ಆರ್ಆರ್ನಗರದ 13,544 ಮತದಾರರು ಪಟ್ಟಿಯಿಂದ ಹೊರಕ್ಕೆ
ಬೆಂಗಳೂರು, ಡಿಸೆಂಬರ್ 19: ಜಾಲಹಳ್ಳಿ, ಮನೆಯೊಂದರಲ್ಲಿ 9,746 ಮತದಾರರ ಗುರುತಿನ ಚೀಟಿ ಪತ್ತೆಯಾದ ವಿಷಯಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರದ 13,544 ಮಂದಿ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲು ಚುನಾವಣಾ ಆಯೋಗ ಸೂಚನೆ ನೀಡಿದೆ.
ವಿಧಾನ ಸಭೆ ಚುನಾವಣೆ ವೇಳೆ ಜಾಲಹಳ್ಳಿ ಮನೆಯೊಂದರಲ್ಲಿ ಮತದಾರರ ಗುರುತಿನ ಚೀಟಿ ಪತ್ತೆಯಾಗಿತ್ತು ಅದು ಶಾಸಕ ಮುನಿರತ್ನ ಅವರಿಗೆ ಸೇರಿದ್ದು ಎನ್ನಲಾಗಿತ್ತು.
ಇದೀಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಕಾರಣ ಆರ್ಆರ್ ನಗರದ ಪತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗುತ್ತಿದೆ. ಇದರಲ್ಲಿ 9,746 ಮಂದಿ ಅಧಿಕೃತ ಮತದಾರರೇ ಆಗಿದ್ದಾರೆ, ಅಷ್ಟೇ ಅಲ್ಲದೆ ಕೆಲವರು ಮೃತಪಟ್ಟಿದ್ದಾರೆ, ಇನ್ನೂ ಕೆಲವರು ವಿಳಾಸವನ್ನು ಬದಲಿಸಿದ್ದಾರೆ.

ಚುನಾವಣಾ ಆಯೋಗವು ಪ್ರತಿಯೊಬ್ಬರ ಮನೆಗೆ ತೆರಳಿ ಪರಿಶೀಲನೆ ನಡೆಸುತ್ತಾರೆ. ಈಗಾಗಲೇ ಆರ್ಆರ್ ನಗರದ 8,213 ಮಂದಿ ಹೆಸರನ್ನು ತೆಗೆದು ಹಾಕಲಾಗಿದೆ. ಬೆಂಗಳೂರಿನಾದ್ಯಂತ 79,387 ಹೆಸರನ್ನು ತೆಗೆದುಹಾಕಲಾಗಿದೆ.
ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಒಟ್ಟು 4.7 ಲಕ್ಷ ಮಂದಿ ಮತದಾರರಿದ್ದಾರೆ.ಆರ್ಆರ್ ನಗರದ 380 ಪ್ರದೇಶಗಳಿಗೆ ತೆರಳಿ ಚುನಾವಣಾ ಆಯೋಗದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications