ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಸದಸ್ಯರ ನೇಮಕ

|
Google Oneindia Kannada News

ಬೆಂಗಳೂರು, ಜನವರಿ 22: ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶಿತ ಸದಸ್ಯರ ನೇಮಕ ಮಾಡಿ ಕರ್ನಾಟಕ ಸರ್ಕಾರ ಶುಕ್ರವಾರ (ಜನವರಿ 22)ದಂದು ಆದೇಶ ನೀಡಿದೆ.

ಒಟ್ಟು 6 ಸದಸ್ಯರ ನೇಮಕ ಮಾಡಲಾಗಿದೆ. ಹೊಸ ಸದಸ್ಯರ ಹೆಸರುಗಳು ಹೀಗಿವೆ:

ತಲಕಾಡು ಚಿಕ್ಕರಂಗೇಗೌಡ, ಗಂಗಹನುಮಯ್ಯ, ಎನ್. ಮುನಿರಾಜುಗೌಡ, ಡಾ. ಎಚ್‌.ಎಂ. ಕೃಷ್ಣಮೂರ್ತಿ, ಡಾ. ಶೇಖ್ ಮಸ್ತಾನ್ ಹಾಗೂ ರಂಗಸ್ವಾಮಿ.

Nadaprabhu Kempegowda Heritage Site Development Authority gets new members

ಮುಂದಿನ ಮೂರು ವರ್ಷ ಅಥವಾ ಸರ್ಕಾರದ ಮುಂದಿನ ಆದೇಶದ ವರೆಗೆ ನಾಮನಿರ್ದೇಶಿತ ಸದಸ್ಯರಾಗಿ ಮುಂದುವರೆಯಲಿದ್ದಾರೆ.

ನಾಡಪ್ರಭು ಕೆಂಪೇಗೌಡರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮವನ್ನು ವಿಶ್ವದರ್ಜೆಯ ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಲು 35 ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ಸಿದ್ಧಪಡಿಸಲಾಗಿದೆ.

Recommended Video

ರಾಜ್ಯದಲ್ಲಿ ಗಣಿಗಾರಿಕೆ ಅವಶ್ಯಕತೆ ಇದೆ, ಆದ್ರೆ illegal mining ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- CM BSY | Oneindia Kannada

ಇದೇ ರೀತಿ ಕೆಂಪೇಗೌಡರಿಗೆ ಸಂಬಂಧಿಸಿದ ಸುಮಾರು 46 ತಾಣಗಳನ್ನು ಅನುಸಂಧಾನಗೊಳಿಸಿ ಅವರ ಸಾಧನೆಗಳನ್ನು ಅಜರಾಮರಗೊಳಿಸಬೇಕು ಎಂಬುದೇ ಸರಕಾರದ ಆಶಯವಾಗಿದೆ.

English summary
Nadaprabhu Kempegowda Heritage Site Development Authority gets six new nominated members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X