Namma Clinics in Bengaluru : ಬಿಬಿಎಂಪಿ: 243 ನಮ್ಮ ಕ್ಲಿನಿಕ್ ಸ್ಥಾಪನೆ, ವೈದ್ಯರ ನೇಮಕಕ್ಕೆ ಸೂಚನೆ
ಬೆಂಗಳೂರು, ಡಿಸೆಂಬರ್ 15: 2023ರ ಜನವರಿ ಮೊದಲ ವಾರದೊಳಗೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ 243 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಬೇಕು. ಜೊತೆಗೆ ಎಲ್ಲ ನಮ್ಮ ಕ್ಲಿನಿಕ್ಗಳಿಗೆ ಸೂಕ್ತ ವೈದ್ಯರನ್ನು ಶೀಘ್ರವಾಗಿ ನೇಮಕ ಮಾಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಡಿದರು.
ಬಿಬಿಎಂಪಿಯಲ್ಲಿ ಸ್ಥಾಪಿಸಲಾಗುವ ನಮ್ಮ ಕ್ಲಿನಿಕ್ಗಳಿಗೆ ಅವಶ್ಯವಿರುವ ಔಷಧಿಗಳನ್ನು ರಾಷ್ಟ್ರೀಯ ನಗರ ಆರೋಗ್ಯ ಮಿಷನ್ (ಎನ್ಯುಎಚ್ಎಂ) ಮಾರ್ಗಸೂಚಿ ಅನ್ವಯ 2/3ರ ಪ್ರಮಾಣವನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (ಕೆಎಸ್ಎಂಎಸ್ಸ್ಸಿಎಲ್)ದಿಂದ ಸರಬರಾಜು ಮಾಡಲು ಕ್ರಮ ವಹಿಸುವಂತೆ ಅವರು ತಿಳಿಸಿದರು.

ನಮ್ಮ ಕ್ಲಿನಿಕ್ಗಳಿಗೆ ಅವಶ್ಯವಿರುವ ಪಿಠೋಪಕರಣಗಳು, ವೈದ್ಯಕೀಯ ಉಪಕರಣಗಳು, ಐಸಿಟಿ ಉಪಕರಣಗಳು, ಲ್ಯಾಬ್ ರಿಏಜೆಂಟರ್ಗಳು, ಬ್ರಾಂಡಿಂಗ್ ಕಾರ್ಯಗಳನ್ನು ಮಾರ್ಗಸೂಚಿ ಅನ್ವಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ. ಜನವರಿ ಮೊದಲನೇ ವಾರದೊಳಗೆ ಎಲ್ಲಾ ನಮ್ಮ ಕ್ಲಿನಿಕ್ಗಳಿಗೆ ಸರಬರಾಜು ಮಾಡುವಂತೆ ನೋಡಿಕೊಳ್ಳಬೇಕು.
ಜನವರಿಗೆ 243 ನಮ್ಮ ಕ್ಲಿನಿಕ್ಗಳ ಉದ್ಘಾಟನೆ
ನಮ್ಮ ಕ್ಲಿನಿಕ್ಗಳಿಗೆ ವೈದ್ಯಾಧಿಕಾರಿಗಳನ್ನು ನಿಯೋಜಿಸಿಕೊಳ್ಳಲು ಅನೇಕ ಬಾರಿ ವಾಕ್-ಇನ್ ಪ್ರಕ್ರಿಯೆಯ ಕೈಗೊಂಡರು ಸಹ ವೈದ್ಯಾಧಿಕಾರಿಗಳ ಹುದ್ದೆಗೆ ಅಭ್ಯರ್ಥಿಗಳು ವರದಿ ಮಾಡಿಕೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೌನ್ಸಿಲಿಂಗ್ಗೆ ಅರ್ಹರಿರುವ ಕಡ್ಡಾಯ ಕರಾರು ಅವಧಿ ಸೇವೆಯ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ಬಿಬಿಎಂಪಿಯ ನಮ್ಮ ಕ್ಲಿನಿಕ್ಗಳಿಗೆ ನಿಯೋಜಿಸಿ ಎಂದರು.
ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ ಮಾತನಾಡಿ, ಡಿಸೆಂಬರ್ ಅಂತ್ಯಕ್ಕೆ 243 ನಮ್ಮ ಕ್ಲಿನಿಕ್ಗಳ ದುರಸ್ತಿ ನವೀಕರಣ ಕಾಮಗಾರಿಯ ಕಾರ್ಯ ಪೂರ್ಣಗೊಳ್ಳಲಿವೆ. ಜನವರಿ ಎರಡನೇ ವಾರದಲ್ಲಿ ಎಲ್ಲ 243 ನಮ್ಮ ಕ್ಲಿನಿಕ್ಗಳು ಪೂರ್ಣ ಸಿದ್ಧತೆಗಳೊಂದಿಗೆ ಉದ್ಘಾಟನೆಗೊಳ್ಳಲಿವೆ ಎಂದು ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ವ್ಯವಸ್ಥಾಪಕ ನವೀನ್ ಭಟ್, ಪಶ್ಚಿಮ ವಲಯದ ಜಂಟಿ ಆಯುಕ್ತ ಯೋಗೇಶ್, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಮೊದಲಾದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications