ಖಾಸಗಿ ಶಾಲೆಗಳಲ್ಲಿ 'ಜಯ ಭಾರತ ಜನನಿಯ ತನುಜಾತೆ' ಎನ್ನುವುದು ಕಡ್ಡಾಯವಲ್ಲ: ಕರ್ನಾಟಕ ಸರ್ಕಾರ
ಬೆಂಗಳೂರು, ಫೆಬ್ರವರಿ.21: ರಾಜ್ಯದ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇತ್ತೀಚೆಗೆ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನು ಬೇರೆ ರೀತಿಯಲ್ಲಿ ಬರೆದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ ಸರ್ಕಾರ ಮತ್ತೊಂದು ವಿವಾದಿತ ಆದೇಶ ನೀಡಿದೆ.
ಖಾಸಗಿ ಶಾಲೆಗಳಿಗೆ ನಾಡಗೀತೆಯಾದ ರಾಷ್ಟ್ರಕವಿ ಕುವೆಂಪು ವಿರಚಿತ 'ಜಯ ಭಾರತ ಜನನಿಯ ತನುಜಾತೆ' ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂಬರ್ಥದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.

ಈ ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿರುವುದು ಇದೀಗ ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರದ ಈ ನಡೆ ಕೂಡ ಭಾರೀ ವಿರೋಧಕ್ಕೆ ಗುರಿಯಾಗುವ ಸಾಧ್ಯತೆಗಳಿವೆ. ಕಾಂಗ್ರೆಸ್ ಸರ್ಕಾರದಿಮದ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಈಗಾಗಲೇ ಕಿಡಿ ಕಾರುತ್ತಿರುವ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

"ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ "ಜಯ ಭಾರತ ಜನನಿಯ ತನುಜಾತೆ" ಕವನವನ್ನು 'ನಾಡಗೀತೆ'ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸಧ 2003, ದಿನಾಂಕ:07-01-2004ರ ಹಾಗೂ ತಿದ್ದುಪಡಿ ದಿನಾಂಕ:01-02-2024ರ ಅನ್ವಯ "(ಇ) ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು" ಎಂಬುದರ ಬದಲಾಗಿ "(ಇ) ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು" ಎಂದು ತಿದ್ದಿ ಓದಿಕೊಳ್ಳತಕ್ಕದ್ದು" ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ











Click it and Unblock the Notifications