ಭೋಜನ ಪ್ರಿಯರಿಗೆ ಬಾಯಿ ಚಪ್ಪರಿಸುವ ಸುದ್ದಿ: ಅಪ್ಪಾಜಿ ಕ್ಯಾಂಟೀನ್ನಲ್ಲಿ ಊಟದ ಸ್ಪರ್ಧೆ
Recommended Video

ಬೆಂಗಳೂರು, ಆಗಸ್ಟ್ 1: ಉತ್ತರ ಕರ್ನಾಟಕದ ಜೋಳದ ರೊಟ್ಟಿ, ದಕ್ಷಿಣ ಕರ್ನಾಟಕದ ಮುದ್ದೆ... ಯಾವುದು ಬೇಕು? ಎಷ್ಟು ಬೇಕು? ನಿಮ್ಮಿಂದ ಎಷ್ಟು ತಿನ್ನಲು ಸಾಧ್ಯವೋ ತಿಂದು ತೋರಿಸಿ. ಗೆದ್ದರೆ ಸಿಗುವ ಬಹುಮಾನ ಕೂಡ ಸಣ್ಣದ್ದೇನಲ್ಲ.
ಭೋಜನ ಪ್ರಿಯರಿಗೆ ಹೀಗೊಂದು ಅಪೂರ್ವ ಸ್ಪರ್ಧೆಯ ಆಹ್ವಾನವನ್ನು 'ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್' ನೀಡಿದೆ.
ಅಪ್ಪಾಜಿ ಕ್ಯಾಂಟೀನ್ಗೆ ಒಂದು ವರ್ಷ ತುಂಬಿದ ಸಂಭ್ರಮಾಚರಣೆಗಾಗಿ ಆಗಸ್ಟ್ 4ರ ಶನಿವಾರ ಈ ಊಟದ ಸ್ಪರ್ಧೆ ಆಯೋಜಿಸಲಾಗಿದೆ.

ಬೆಂಗಳೂರಿನ ಹನುಮಂತನಗರದ 50 ಅಡಿ ರಸ್ತೆಯಲ್ಲಿರುವ 'ನಮ್ಮ ಅಪ್ಪಾಜಿ ಕ್ಯಾಂಟೀನ್'ನಲ್ಲಿ ಸ್ಪರ್ಧೆ ನಡೆಯಲಿದ್ದು, ರಾಗಿಮುದ್ದೆ, ಬಸ್ಸಾರು, ಜೋಳದ ರೊಟ್ಟಿ ಮತ್ತು ಎಣ್ಣೆಗಾಯಿ ಜೋಡಿಯ ಭರ್ಜರಿ ಊಟದ ಪೈಪೋಟಿ ನಡೆಯಲಿದೆ.
ಗೆದ್ದವರಿಗೆ ಇಲ್ಲಿ ಭರ್ಜರಿ ಬಹುಮಾನವನ್ನೂ ನೀಡುವುದಾಗಿ ಘೋಷಿಸಲಾಗಿದೆ.
ಆಯೋಜಕರು ನೀಡುವ ಸಮಯದ ಮಿತಿಯೊಳಗೆ ಎಷ್ಟು ಮುದ್ದೆ ಅಥವಾ ರೊಟ್ಟಿ ತಿನ್ನುತ್ತಾರೆ ಎನ್ನುವುದರ ಮೇಲೆ ವಿಜೇತರ ನಿರ್ಧಾರವಾಗುತ್ತದೆ.
ಹೀಗೆ ಗೆದ್ದವರಲ್ಲಿ ಪ್ರಥಮ ಬಹುಮಾನ ಪಡೆದವರಿಗೆ ಅಪ್ಪಾಜಿ ಕ್ಯಾಂಟೀನ್ನಲ್ಲಿ 30 ದಿನಗಳ ಕಾಲ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟ ಉಚಿತವಾಗಿ ಸಿಗಲಿದೆ.
ಎರಡನೆಯ ಬಹುಮಾನ ಪಡೆದವರಿಗೆ 20 ಹಾಗೂ ಮೂರನೇ ಬಹುಮಾನ ಪಡೆದವರಿಗೆ 10 ದಿನ ಉಪಾಹಾರ ಮತ್ತು ಮಧ್ಯಾಹ್ನದ ಭೋಜನ ಉಚಿತವಾಗಿ ಸಿಗಲಿದೆ.
ಹಾಗೆಂದು ಎಲ್ಲರಿಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಮೊದಲು ನೋಂದಾಯಿಸಿದ 10 ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications