ರಾಜ್ಯೋತ್ಸವದಿಂದ ಕನ್ನಡದಲ್ಲೇ ಬೋರ್ಡ್ ಹಾಕಿ ಇಲ್ಲವೇ ರೈಟ್ ಹೇಳಿ
ಬೆಂಗಳೂರು, ಅಕ್ಟೋಬರ್ 25; ಸಾರ್ವಜನಿಕ ಸ್ಥಳಗಳಲ್ಲಿ ವಾಣಿಜ್ಯ ಉದ್ದೇಶ ಸೇರಿದಂತೆ ಎಲ್ಲ ಬಗೆಯ ನಾಮಫಲಕಗಳು ಕನ್ನಡದಲ್ಲೇ ಇರಬೇಕೆಂಬ ಕಡ್ಡಾಯ ನಿಯಮ ನವೆಂಬರ್ 1ರಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಅನುಷ್ಠಾನಗೊಳ್ಳಲಿದೆ ಎಂದು ಕನ್ನಡ ಪರ ಹೋರಾಟಗಾರ ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಸ್ಥಾನ ಸಿಗಬೇಕು ಹಾಗೂ ಕನ್ನಡವೇ ಆಡಳಿತ ಭಾಷೆಯಾಗಬೇಕು ಎಂಬ ಹಲವು ದಶಕಗಳ ಹೋರಾಟದ ಫಲವಾಗಿ ನಾಮಫಲಕಗಳನ್ನು ಕನ್ನಡದಲ್ಲೇ ಅಳವಡಿಸುವ ಕಾನೂನು ರೂಪಿಸಲಾಗಿದೆ. ನವೆಂಬರ್ 1ರಿಂದ ಈ ನಿಯಮ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕನ್ನಡದಲ್ಲೇ ನಾಮಪಳಕ ಇರಬೇಕು ಎಂಬ ನಿಯಮಕ್ಕೆ ಕೆಲವು ಕಾನೂನು ತೊಡಕುಗಳು ಎದುರಾಗಿದ್ದವು ಆದರೆ ನೆಲದ ಭಾಷೆಯನ್ನು ಅನುಷ್ಠಾನಗೊಳಿಸಲು ಯಾವುದೇ ಕಾನೂನು ಕೂಡ ನೆಲದ ಕಾನೂನಿಗೆ ವಿರುದ್ಧವಾಗಿ ಇರಲಾರದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕಾನೂನು ತೊಡಕಿನ ಸೂಕ್ತ ಪರಿಹಾರಕ್ಕೆ ಒಪ್ಪಿಕೊಂಡಿದ್ದು, ಕನ್ನಡಕ್ಕೆ ಮಹತ್ವದ ಪ್ರಾಶಸ್ತ್ಯ ರಾಜ್ಯೋತ್ಸವದ ದಿನದಂದು ದಕ್ಕಲಿದೆ.

ಈ ದಿಸೆಯಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಮುಖ್ಯವಾಗಿ ಕನ್ನಡ ಅನುಷ್ಠಾನಕ್ಕೆ ವಯಕ್ತಿಕ ಆಸ್ಥೆ ತೋರುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ಅವರನ್ನು ಅಭಿನಂದಿಸುವೆ ಎಂದರು.
ಒಂದು ವೇಳೆ ನವೆಂಬರ್ 1ರಿಂದ ಕನ್ನಡ ನಾಮಫಲಕ ಕಡ್ಡಾಯ ನಿಯಮ ಜಾರಿಯಾಗದಿದ್ದರೆ ಕಾನೂನಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಹೋರಾಟ ಸರ್ಕಾರದ ವಿರುದ್ಧ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ












Click it and Unblock the Notifications