ನಾಗೇಂದ್ರ, ಸತೀಸ್ ಸೈಲ್ ಅಧಿವೇಶನಕ್ಕೆ ಹೋಗಬಹುದು!
ಬೆಂಗಳೂರು, ನ. 27 : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕರಲ್ಲಿ ಇಬ್ಬರಿಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಸಿಬಿಐ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ. ಕಾರವಾರ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮತ್ತು ಕೂಡ್ಲಿಗಿ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಅಧಿವೇಶನದಲ್ಲಿ ಭಾಗವಹಿಸಬಹುದು.
ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಕೋರಿ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಶ್ರೀಶಾನಂದ ಅವರು, ಇಬ್ಬರು ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ನೀಡಿದರು. ಒಟ್ಟು ನಾಲ್ವರು ಶಾಸಕರನ್ನು ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಬಂಧಿಸಲಾಗಿತ್ತು.(ಶಾಸಕ ಸತೀಶ್ ಗೆ ತಾತ್ಕಾಲಿಕ ಬೇಲ್, ನಾಗೇಂದ್ರಗೆ ಜೈಲ್)

ಇಬ್ಬರು ಶಾಸಕರಿಗೂ ತಲಾ ಮೂವರು ಪೊಲೀಸರ ಭದ್ರತೆ ಕಲ್ಪಿಸಬೇಕು. ನಾಗೇಂದ್ರ ತಮ್ಮ ಖಾಸಗಿ ಕಾರು ಕೆ.ಎ-34, ಎನ್-2992 ಸಂಖ್ಯೆಯ ಇನ್ನೋವಾ ಕಾರನ್ನೇ ಬಳಸಬೇಕು. ಯಾವುದೇ ಕಾರಣಕ್ಕೂ ಮಾಧ್ಯಮದವರು ಸೇರಿದಂತೆ ಖಾಸಗಿ ವ್ಯಕ್ತಿಗಳ ಜೊತೆ ಮಾಡನಾಡುವಂತಿಲ್ಲ. ಸ್ಥಿರ ದೂರವಾಣಿ ಹಾಗೂ ಮೊಬೈಲ್ ಬಳಸುವಂತಿಲ್ಲ ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.
ಸತೀಶ್ ಸೈಲ್ ಮತ್ತು ಬಿ.ನಾಗೇಂದ್ರ ಅವರು ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಸತಿ ಗೃಹದಲ್ಲೇ ವಾಸ್ತವ್ಯ ಹೂಡಬೇಕು. ಪ್ರತಿದಿನ ಅಲ್ಲಿಂದಲೇ ಅಧಿವೇಶನಕ್ಕೆ ತೆರಳಬೇಕು ಎಂದು ಆದೇಶ ನೀಡಲಾಗಿದ್ದು, ಅಧಿವೇಶನ ಮುಗಿದ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಬಂದು ಸೇರಬೇಕು ಎಂದು ಸೂಚನೆ ನೀಡಲಾಗಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಂಪ್ಲಿ ಶಾಸಕ ಸುರೇಶ್ ಬಾಬು, ಕೂಡ್ಲಿಗಿ ಶಾಸಕ ನಾಗೇಂದ್ರ, ವಿಜಯನಗರ ಶಾಸಕ ಆನಂದ್ ಸಿಂಗ್ ಮತ್ತು ಕಾರವಾರ ಶಾಸಕ ಸತೀಶ್ ಸೈಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಅಧಿವೇಶನದಲ್ಲಿ ಭಾಗವಹಿಸಲು ಅನುಮತಿ ಕೋರಿ ನಾಗೇಂದ್ರ ಮತ್ತು ಸತೀಶ್ ಸೈಲ್ ಮಾತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications