ನಾಗ ಪಂಚಮಿ ನಿಮಿತ್ತ ಹೊಸಕೆರಹಳ್ಳಿಯಲ್ಲಿ ನಾಗಾರಾಧನೆ
ಬೆಂಗಳೂರು, ಜುಲೈ, 25 : ಹಬ್ಬಗಳ ಮಾಸ ಆರಂಭವಾಗುತ್ತಿದೆ. ನಾಡಿಗೆ ದೊಡ್ಡದು ಎಂದು ಕರೆಸಿಕೊಳ್ಳುವ ನಾಗರ ಪಂಚಮಿಯೂ ಜುಲೈ 27 ಗುರುವಾರ ಎದುರಾಗಿದೆ.
ಆಚಾರ್ಯ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ಹೊಸಕೆರೆಹಳ್ಳಿ ದತ್ತಾತ್ರೇಯ ನಗರದ ದತ್ತಾತ್ರೇಯ ದೇವಾಲಯದಲ್ಲಿ ನಾಗರ ಪಂಚಮಿ ನಿಮಿತ್ತ ಆಶ್ಲೇಷಾ ಬಲಿ, ನಾಗ ತನು ತರ್ಪಣ, ನಾಗ ಸುಬ್ರಹ್ಮಣ್ಯಾರಾಧನೆ ನಡೆಯಲಿದೆ.

ದೃಷ್ಟಿ ದೋಷ, ಚರ್ಮ ರೋಗ, ಸಂತಾನ ಹೀನತೆ, ಕುಟುಂಬದ ಸಾಮರಸ್ಯ, ಸಂಪತ್ತು ವೃದ್ಧಿ ಮುಂತಾದ ಕಾರಣಗಳ ಪರಿಹಾರಕ್ಕೋಸ್ಕರ ಭಕ್ತರು ಆದಿಶೇಷನ ಕೃಪೆಗೆ ಪಾತ್ರರಾಗಬಹುದು.
ಬೆಳಗ್ಗೆ 8 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದೆ. ಭಕ್ತರು ನಾಗ ದೇವತೆಯ ಕೃಪೆಗೆ ಪಾತ್ರರಾಗಲು ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಪ್ರಧಾನ ಆಚಾರ್ಯ ರಾಘವೇಂದ್ರ ಹೆಗಡೆ 9986201603 ಮತ್ತು 8618640463 ಸಂಪರ್ಕಿಸಬಹುದು.
ನಾಗರಪಂಚಮಿ ಅಥವಾ ಪಂಚಮಿ ಹಬ್ಬ ವಿಶೇಷವಾಗಿ ಹಾವಿನ ಹುತ್ತಕ್ಕೆ ಹಾಲೆರೆಯುವುದು ಸಂಪ್ರದಾಯ. ಆ ಹಾಲನ್ನು ನಾಗರ ಹಾವು ಸೇವಿಸುತ್ತದೆ ಎನ್ನುವುದು ಬಲವಾದ ನಂಬಿಕೆ. ಈ ಹಬ್ಬವನ್ನು ಶ್ರಾವಣಮಾಸ ಆರಂಭವಾದ 5ನೇ ದಿನಕ್ಕೆ ಆಚರಿಸುತ್ತಾರೆ.
ನಾಗರ ಪಂಚಮಿ ದಿನದಂದು ಮಹಿಳೆಯರು ನಾಗರ ಪ್ರತಿಮೆಗೆ ವಿವಿಧ ರೀತಿಯಲ್ಲಿ ಪೂಜಾ ಕಾರ್ಯಗಳನ್ನು ಮಾಡುತ್ತಾರೆ. ಜತೆಗೆ ನೂತನವಾಗಿ ಮದುವೆಯಾಗಿರುವ ಹೆಣ್ಣು ಮಕ್ಕಳು ತವರಿಗೆ ಬಂದು ಪಂಚಮಿ ಹಬ್ಬವನ್ನು ಆಚರಿಸುವುದು ರೂಢಿ. ಈ ಹಬ್ಬವನ್ನು ಸಹೋದರ-ಸಹೋದರಿಯರ ಹಬ್ಬ ಎಂದು ಕರೆಯಲಾಗುತ್ತದೆ. ತಂಗಿಯರು ತಮ್ಮ ಅಣ್ಣನಿಗೆ ಪ್ರೀತಿಯಿಂದ ಹಾರೈಸುವುದು. ಅಣ್ಣನಾದವನು ತಂಗಿಗೆ ಪ್ರೀತಿಯ ಪ್ರತೀಕವಾಗಿ ಉಡುಗೊರೆ ನೀಡುವುದು ಹಲವು ಕಡೆಗಳಲ್ಲಿ ಕಂಡು ಬರುವ ಆಚರಣೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ












Click it and Unblock the Notifications