ರಾಜ್ಯೋತ್ಸವದಿಂದ ಕನ್ನಡದಲ್ಲೇ ಬೋರ್ಡ್ ಹಾಕಿ ಇಲ್ಲವೇ ರೈಟ್ ಹೇಳಿ
ಬೆಂಗಳೂರು, ಅಕ್ಟೋಬರ್ 25; ಸಾರ್ವಜನಿಕ ಸ್ಥಳಗಳಲ್ಲಿ ವಾಣಿಜ್ಯ ಉದ್ದೇಶ ಸೇರಿದಂತೆ ಎಲ್ಲ ಬಗೆಯ ನಾಮಫಲಕಗಳು ಕನ್ನಡದಲ್ಲೇ ಇರಬೇಕೆಂಬ ಕಡ್ಡಾಯ ನಿಯಮ ನವೆಂಬರ್ 1ರಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಅನುಷ್ಠಾನಗೊಳ್ಳಲಿದೆ ಎಂದು ಕನ್ನಡ ಪರ ಹೋರಾಟಗಾರ ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಸ್ಥಾನ ಸಿಗಬೇಕು ಹಾಗೂ ಕನ್ನಡವೇ ಆಡಳಿತ ಭಾಷೆಯಾಗಬೇಕು ಎಂಬ ಹಲವು ದಶಕಗಳ ಹೋರಾಟದ ಫಲವಾಗಿ ನಾಮಫಲಕಗಳನ್ನು ಕನ್ನಡದಲ್ಲೇ ಅಳವಡಿಸುವ ಕಾನೂನು ರೂಪಿಸಲಾಗಿದೆ. ನವೆಂಬರ್ 1ರಿಂದ ಈ ನಿಯಮ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕನ್ನಡದಲ್ಲೇ ನಾಮಪಳಕ ಇರಬೇಕು ಎಂಬ ನಿಯಮಕ್ಕೆ ಕೆಲವು ಕಾನೂನು ತೊಡಕುಗಳು ಎದುರಾಗಿದ್ದವು ಆದರೆ ನೆಲದ ಭಾಷೆಯನ್ನು ಅನುಷ್ಠಾನಗೊಳಿಸಲು ಯಾವುದೇ ಕಾನೂನು ಕೂಡ ನೆಲದ ಕಾನೂನಿಗೆ ವಿರುದ್ಧವಾಗಿ ಇರಲಾರದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕಾನೂನು ತೊಡಕಿನ ಸೂಕ್ತ ಪರಿಹಾರಕ್ಕೆ ಒಪ್ಪಿಕೊಂಡಿದ್ದು, ಕನ್ನಡಕ್ಕೆ ಮಹತ್ವದ ಪ್ರಾಶಸ್ತ್ಯ ರಾಜ್ಯೋತ್ಸವದ ದಿನದಂದು ದಕ್ಕಲಿದೆ.

ಈ ದಿಸೆಯಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಮುಖ್ಯವಾಗಿ ಕನ್ನಡ ಅನುಷ್ಠಾನಕ್ಕೆ ವಯಕ್ತಿಕ ಆಸ್ಥೆ ತೋರುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ಅವರನ್ನು ಅಭಿನಂದಿಸುವೆ ಎಂದರು.
ಒಂದು ವೇಳೆ ನವೆಂಬರ್ 1ರಿಂದ ಕನ್ನಡ ನಾಮಫಲಕ ಕಡ್ಡಾಯ ನಿಯಮ ಜಾರಿಯಾಗದಿದ್ದರೆ ಕಾನೂನಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಹೋರಾಟ ಸರ್ಕಾರದ ವಿರುದ್ಧ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications