ನಲಪಾಡ್ ಅಕಾಡೆಮಿ ಒತ್ತುವರಿ ತೆರವು ಸ್ಥಗಿತ, ಎಪ್ಸಿಲಾನ್ ಒತ್ತುವರಿಯತ್ತ ನೋಡದ ಅಧಿಕಾರಿಗಳು
ಬೆಂಗಳೂರು, ಸೆಪ್ಟಂಬರ್ 15: ಬೆಂಗಳೂರು ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಗುರುವಾರವು ಮುಂದುವರಿದಿದೆ. ಪಾಲಿಕೆ ಅಧಿಕಾರಿಗಳ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿರುವ ಹಿನ್ನೆಲೆ ಕೆಲವೆಡೆ ಜನಾಕ್ರೋಶ ವ್ಯಕವಾಗಿದೆ. ಮತ್ತೊಂದೆಡೆ ನಲಪಾಡ್ ಅಕಾಡೆಮಿ ಒತ್ತುವರಿಗೆ ಹೈಕೋರ್ಟ್ ತಡೆ ನೀಡಿದೆ.
ಶಾಸಕ ಎನ್.ಎ.ಹ್ಯಾರಿಸ್ ಒಡೆತನದ ಚಲಘಟ್ಟದ ಸರ್ವೇ ನಂಬರ್ 70/14ರಲ್ಲಿರುವ ನಲಪಾಡ್ ಅಕಾಡೆಮಿಯ ಒತ್ತುವರಿ ತೆರವು ಕಾರ್ಯ ಸ್ಥಗಿತಗೊಂಡಿದೆ. ಮೊದಲ ದಿನ 50ಮೀಟರ್ ಒತ್ತುವರಿ ತೆರವು ಮಾಡಲಾಗಿತ್ತು, ಬುಧವಾರ ಎರಡನೇ ದಿನವು ಬಿಬಿಎಂಪಿ ಕಾರ್ಯಾಚರಣೆ ತೆರವುಗೊಳಿಸಿತ್ತು.
ಇದನ್ನು ಆಕ್ಷೇಪಿಸಿ ನಲಪಾಡ್ ಅಕಾಡೆಮಿ ಶಿಕ್ಷಣ ಸಂಸ್ಥೆಯು ಹೈಕೋರ್ಟ್ ಮೆಟ್ಟಿಲೇರಿತ್ತು. ಇದನ್ನು ವಿಚಾರಣೆ ನಡೆಸಿ ಹೈಕೋರ್ಟ್ ನ್ಯಾಯಪೀಠ ಸೆಪ್ಟಂಬರ್ 16ರವರೆಗೆ ಅಕಾಡೆಮಿಯ ಒತ್ತುವರಿ ತೆರವಿಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಹೀಗಾಗಿ ಬಾಕಿ ಉಳಿದಿದ್ದ 40ಮೀಟರ್ ಒತ್ತುವರಿಯನ್ನು ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ಯೋಜನೆ ಹಾಕಿಕೊಂಡಿದ್ದರು. ಅಷ್ಟರಲ್ಲಿ ಮಧ್ಯಂತರ ಆದೇಶ ಹಿನ್ನೆಲೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಮುಂದಾಗಲಿಲ್ಲ ಎನ್ನಲಾಗಿದೆ.

ಯಮಲೂರಿನ ಎಪ್ಸಿಲಾನ್ ವಿಲ್ಲಾ ಮುಟ್ಟದ ಬಿಬಿಎಂಪಿ
ಯಮಲೂರು ವ್ಯಾಪ್ತಿಯಲ್ಲಿರುವ ಎಪ್ಸಿಲಾನ್ ವಿಲ್ಲಾ ಹಾದು ಹೋಗುವ ಜಾಗ ಬಿಟ್ಟು ಬಿಬಿಎಂಪಿ ಅಧಿಕಾರಿಗಳು ಬೇರೆ ಒತ್ತುವರಿ ತೆರವಿನ ಮಾರ್ಕಿಂಗ್ ಮಾಡಿದ್ದಾರೆ. ಇದನ್ನು ಗಮನಿಸಿದ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 200 ಎಕರೆ ಜಮೀನು ಹೊಂದಿದ್ದರು ಸಹ ಎಪ್ಸಿಲಾನ್ ಸರ್ಕಾರಿ ಜಾಗವನ್ನು ಒತ್ತುವರಿಪಡಿಸಿಕೊಂಡಿದೆ ಎಂದು ಅಲ್ಲಿದ್ದ ಸ್ಥಳಿಯರು ಅಧಿಕಾರಿಗಳ ಮುಂದೆ ದೂರಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ತಾರತಮ್ಯ ವಿರುದ್ಧ ಜನಕ್ರೋಶ
ಸಾಕಷ್ಟು ವಿಲ್ಲಾಗಳು, ವಿಶಾಲ ಸ್ಥಳ, ಕಾಂಪೌಂಡು ಎಪ್ಸಿಲಾನ್ ವ್ಯಾಪ್ತಿಗೆ ಬರಲಿದ್ದು, ಕೋಟ್ಯಂತರ ರೂ.ಮೌಲ್ಯದ ಈ ಎಪ್ಸಿಲಾನ್ ಪ್ರಭಾವಿಗಳ ಒಡೆತನದ್ದಾಗಿದೆ. ಈ ಕಾರಣದಿಂದ ಬಿಬಿಎಂಪಿ ಎಪ್ಸಿಲಾನ್ ವಿಲ್ಲಾ ಬಿಟ್ಟು ಅಕ್ಕಪಕ್ಕದಲ್ಲಿನ ಖಾಲಿ ಜಾಗದಲ್ಲಿ ಒತ್ತುವರಿ ತೆರವಿಗೆ ಗುರುತಿಸಿದ್ದಾರೆ. ಎಪ್ಸಿಲಾನ್ ವಿಲ್ಲಾ ಒತ್ತುವರಿ ತೆರವಿನ ಬಗ್ಗೆ ಮಾಹಿತಿ, ಸ್ಪಷ್ಟತೆ ಇರದ ಬಿಬಿಎಂಪಿ ಅಧಿಕಾರಿಗಳು ಜನರ ಆಕ್ರೋಶದ ನಂತರ ಈ ಪ್ರದೇಶ ನಕ್ಷೆ ಹುಡುಕಾಡಿದ್ದಾರೆ. ಒಟ್ಟಾರೆ ಬಿಬಿಎಂಪಿ ಅಧಿಕಾರಿಗಳು ಪ್ರಭಾವಿಗಳ ಒಡೆತನದ ಒತ್ತುವರಿ, ಕಟ್ಟಡಗಳನ್ನು ಮುಟ್ಟಲು ಮುಂದಾಗಿಲ್ಲ ಎನ್ನಲಾಗಿದೆ.

ಲ್ಯಾಂಡ್ಮಾರ್ಕ್ ಅಪಾರ್ಟ್ಮೆಂಟ್ ಒತ್ತುವರಿ ತೆರವು
ಇದರ ಜತೆಗೆ ಮಹದೇವಪುರದಲ್ಲಿ ಸರ್ವೇ ಮತ್ತು ತೆರವು ಕಾರ್ಯಾಚರಣೆ ಮುಂದುವರಿದೆ. ವಾಗ್ದೇವಿ ಸ್ಕೂಲ್ ಮುಂಭಾಗ ಸೇರಿದಂತೆ ಹಲವೆಡೆ ರಾಜಕಾಲುವೆ ಸೀಲಿಂಗ್ ಮತ್ತು ಶಾಂತಿನಿಕೇತನ ಬಡಾವಣೆಯಲ್ಲಿ ರಾಜಕಾಲುವೆಗೆ ನಿರ್ಮಿಸಿದ್ದ ತಡೆಗೋಡೆ ತೆರವು ಮಾಡಲಾಗಿದೆ.
ಯಲಹಂಕದಲ್ಲಿರುವ ಲ್ಯಾಂಡ್ಮಾರ್ಕ್ ಅಪಾರ್ಟ್ಮೆಂಟ್ ಒತ್ತುವರಿ ತೆರವು ಕಾರ್ಯ ಎರಡನೇ ದಿನಕ್ಕೆ ಕಾಲಿಟ್ಟಿದೆ. ಗುರುವಾರ ಬಿಬಿಎಂಪಿ ಅಧಿಕಾರಿಗಳು ಅರ್ಧದಷ್ಟು ತೆರವು ಮಾಡಲಾಗಿತ್ತು. ಸಿಂಗಾಪುರ ಕೆರೆಯಿಂದ ಅಬ್ಬಿಗೆರೆ ಸಂಪರ್ಕಿಸುವ ಪ್ರದೇಶದಲ್ಲಿ ತೆರವು ಕಾರ್ಯ ಮುಂದುವರಿದಿದ್ದು, ಅಧಿಕಾರಿಗಳು ತೂಬುಗಾಲುವೆ ಒತ್ತುವರಿ ತೆರವು ಮಾಡಿದ್ದಾರೆ.

ಟಿ.ದಾಸರಹಳ್ಳಿ ವ್ಯಾಪ್ತಿಯಲ್ಲಿ ಬಿಬಿಎಂಪಿ ಕಾರ್ಯಾಚರಣೆ
ಮಹದೇವಪುರ, ಯಲಹಂಕ ಜತೆ ಜತೆಗೆ ಶುಕ್ರವಾರ ಟಿ.ದಾಸರಹಳ್ಳಿ ವಲಯ ವ್ಯಾಪ್ತಿಯ ನೆಲಗದರನಹಳ್ಳಿ ಮತ್ತು ರುಕ್ಮಿಣಿ ನಗರ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯ ನಡೆದಿದೆ. ವಲಯ ಜಂಟಿ ಆಯುಕ್ತ ಜಗದೀಶ್ ಅವರು ಕಾರ್ಯಾಚರಣೆ ನೇತೃತ್ವ ವಹಿಸಿದ್ದರು.
ಇಲ್ಲಿನ ರಾಜಕಾಲುವೆ ಮೇಲೆ ದೊಡ್ಡೇಗೌಡ ಎಂಬುವವರು ಮೂರು ಅಂತಸ್ತಿನ ಕಟ್ಟಡ ನಿರ್ಮಿಸಿದ್ದಾರೆ. ಚಂದ್ರಶೇಖರ್ ಎಂಬುವವರಿಂದ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಿದೆ. ಅಧಿಕಾರಿಗಳು ಒತ್ತುವರಿಗೆ ಬಂದಾಗಿ ಮನೆ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಒಂದು ಖಾಲಿ ನಿವೇಶನ ಸೇರಿ ಒಟ್ಟು ಹತ್ತು ಮನೆಗಳಿಂದ ಆಗಿದ್ದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications