ಬೆಂಗಳೂರು ಸಿಟಿ ವಿ.ವಿಗೆ ಮನಮೋಹನ್ ಸಿಂಗ್ ಹೆಸರು ಗೌರವ ಅಲ್ಲ, ಅವಮಾನ: ಅಶೋಕ್
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡಲು ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿವಿಗೆ ಹೆಸರು ಮರುನಾಮಕರಣವನ್ನು ಘೋಷಣೆ ಮಾಡಿದ್ದರು. ಆದರೆ ಇದಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಅವರ ಹೆಸರು ಮರುನಾಮಕರಣ ಮಾಡುತ್ತಿರುವುದು ಅವರಿಗೆ ಕೊಟ್ಟಿರುವ ಗೌರವ ಅಲ್ಲ, ಅವರ ವ್ಯಕ್ತಿತ್ವಕ್ಕೆ ಮಾಡಿರುವ ಅವಮಾನ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಇರುವ ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಅವರ ಹೆಸರನ್ನ ನಾಮಕರಣ ಮಾಡುವುದು ಯಾವ ಮಹಾ ಸಾಧನೆ? ಇದರ ಬದಲು ಒಂದು ಹೊಸ ವಿಶ್ವವಿದ್ಯಾಲಯ ಅಥವಾ ಸಂಶೋಧನಾ ಸಂಸ್ಥೆಯನ್ನ ಸ್ಥಾಪನೆ ಮಾಡಿ, ಅದಕ್ಕೆ ಡಾ. ಮನಮೋಹನ್ ಸಿಂಗ್ ಅವರ ಹೆಸರಿಟ್ಟಿದ್ದರೆ ಒಪ್ಪಿಕೊಳ್ಳುತ್ತಿದ್ದೆವು. ಇದು ಅವರಿಗೆ ಕೊಟ್ಟಿರುವ ಗೌರವ ಅಲ್ಲ, ಕಾಂಗ್ರೆಸ್ ಸರ್ಕಾರ ಅವರ ವ್ಯಕ್ತಿತ್ವಕ್ಕೆ ಮಾಡಿರುವ ಅವಮಾನ ಎಂದು ಅಶೋಕ್ ಖಂಡಿಸಿದ್ದಾರೆ.

ಮನಮೋಹನ್ ಸಿಂಗ್ ಅವರ ಬಗ್ಗೆ ನಮಗೆ ಯಾವುದೇ ತಕರಾರಿಲ್ಲ. ಅವರು ಪ್ರಧಾನಿಯಾಗಿದ್ದಾಗ ನಾನೂ ಅವರನ್ನು ಭೇಟಿಯಾಗಿದ್ದೀನಿ. ಬೆಂಗಳೂರಿನ ಬಗ್ಗೆ ನನಗೆ ವಿಶೇಷ ಪ್ರೀತಿ ಇದೆ, ಬೆಂಗಳೂರು ಕರ್ನಾಟಕದ ಹಬ್ ಅಲ್ಲ, ಇಡೀ ದೇಶದ್ದು ಎಂದು ಅವರೂ ಹೇಳಿದ್ದರು. ಹಾಗಾಗಿ ನಮಗೂ ಆ ಪ್ರೀತಿ ಇದೆ ಎಂದಿದ್ದಾರೆ.
ಮೊದಲು ಬೆಂಗಳೂರು ವಿಶ್ವವಿದ್ಯಾಲಯ ಆಗಿತ್ತು. ನಂತರ ಸೆಂಟ್ರಲ್ ವಿವಿ ಆಯ್ತು, ಆ ಮೇಲೆ ಬೆಂಗಳೂರು ಸಿಟಿ ವಿವಿ ಅಂತ ಹೆಸರು ಬದಲಾಯಿತು. ಈಗ ಕಾಂಗ್ರೆಸ್ನವರು ಮನಮೋಹನ್ ಸಿಂಗ್ ಅವರ ಹೆಸರಿಡಲು ಮುಂದಾಗಿದ್ದಾರೆ. ಇದು ಹಳೇ ಪಾತ್ರೆಗೆ ಕಲಾಯಿ ಹೊಡೆದಂತಿದೆ. ಅದರ ಬದಲು ಹೊಸ ವಿವಿ ಮಾಡಿ. ಮನಮೋಹನ್ ಸಿಂಗ್ ಅವರಂತಹ ದೊಡ್ಡ ವ್ಯಕ್ತಿಗೆ ಹೊಸ ಸಂಸ್ಥೆಯನ್ನ ಸ್ಥಾಪಿಸಿ, ಹಳೆಯದಕ್ಕೇ ಬಣ್ಣ ಹೊಡೆಯಲು ಯಾಕೆ ಹೋಗುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ತೇಪೆ ಯಾಕೆ ಹಾಕ್ತಿದ್ದೀರಿ?
ಬೆಂಗಳೂರು ಅನ್ನೋದು ಬ್ರ್ಯಾಂಡ್ ಇದೆ. ಬೆಂಗಳೂರು ಸಿಟಿ ಯೂನಿವರ್ಸಿಟಿ ಅಂದ್ರೆ ಒಂದು ಹೆಸರಿದೆ. ಮನಮೋಹನ್ ಸಿಂಗ್ ಅವರಿಗೆ ಇನ್ನೂ ದೊಡ್ಡ ವಿವಿ ಕಟ್ಟಿ. ಅವರು ಪ್ರಧಾನ ಮಂತ್ರಿ ಹುದ್ದೆಯಲ್ಲಿದ್ದವರು. ಅವರ ಘನತೆಗೆ ತಕ್ಕಂತೆ ನಿರ್ಮಿಸಿ. ಅದನ್ನೂ ನಾವು ಸ್ವಾಗತಿಸುತ್ತೇವೆ. ಆದ್ರೆ ನೀವು ಹಳೆಯದಕ್ಕೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದೀರಿ. ಬೆಂಗಳೂರು ಸಿಟಿ ವಿವಿ ಹೆಸರು ತೆಗೆದು, ಮನಮೋಹನ್ ಸಿಂಗ್ ಹೆಸರು ನಿಲ್ಲಿಸುವ ತೇಪೆ ಕೆಲಸ ಏಕೆ? ಎಂದು ಸಚಿವ ಸುಧಾಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆ ವ್ಯಕ್ತಿಯ ಘನತೆಯನ್ನು ಹೆಚ್ಚಿಸುವಂತಹ ಹೊಸ ವಿಶ್ವವಿದ್ಯಾಲಯ ಕಟ್ಟಿ, ದಯವಿಟ್ಟು ಈ ಬಗ್ಗೆ ಸ್ವಲ್ಪ ಯೋಚನೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಅಶೋಕ್ ಸಲಹೆ ನೀಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications