ಡಾ.ಮಂಜುನಾಥ್ ನಿಮಗಿದು ಬೇಕಿತ್ತೆ?: ಸಮಾಜ ಕಟ್ಟಲು ಸಾವಿರ ದಾರಿ: ನಾಗತಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಮಾರ್ಚ್ 16: ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರ ಅಳಿಯನು ಆಗಿರುವ ಬೆಂಗಳೂರು ಜಯದೇವ ಹೃದ್ರೋಗ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ರಾಜಕೀಯ ಪ್ರವೇಶ ಕುರಿತು ಸಾಹಿತಿ, ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಡಾ. ಸಿ.ಎನ್. ಮಂಜುನಾಥ್ ಅವರ ರಾಜಕೀಯ ಪ್ರವೇಶ ಕುರಿತು ಇತ್ತೀಚೆಗೆ (ಮಾರ್ಚ್ 14) ಟ್ವೀಟ್ ಮಾಡಿರುವ ನಾಗತಿಹಳ್ಳಿ ಚಂದ್ರಶೇಖರ್ ಅವರು, ಅವರ ರಾಜಕೀಯ ಪ್ರವೇಶ ದುರದೃಷ್ಟಕರ ಎಂದು ವಿಷಾಧಿಸಿ, ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.

ಪೋಸ್ಟ್ನಲ್ಲಿ, 'ನಮ್ಮ ಪ್ರೀತಿಯ ವೈದ್ಯ...ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ. ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ? ಸಮಾಜವನ್ನು ಕಟ್ಟಲು ಸಾವಿರ ದಾರಿಗಳಿವೆ. ಮಂಜುನಾಥ್ ಇದು ನಿಮಗೆ ಬೇಕಿತ್ತೆ?' ಎಂದು ಬರೆದಿದ್ದಾರೆ.
ನಮ್ಮ ಪ್ರೀತಿಯ ವೈದ್ಯ
— Nagathihalli Chandrashekara (@NomadChandru) March 14, 2024
ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ. ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ?ಸಮಾಜವನ್ನು ಕಟ್ಟಲು ಸಾವಿರ ದಾರಿಗಳಿವೆ. ಮಂಜುನಾಥ್ ಇದು ನಿಮಗೆ ಬೇಕಿತ್ತೆ?
ರಾಜಕೀಯದಲ್ಲಿ ಎಲ್ಲ ಕಳೆದುಕೊಳ್ಳಬಹುದೆನೋ?
ಈ ಮೂಲಕ ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿಯಲ್ಲ. ಈ ದಾರಿ ನಿಮಗೆ ಬೇಕಿತ್ತೆ? ಎಂದು ಅವರನ್ನು ಪ್ರಶ್ನೆ ಮಾಡಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಅವರು ಅಪಾರ ಹೆಸರು ಮಾಡಿದವರು. ಅವರ ಹೆಸರು ಎಲ್ಲರಿಗೂ ಚಿರಪರಿಚಿತ. ವೈದ್ಯ ಲೋಕದಲ್ಲಿ ತಮ್ಮದೇ ಆದ ಹಾದಿಯಲ್ಲಿ ಸೇವೆಯ ಹೆಗ್ಗುರುತು ಮೂಡಿಸಿದವರು.

ಡಾ.ಸಿ.ಎನ್ ಮಂಜುನಾಥ್ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣ್ಣಕ್ಕಿಳಿದಿದ್ದಾರೆ. ವೈದ್ಯ ಕ್ಷೇತ್ರದಲ್ಲಿ ಅಪಾರ ಜನಮನ್ನಣೆ, ಹೆಸರು ಪಡೆದ ಇವರು ರಾಜಕೀಯದಲ್ಲಿ ಎಲ್ಲ ಕಳೆದುಕೊಳ್ಳಬಹುದೇನೋ ಎಂಬುದರ ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿದ್ದಾರೆ.
ರಾಜಕೀಯಕ್ಕೆ ಬರುವುದು ಸರಿಯಲ್ಲ: ಮಾವ ದೇವೇಗೌಡ
ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ.ಸಿ.ಎನ್. ಮಂಜುನಾಥ್ ಅವರು ನಿವೃತ್ತರಾಗುತ್ತಿದ್ದಂತೆ ಲೋಕಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡಿತು. ಈ ಕುರಿತು ಅವರ ಮಾವನವರಾದ ಹಾಗೂ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರೇ ಸಲಹೆ ನೀಡಿದ್ದರು.
ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಅಪಾರವಾಗಿ ಹೆಸರು ಮಾಡಿರುವ ಡಾ.ಸಿ.ಎನ್. ಮಂಜುನಾಥ್ ಅವರು ರಾಜಕಾರಣಕ್ಕೆ ಬರುವುದು ಸರಿಯಲ್ಲ ಎಂದು ತಿಳಿಸಿದ್ದರು. ಅವರಿಗೆ ಒಂದೊಳ್ಳೆ ಸ್ಥಾನವಿದೆ. ಅವರಿಗೆ ರಾಜಕಾರಣ ಬೇಡ ಎಂದಿದ್ದರು.
ಮೊದಲ ಮಂಡ್ಯದಿಂದ ಸಿ.ಎನ್. ಮಂಜುನಾಥ್ ಅವರ ಹೆಸರು ಕೇಳಿ ಬಂದಿತ್ತು. ನಂತರ ಅವರನ್ನು ಕಾಂಗ್ರೆಸ್ ಭದ್ರಕೋಟೆಯಾದ ಡಿಕೆ ಸುರೇಶ್ ಅವರು ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಬಿಜೆಪಿ ಟಿಕೆಟ್ ನೀಡಲಾಯಿತು. ಈ ಮೂಲಕ ಇಲ್ಲಿನ ಆಕಾಂಕ್ಷಿಗಳಲ್ಲಿ ಉಂಟಾಗಿದ್ದ ಗೊಂದಲಕ್ಕೆ ಬಿಜೆಪಿ ತೆರೆ ಎಳೆಯಲಾಯಿತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications