ಎಕರೆಗೆ 50 ಲಕ್ಷ ಖರ್ಚು ಮಾಡಿ ಬೆಳೆಯುವ ಹೂವು ಚಿನ್ನದ್ದಾ? ಸಿದ್ದರಾಮಯ್ಯಗೆ ತಿರುಗೇಟು
ಬೆಂಗಳೂರು, ಮೇ 06: ಕೊರೊನಾ ವೈರಸ್ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಜನರಿಗಾಗಿ ಕರ್ನಾಟಕ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ 'ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ' ಇದ್ದಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದರು.
ಕಾಂಗ್ರೆಸ್ ನಾಯಕನ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. 'ಸರ್ಕಾರಕ್ಕೆ ನಾವು 50,000 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸಲು ಮನವಿ ಮಾಡಿದ್ದೆ, ಆದರೆ, ಸರ್ಕಾರ 1610 ಕೋಟಿ ಮಾತ್ರ ನೀಡುತ್ತಿದೆ. ಇದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ' ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ನಳೀನ್ ಕುಮಾರ್ ''ಕೊವಿಡ್ ಸಮಯದಲ್ಲಿ ಸಂಕಷ್ಟದಲ್ಲಿರುವವರ ನಾಡಿನ ಜನತೆಗೆ ಸರ್ಕಾರ ಮಾತ್ರವಲ್ಲದೆ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಪ್ರೇರಿತವಾಗಿ ಮುಂದೆ ಬಂದು ಸಹಾಯ ಮಾಡುತ್ತಿದ್ದಾರೆ. ಸರ್ಕಾರವೂ ಶಕ್ತಿ ಮೀರಿ ಜನತೆಗೆ ಸ್ಪಂದಿಸುತ್ತಿದೆ. ಈ ಸಮಯದಲ್ಲಿ ನಿಮ್ಮ ರಾಜಕೀಯ ಬದಿಗಿರಿಸಿ ಕೊರೊನಾ ವಿರುದ್ಧ ಹೋರಾಡಲು ಸಹಕರಿಸಿ' ಎಂದು ಪ್ರತಿಕ್ರಿಯಿಸಿದ್ದಾರೆ.
ಹಾಗೂ ನಿಮ್ಮ ಅವಗಾಹನೆಗೆ ಇರಲೆಂದು ಹೇಳುವುದಾದರೆ,
— Nalinkumar Kateel (@nalinkateel) May 6, 2020
ಕೇರಳ ಊರಿಗೆ ಮುಂಚೆ 20,000 ಕೋಟಿ ಘೋಷಿಸಿ ಮತ್ತೆ ಇದೇ ಹಣದ ಸಲುವಾಗಿ ಕೇಂದ್ರದ ಕದ ತಟ್ಟಿದ ವಿಷಯ ಹಳೆಯದು.
ಸರ್ಕಾರ #COVID19 ನಂತಹ ಮಾರಣಾಂತಿಕ ಖಾಯಿಲೆಯಿಂದ ಹೊರಬರಲು ಎಲ್ಲಾ ರೀತಿಯಲ್ಲೂ ಹೋರಾಡುತ್ತಿದ್ದು ಜನತೆಯ ರಕ್ಷಣೆ ಮತ್ತು ಅಭಿವೃದ್ಧಿಯೇ ನಮ್ಮ ಗುರಿ.#KarnatakaFightsCorona
ಇನ್ನು ಕೇರಳದಲ್ಲಿ ಕೊರೊನಾ ಸಂಕಷ್ಟದಿಂದ ಕಷ್ಟ ಪಡುತ್ತಿರುವ ಜನರಿಗಾಗಿ 20,000 ಕೋಟಿ ಘೋಷಿಸಿದೆ ಎಂದು ಹೇಳಿದ್ದ ಮಾತಿಗೆ ''ಕೇರಳ ಊರಿಗೆ ಮುಂಚೆ 20,000 ಕೋಟಿ ಘೋಷಿಸಿ ಮತ್ತೆ ಇದೇ ಹಣದ ಸಲುವಾಗಿ ಕೇಂದ್ರದ ಕದ ತಟ್ಟಿದ ವಿಷಯ ಹಳೆಯದು'' ಎಂದು ಹೇಳಿದ್ದಾರೆ.

ಇನ್ನು ಸರ್ಕಾರವನ್ನು ಟೀಕಿಸುವ ಉದ್ದೇಶದಿಂದ 'ಹೂ ಬೆಳೆಗಾರರು ಎಕರೆಗೆ ಅಂದಾಜು 50 ಲಕ್ಷ ರೂಪಾಯಿ ಖರ್ಚು ಮಾಡಿರುತ್ತಾರೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಹೇಳಿಕೆ ವೈರಲ್ ಆಗುತ್ತಿದೆ.
ಸಿದ್ಧರಾಮಯ್ಯನವರೇ,
— Nalinkumar Kateel (@nalinkateel) May 6, 2020
ಸರ್ಕಾರವನ್ನು ದೂರುವುದೇ ಗುರಿಯಾದಾಗ ಮಾತ್ರ ಇಂತಹ ತಪ್ಪುಗಳಾಗಲು ಸಾಧ್ಯ !
ಅಂದಹಾಗೆ ಎಕರೆಗೆ 50 ಲಕ್ಷ ಖರ್ಚು ಮಾಡಿ ಬೆಳೆಯುವ ಹೂವು ಚಿನ್ನದ್ದಾ ?
ಇದನ್ನು ಕೇಳುವವರಿಗೆ, ನಿಮ್ಮ ನಾಯಕ ರಾಹುಲ್ ಗಾಂಧಿ ಹೇಳಿದ ಆಲೂಗಡ್ಡೆಯಿಂದ ಚಿನ್ನ ತೆಗೆಯುವ ಕೆಲಸ ನೆನಪಾಗುವುದಿಲ್ಲವೇ.? https://t.co/XO1DtV91PO
ಇದೇ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಳೀನ್ ಕುಮಾರ್ ''ಸಿದ್ಧರಾಮಯ್ಯನವರೇ, ಸರ್ಕಾರವನ್ನು ದೂರುವುದೇ ಗುರಿಯಾದಾಗ ಮಾತ್ರ ಇಂತಹ ತಪ್ಪುಗಳಾಗಲು ಸಾಧ್ಯ! ಅಂದಹಾಗೆ ಎಕರೆಗೆ 50 ಲಕ್ಷ ಖರ್ಚು ಮಾಡಿ ಬೆಳೆಯುವ ಹೂವು ಚಿನ್ನದ್ದಾ? ಇದನ್ನು ಕೇಳುವವರಿಗೆ, ನಿಮ್ಮ ನಾಯಕ ರಾಹುಲ್ ಗಾಂಧಿ ಹೇಳಿದ ಆಲೂಗಡ್ಡೆಯಿಂದ ಚಿನ್ನ ತೆಗೆಯುವ ಕೆಲಸ ನೆನಪಾಗುವುದಿಲ್ಲವೇ.?' ಎಂದು ಪ್ರಶ್ನಿಸಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications