Get Updates
Get notified of breaking news, exclusive insights, and must-see stories!

ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣ : ವಿದ್ವತ್‌ಗೆ ಬೆದರಿಕೆ ಕರೆ

ಬೆಂಗಳೂರು, ನವೆಂಬರ್ 22 : ವಿದ್ವತ್ ಲೋಕನಾಥ್‌ ಮೇಲೆ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ವಿದ್ವತ್‌ಗೆ ಬೆದರಿಕೆ ಕರೆಗಳು ಬರುತ್ತಿದ್ದು, ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.

ಹಲ್ಲೆ ಪ್ರಕರಣದಲ್ಲಿ ನೀಡಿರುವ ದೂರನ್ನು ವಾಪಸ್ ಪಡೆದುಕೊಂಡು, ರಾಜಿ ಮಾಡಿಕೊಳ್ಳುವಂತೆ ವಿದ್ವತ್ ಲೋಕನಾಥ್‌ಗೆ ಶ್ರೀ ಕೃಷ್ಣ ಎಂಬುವವರು ಬೆದರಿಕೆ ಹಾಕಿದ್ದಾರೆ. ಈ ಕುರಿತು ದೂರವಾಣಿ ಕರೆ, ಸಂದೇಶ ಕಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಆಸ್ಟ್ರೇಲಿಯಾದಲ್ಲಿದ್ದ ವಿದ್ವತ್ ಲೋಕನಾಥ್‌ ಬೆಂಗಳೂರಿಗೆ ಬಂದಿದ್ದು, ಸಿಸಿಬಿ ಪೊಲೀಸರಿಗೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ದೂರು ನೀಡಿದ್ದಾರೆ. ವಿದ್ವತ್‌ಗೆ ಭದ್ರತೆ ನೀಡುವಂತೆ ಸಿಸಿಬಿ ಪೊಲೀಸರು ಸಂಜಯ ನಗರ ಪೊಲೀಸ್ ಠಾಣೆಗೆ ಸೂಚನೆ ನೀಡಿದ್ದಾರೆ.

2018ರ ಫೆಬ್ರವರಿ 17ರಂದು ಬೆಂಗಳೂರಿನ ಯುಬಿ ಸಿಟಿಯಲ್ಲಿ ವಿದ್ವತ್ ಲೋಕನಾಥ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಶ್ರೀ ಕೃಷ್ಣ ಬೆದರಿಕೆ ಹಾಕಿದ್ದಾರೆ ಎಂದು ವಿದ್ವತ್ ದೂರು ಕೊಟ್ಟಿದ್ದಾರೆ...

ಸಿಸಿಬಿಗೆ ವಿದ್ವತ್ ದೂರು

ಸಿಸಿಬಿಗೆ ವಿದ್ವತ್ ದೂರು

ಹಲ್ಲೆ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ವಿರುದ್ಧ ನೀಡಿರುವ ದೂರು ವಾಪಸ್ ಪಡೆದುಕೊಂಡು, ರಾಜಿ ಮಾಡಿಕೊಳ್ಳುವಂತೆ ಬೆದರಿಕೆ ಕರೆ ಬರುತ್ತಿದೆ ಎಂದು ಉದ್ಯಮಿ ಪುತ್ರ ವಿದ್ವತ್ ಲೋಕನಾಥ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಹಲ್ಲೆ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಶ್ರೀಕೃಷ್ಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಭದ್ರತೆ ನೀಡಲು ಸೂಚನೆ

ಭದ್ರತೆ ನೀಡಲು ಸೂಚನೆ

ಹಲ್ಲೆ ಪ್ರಕರಣದ ಆರೋಪಿ ಶ್ರೀಕೃಷ್ಣ ಜಾಮೀನು ರದ್ದುಗೊಳಿಸುಂತೆ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ವಿದ್ವತ್ ಪರ ವಕೀಲರು ಚಿಂತನೆ ನಡೆಸಿದ್ದಾರೆ. ಸಿಸಿಬಿ ಪೊಲೀಸರು ವಿದ್ವತ್‌ಗೆ ಭದ್ರತೆ ನೀಡುವಂತೆ ಸಂಜಯನಗರ ಠಾಣೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಸಿಸಿಬಿ ಪೊಲೀಸರು ವಿದ್ವತ್‌ಗೆ ಬಂದ ಕರೆಗಳನ್ನು ಪರಿಶೀಲನೆ ನಡೆಸಿದ್ದು, ಆಂಧ್ರಪ್ರದೇಶದ ಗುಂಟೂರಿನ ವ್ಯಕ್ತಿಗೆ ಸೇರಿದ ನಂಬರ್‌ನಿಂದ ಬೆದರಿಕೆ ಕರೆ ಬಂದಿದೆ ಎಂದು ಪತ್ತೆ ಹಚ್ಚಿದ್ದು ತನಿಖೆ ಆರಂಭಿಸಿದ್ದಾರೆ.

ಫರ್ಜಿ ಕೆಫೆಯಲ್ಲಿ ಹಲ್ಲೆ

ಫರ್ಜಿ ಕೆಫೆಯಲ್ಲಿ ಹಲ್ಲೆ

2018ರ ಫೆಬ್ರವರಿ 17ರಂದು ಬೆಂಗಳೂರಿನ ಯುಬಿ ಸಿಟಿಯಲ್ಲಿನ ಫರ್ಜಿ ಕೆಫೆಯಲ್ಲಿ ವಿದ್ವತ್ ಲೋಕನಾಥ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದರು. ಈ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು, 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಮೊಹಮ್ಮದ್ ನಲಪಾಡ್ ಸೇರಿದಂತೆ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ.

ಶ್ರೀಕೃಷ್ಣ ಆರೋಪಿ

ಶ್ರೀಕೃಷ್ಣ ಆರೋಪಿ

ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಶ್ರೀ ಕೃಷ್ಣ ಪ್ರಕರಣದಲ್ಲಿ 3ನೇ ಆರೋಪಿಯಾಗಿದ್ದಾನೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+