೆ.
ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಿಗಳು, ಗೃಹಿಣಿಯರು ಯಾರು ಬೇಕಾದರೂ ಈ ಸಂವಾದದಲ್ಲಿ ಪಾಲ್ಗೊಳ್ಳಬಹುದಾಗಿದೆ, ಈ ಬೆಂಗಳೂರಿನ ಭವಿಷ್ಯವನ್ನು ಉತ್ತಮವಾಗಿಸಲು ಎಲ್ಲರೂ ಪಾಲುದಾರರು ಎಂದು ಸಂಸ್ಥೆ ಹೇಳಿದೆ.
ಬೆಂಗಳೂರಿನ ಉಳಿವಿಗಾಗಿ “ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಬೆಂಗಳೂರು ನಾಗರೀಕರ ಸಂವಾದ” ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಶನಿವಾರ, 29 ಸೆಪ್ಟೆಂಬರ್ 2018ಕ್ಕೆ ಮುಂದೂಡಲಾಗಿದೆ.
— United Bengaluru (@unitedbengaluru) September 19, 2018
ಸ್ಥಳ: ಇಂದಿರಾನಗರ ಕ್ಲಬ್
ಸಮಯ: ಬೆಳಗ್ಗೆ 10 ಗಂಟೆ
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
+91-8861768806
+91-9591143888#ReclaimBengaluru pic.twitter.com/PVi1DeEvpZ
ಜನವಸತಿ ಪ್ರದೇಶಗಳಲ್ಲಿನ ಅಕ್ರಮ ವಾಣಿಜ್ಯೀಕರಣಸಿಂದ ವಾಯುಮಾಲಿನ್ಯ, ಶಬ್ದ ಮಾಲಿನ್ಯದಿಂದ ನಾಗರಿಕರ ಬದುಕನ್ನು ಕಸಿಯುತ್ತಿದೆಯೇ? ಬಾರ್ ಮತ್ತು ರಾತ್ರಿ ಕ್ಲಬ್ ಗಳ ಹಾವಳಿಯಿಂದ ಜನರಿಗೆ ತೊಂದರೆಯಾಗುತ್ತಿದೆಯೇ ಹೀಗೆ ವಿವಿಧ ವಿಚಾರಗಳ ಕುರಿತು ಜನಪ್ರತಿನಿಧಿಗಳ ಜೊತೆ ಮುಕ್ತವಾಗಿ ಮಾತನಾಡಬಹುದಾಗಿದೆ. ಸೆ.29ರಂದು ಶನಿವಾರ ಇಂದಿರಾನಗರ ಕ್ಲಬ್ನಲ್ಲಿ ಬೆಳಗ್ಗೆ 10 ಗಂಟೆಗೆ ಸಂವಾದ ನಡೆಯಲಿದೆ.

ಇದನ್ನು ಹೊರತುಪಡಿಸಿ ಇನ್ಯಾವುದೇ ತೊಂದರೆಗಳಿದ್ದರೂ ಮುಕ್ತವಾಗಿ ಹಂಚಿಕೊಳ್ಳಬಹುದಾಗಿದೆ, ಇತ್ತೀಚೆಗೆ ಇಂದಿರಾನಗರದಲ್ಲಿ ಅನಧಿಕೃತ ಕ್ಲಬ್ಗಳ ಹಾವಳಿಯಿಂದ ಬೇಸತ್ತಿದ್ದ ನಾಗರಿಕರು ಪೊಲೀಸರಿಗೆ ದೂರು ನೀಡಿದ್ದರು ಈ ಹಿನ್ನೆಲೆಯಲ್ಲಿ ಪೊಲೀಸರು ಹಲವು ಕ್ಲಬ್ ಗಳ ಮೇಲೆ ದಾಳಿ ನಡೆಸಿ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಸುತ್ತಿದ್ದ ಕ್ಲಬ್ ಗಳಿ ಬೀಗ ಹಾಕಿತ್ತು.
ಅಷ್ಟೇ ಅಲ್ಲದೆ ಕ್ಲಬ್ಗಳಲ್ಲಿ ಲೈವ್ ಬ್ಯಾಂಡ್ ನಿಷೇಧಿಸುವಂತೆ ಕೂಡ ಮನವಿ ಮಾಡಿ ಹಲವು ಕಡೆ ನಾಗರಿಕರು ಪ್ರತಿಭಟನೆ ನಡೆಸಿದ್ದರು. ಯುನೈಟೆಡ್ ಬೆಂಗಳೂರು ಇದೀಗ ನಾಗರಿಕರಿಗೆ ಒಂದು ಅವಕಾಶ ಮಾಡಿಕೊಟ್ಟಿದ್ದು ಏನೇ ಸಮಸ್ಯೆಗಳಿದ್ದರೂ ಜನಪ್ರತಿನಿಧಿಗಳಲ್ಲಿ ಹೇಳಿಕೊಳ್ಳಬಹುದಾಗಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications