ನಮ್ಮ ಬೆಂಗಳೂರು ಪ್ರಶಸ್ತಿ ಬಗ್ಗೆ ತನಿಖೆ ಆಗಲಿ: ರೂಪಾ ಮೌದ್ಗಿಲ್
ಬೆಂಗಳೂರು, ಮಾರ್ಚ್ 26: "ವೇದಿಕೆಯಲ್ಲಿ ಪ್ರಶಸ್ತಿ ನೀಡುವವರೆಗೆ ಪ್ರಶಸ್ತಿ ವಿಜೇತರು ಯಾರು ಅಂತ ಗೊತ್ತಾಗುವುದಿಲ್ಲ ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನದವರೇ ಹೇಳುತ್ತಾರೆ. ಆದರೆ ಪ್ರಶಸ್ತಿ ಬಂದಿಲ್ಲ ಅನ್ನೋದು ನನಗೆ ಹೇಗೆ ಗೊತ್ತಾಗುತ್ತದೆ? ಹಾಗೆ ಗೊತ್ತಾಗುತ್ತದೆ ಅಂದರೆ ಆ ತೀರ್ಪುಗಾರರ ಬಗ್ಗೆಯೇ ಅನುಮಾನ ಬರುವುದಿಲ್ಲವೆ?" ಎಂದು ಪ್ರಶ್ನಿಸಿದರು ಐಪಿಎಸ್ ಅಧಿಕಾರಿ ರೂಪಾ ಡಿ. ಮೌದ್ಗಿಲ್.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ನಮ್ಮ ಬೆಂಗಳೂರು ಪ್ರತಿಷ್ಠಾನದ ಪ್ರಶಸ್ತಿಗಾಗಿ ಸರಕಾರಿ ಅಧಿಕಾರಿ ಕ್ಯಾಟಗರಿಯಲ್ಲಿ ಒಬ್ಬರು ಬಹಳ ಲಾಬಿ ಮಾಡಿದರು. ಪ್ರಶಸ್ತಿ ಸಿಗುವುದಿಲ್ಲ ಅಂತ ಖಾತ್ರಿಯಾದಾಗ ತಾವು ಪ್ರಶಸ್ತಿ ನಿರಾಕರಿಸಿದ್ದಾಗಿ ಪತ್ರ ಬರೆದಿದ್ದಾರೆ. ಮತ್ತು ಕೆಲ ಆರೋಪ ಮಾಡಿದ್ದಾರೆ. ಆ ಬಗ್ಗೆ ಸ್ಪಷ್ಟನೆ ನೀಡುತ್ತಿರುವುದಾಗಿ ಹಲವು ಅಂಶಗಳನ್ನು ಪ್ರತಿಷ್ಠಾನ ನೀಡಿತ್ತು. ಆ ಪತ್ರಕ್ಕೆ ರೂಪಾ ಅವರು ಪ್ರತಿಕ್ರಿಯಿಸಿದ್ದು ಹೀಗೆ.
"ಈ ವರೆಗೆ ರಾಜೀವ್ ಚಂದ್ರಶೇಖರ್ ಅವರು ಪಕ್ಷೇತರ ರಾಜ್ಯಸಭಾ ಸದಸ್ಯರಾಗಿದ್ದರು. ಈಚೆಗೆ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಆಗಿದ್ದಾರೆ. ಕಳೆದ ಎರಡು ವರ್ಷದಿಂದ ರಾಜ್ಯ ಸರಕಾರದ ವಿರುದ್ಧ ನಮ್ಮ ಬೆಂಗಳೂರು ಪ್ರತಿಷ್ಠಾನ ಕೆಲವು ಹೋರಾಟ ನಡೆಸಿಕೊಂಡು ಬಂದಿದೆ. ಸ್ಟೀಲ್ ಸೇತುವೆ ಬೇಡ ಇರಬಹುದು ಅಥವಾ ಕಾವೇರಿ ನೀರಿನ ಜತೆ ಚರಂಡಿ ನೀರು ಸೇರುತ್ತಿದೆ ಎಂಬುದು ಇರಬಹುದು. ಅದರ ಸರಿ-ತಪ್ಪಿನ ಬಗ್ಗೆ ನಾನು ಮಾತನಾಡಲ್ಲ" ಎಂದು ರೂಪಾ ಡಿ ಮೌದ್ಗಿಲ್ ಹೇಳಿದ್ದಾರೆ.

"ನಾವು ಅಂದರೆ ಅಧಿಕಾರಿಗಳೇ ಎಷ್ಟೋ ಪ್ರಕರಣದಲ್ಲಿ ಸರಕಾರವನ್ನು ಪ್ರತಿನಿಧಿಸುತ್ತೇವೆ. ಕಳೆದ ಎರಡು ವರ್ಷದಿಂದ ನಮ್ಮ ಬೆಂಗಳೂರು ಪ್ರತಿಷ್ಠಾನವು ಸರಕಾರಿ ಅಧಿಕಾರಿ ಕ್ಯಾಟಗರಿಯಲ್ಲಿ ಯಾರಿಗೆ ಪ್ರಶಸ್ತಿ ನೀಡಿದ್ದಾರೆ ಗಮನಿಸಿ. ಇದು ತಿಳಿದುಕೊಳ್ಳುವುದಕ್ಕೆ ರಾಕೆಟ್ ಸೈನ್ಸ್ ಬೇಡ. ಸರಕಾರದ ಪರ ಕೋರ್ಟ್ ಗೆ ತೆರಳುವ ಅಧಿಕಾರಿಗಳಿಗೇ ಪ್ರಶಸ್ತಿ ನೀಡುವ ಔಚಿತ್ಯ ಏನು? ಈ ಬಗ್ಗೆ ತನಿಖೆ ಆಗಬೇಕು" ಎಂದು ರೂಪಾ ಮೌದ್ಗಿಲ್ ಆಗ್ರಹಿಸಿದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications