ಮಲ್ಲೇಶ್ವರಂನಲ್ಲಿ ಸದ್ಯದಲ್ಲೇ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಸ್ಥಾಪನೆ: ಅಶ್ವತ್ಥ್ ನಾರಾಯಣ
ಬೆಂಗಳೂರು, ಏಪ್ರಿಲ್ 27: ನಾಡಿನ ಸರ್ವಾಂಗೀಣ ಪ್ರಗತಿಗೆ ಅಮೂಲ್ಯ ಕೊಡುಗೆ ನೀಡಿ, ಸರ್ವಸ್ವವನ್ನೂ ಧಾರೆ ಎರೆದಿರುವ ಮೈಸೂರು ಯದುವಂಶದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ಸದ್ಯದಲ್ಲೇ ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಎಚ್ಇಎಲ್ ಕೈಗಾರಿಕೆಯ ಇಪಿಡಿ ವಿಭಾಗದ ಕರ್ನಾಟಕ ಸಂಘವು ಬುಧವಾರ ಆಯೋಜಿಸಿದ್ದ ಕನ್ನಡೋತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾರ್ಖಾನೆಯ ಆವರಣದಲ್ಲಿರುವ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಬಹದ್ದೂರ್ ಮಂಟಪದ ನವೀಕೃತ ಪಾರಂಪರಿಕ ಪ್ರಾಂಗಣವನ್ನು ಉದ್ಘಾಟಿಸಿದರು.
ಮೈಸೂರಿನ ಮಹಾರಾಜರು ಇಡೀ ದೇಶದಲ್ಲಿ ಮಾದರಿ ಆಡಳಿತಕ್ಕೆ ಮೇಲ್ಪಂಕ್ತಿಯಾಗಿ, ರಾಜರ್ಷಿ ಎನಿಸಿಕೊಂಡಿದ್ದರು. ಮಹಾತ್ಮ ಗಾಂಧೀಜಿಯವರೇ ಮೈಸೂರು ಸಂಸ್ಥಾನದ ಆಡಳಿತವನ್ನು ಕೊಂಡಾಡಿದ್ದರು. ಬಿಎಚ್ಇಎಲ್ ಸೇರಿದಂತೆ ಸಾರ್ವಜನಿಕ ರಂಗದ ಹಲವು ಉದ್ಯಮಗಳ ಸ್ಥಾಪನೆಗೆ ಯದುವಂಶದವರ ಕೊಡುಗೆ ಅಪಾರವಾದುದು ಎಂದು ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಬಣ್ಣಿಸಿದರು.

ನಾಲ್ವಡಿಯವರು ಸೇರಿದಂತೆ ಈ ವಂಶದ ಅನೇಕ ಅರಸರು ನಾಡಿನ ಜನರ ಒಳಿತಿಗಾಗಿ ವಿಶ್ವವಿದ್ಯಾಲಯ, ಬ್ಯಾಂಕ್, ಕೈಗಾರಿಕೆಗಳು, ಜಲಾಶಯಗಳು ಇತ್ಯಾದಿಗಳನ್ನು ಶಾಶ್ವತ ಕೊಡುಗೆಯಾಗಿ ನೀಡಿದ್ದಾರೆ. ಇಂದು ಆಡಳಿತ ನಡೆಸುವವರಿಗೂ ಅವರು ಆದರ್ಶವಾಗಿದ್ದಾರೆ. ಹೀಗಾಗಿ ಮೈಸೂರಿನ ಚರಿತ್ರೆ ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಚರಿತ್ರೆ ಈಗಲೂ ಮುಂದುವರಿದಿದ್ದು, ಈಗ ಯದುವೀರ ಕೃಷ್ಣದತ್ತ ಒಡೆಯರ್ ಅವರು ಕನ್ನಡ ಶಾಲೆಗಳ ಸಬಲೀಕರಣವನ್ನು ಕೈಗೊಂಡಿದ್ದು, "ಸ್ವಚ್ಛ ಭಾರತ' ಆಂದೋಲನಕ್ಕೆ ರಾಯಭಾರಿಗಳಾಗಿದ್ದಾರೆ. ಅಲ್ಲದೆ, ಸ್ವತಃ ತಾವೇ ಮೈಸೂರಿನಲ್ಲಿ ಸೈಬರ್ ಸೆಕ್ಯುರಿಟಿ ಉತ್ಕೃಷ್ಟತಾ ಕೇಂದ್ರವನ್ನು ತೆರೆದು, ಉದ್ಯಮಶೀಲತೆಯನ್ನು ಮುಂದುವರಿಸಿದ್ದಾರೆ ಎಂದು ಸಚಿವರು ಮೆಚ್ಚುಗೆ ಸೂಸಿದರು.

ಗುಣಮಟ್ಟದ ಶಿಕ್ಷಣ ಪೂರೈಕೆಗೆ ಸಂಕಲ್ಪ ಮಾಡಿರುವ ಸರಕಾರವು ಪಾಲಿಟೆಕ್ನಿಕ್ ಮತ್ತು ಡಿಪ್ಲೊಮಾ ಶಿಕ್ಷಣಗಳನ್ನು ಸಮಗ್ರವಾಗಿ ಪರಿಷ್ಕರಿಸಿ, ಸಮಕಾಲೀನಗೊಳಿಸಲಾಗಿದೆ. ಜತೆಗೆ ಜಿಟಿಟಿಸಿ, ಜಿಟಿಟಿಐ ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಕೂಡ ರಾಜ್ಯದಲ್ಲಿ ತೆರೆಯಲಾಗಿದೆ. ಇದರಿಂದಾಗಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವೈಮಾಂತರಿಕ್ಷ, ಸೆಮಿ ಕಂಡಕ್ಟರ್ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ಮುಂಚೂಣಿಯಲ್ಲಿರುವುದು ಸಾಧ್ಯವಾಗಿದೆ ಎಂದು ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೈಸೂರು ರಾಜವಂಶದ ಪ್ರತಿನಿಧಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪದ್ಮಶ್ರೀ ಪುರಸ್ಕೃತ ಹಿರೇಕಳ ಹಾಜಬ್ಬ, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಜನಪದ ಗಾಯಕ ಮಳವಳ್ಳಿ ಮಹದೇವಸ್ವಾಮಿ, ಬಿಎಚ್ಇಎಲ್ ಉನ್ನತಾಧಿಕಾರಿ ಎಸ್.ಎನ್. ಭಾಗ್ಯಶ್ರೀ, ಸಂಘದ ಉಪಾಧ್ಯಕ್ಷ ಟಿ. ತಿಮ್ಮೇಶ್ ಮುಂತಾದವರು ಉಪಸ್ಥಿತರಿದ್ದರು.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications