ನಮ್ಮ ಮೆಟ್ರೋ 2ನೇ ಹಂತ ವಿಳಂಬದಿಂದಾಗಿ ಬೊಕ್ಕಸಕ್ಕೆ ₹10,000 ಕೋಟಿ ಹೊರೆ
ಬೆಂಗಳೂರು, ಜುಲೈ 26: ಬೆಂಗಳೂರು ನಮ್ಮ ಮೆಟ್ರೋ ಯೋಜನೆಗಳು, ಹೊಸ ಮಾರ್ಗ ನಿರ್ಮಾಣ ಕಾರ್ಯ ನಡೆಯುತ್ತಲೆ ಇದೆ. ನಮ್ಮ ಮೆಟ್ರೋ ಎರಡನೇ ಹಂತ ಯೋಜನೆಯು ಕಾಮಗಾರಿಗೆ ಹತ್ತು ವರ್ಷಗಳ ಹಿಂದೆಯೇ ಅನುಮೋದನೇ ನೀಡಿ ನಿಗದಿತ ಗಡುವು ನೀಡಲಾಗಿದೆ. ಎಲ್ಲವು ಅಂದುಕೊಂಡಂತೆ ಟೈಮ್ ಪಿರಿಯಡ್ ನಲ್ಲಿ ಕೆಲಸ ಪೂರ್ಣಗೊಳ್ಳದ ಕಾರಣ ಬೊಕ್ಕಸಕ್ಕೆ ₹10,000 ಕೋಟಿ ಹೊರೆ ಆಗಿದೆ.
ಹೌದು, ನಮ್ಮ ಮೆಟ್ರೊ 75.06 ಕಿಮೀ ವ್ಯಾಪ್ತಿಯ 2ನೇ ಹಂತದ ಕಾಮಗಾರಿ ವೆಚ್ಚವು ಮತ್ತೆ ಪರಿಷ್ಕರಣೆಗೊಂಡಿದೆ. ಅಂದಾಜು ವೆಚ್ಚ ಇಂದಿನ ದಿನಮಾನಗಳಿ ಅನುಗುಣವಾಗಿ ಪರಿಷ್ಕರಣಗೊಂಡಿದ್ದು, ಸುಮಾರು 40,000 ಕೋಟಿ ರೂ.ಗೆ ಏರಿದೆ, ಇದು ದಶಕದ ಹಿಂದೆ ಶೇ.52 ರಷ್ಟು ಮೂಲ ವೆಚ್ಚ ಪ್ರಸ್ತಾಪಿಸಲಾಗಿತ್ತು.

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನ ಎರಡನೇ ಹಂತದ ಯೋಜನೆಗೆ ಕಾಮಗಾರಿಯ ವೆಚ್ಚದ ಅನುಮೋದನೆಗಾಗಿ ನಗರಾಭಿವೃದ್ಧಿ ಇಲಾಖೆ (UDD) ಮೂಲಕ ರಾಜ್ಯ ಹಣಕಾಸು ಇಲಾಖೆಗೆ ಪರಿಷ್ಕೃತ ವೆಚ್ಚ ಸಹಿತ ಪ್ರಸ್ತಾವನೆ ರವಾನಿಸಿತ್ತು.
ಆರಂಭದಲ್ಲಿ 26,405 ರೂ.ಗೆ ಅನುಮೋದನೆ
ಈ ಉದ್ದೇಶಿತ 72 ಕಿಮೀ ಮೆಟ್ರೋ ಯೋಜನೆಯ ಕಾಮಾಗಾರಿ ಆರಂಭಿಸಲು 2014 ರಲ್ಲಿ ಅನುಮೋದನೆ ನೀಡಿತ್ತು. ನಂತರ 3 ಕಿಮೀ ಹೆಚ್ಚಿಸಲಾಯಿತು. ಆಗ ಯೋಜನೆಯಲ್ಲಿ 26,405 ಕೋಟಿ ರು. ವೆಚ್ಚದಲ್ಲಿ ಪೂರ್ಣಗೊಳಿಸುವಂತೆ 2019 ರ ಗಡುವು ನಿಗದಿ ಮಾಡಲಾಯಿತು.

ಆದರೆ ಅದು ಯೋಜನೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ 2021ರಲ್ಲಿ ಮತ್ತೆ ಅಂದಾಜು ವೆಚ್ಚವನ್ನು 30,695 ಕೋಟಿಗೆ ಪರಿಷ್ಕರಣೆ ಮಾಡಿ ಅನುಮೋದಿಸಲಾಯಿತು. ನಂತರ ಪರಿಷ್ಕೃತ ಭೂಸ್ವಾಧೀನ ವೆಚ್ಚಗಳು, ಹೆಚ್ಚುವರಿ ಕಿಮೀ ಸೇರ್ಪಡೆ. ಹಣದುಬ್ಬರ, ಸಾಂಕ್ರಾಮಿಕ ಕೋವಿಡ್ ಕಾರಣದಿಂದಾಗಿ ಯೋಜನೆ ಮತ್ತೆ ವಿಳಂಬವಾಯಿತು. ಇದೀಗ ಮತ್ತೆ ಅಂದಾಜು ವೆಚ್ಚವನ್ನು ಹೆಚ್ಚಿಸಿ ಪರಿಷ್ಕರಣೆಗೆ ಕೇಳಲಾಗಿದೆ.
ರೂ. 40000 ಕೋಟಿಗೆ ಪರಿಷ್ಕರಿಸಲು ಪ್ರಸ್ತಾವ
ಇಂದಿನ ಸನ್ನಿವೇಶದಲ್ಲಿ 30ಸಾವಿರ ಕೋಟಿ ಅಂದಾಜು ವೆಚ್ಚವನ್ನು 10,000 ಕೋಟಿ ಹೆಚ್ಚುವರಿಯಾಗಿ ಪರಿಗಣಿಸಿ ಅನುಮೋದಿಸಿದರೆ ಒಟ್ಟು 40000 ಕೋಟಿಗೆ ಏರಿಕೆ ಆಗುತ್ತದೆ. ನಿಗದಿತ ಸಮಯದಲ್ಲಿ (2021) ಪೂರ್ಣಗೊಂಡಿದ್ದರೆ, ಈ ಹೆಚ್ಚುವರಿ ಆರ್ಥಿಕ ಹೊರೆ ತಪ್ಪುತ್ತಿತ್ತು.
ಬಿಎಂಆರ್ಸಿಎಲ್ ಅಧಿಕಾರಿಗಳ ಪ್ರಕಾರ, ಮೆಟ್ರೋ ಎರಡನೇ ಹಂತದ ರೀಚ್-2 ಪಶ್ಚಿಮ ವಿಸ್ತರಣೆಯು ಕೆಂಗೇರಿಯಲ್ಲಿ ಕೊನೆಗೊಳ್ಳಲಿದೆ. ಇದನ್ನು ಚಲ್ಲಘಟ್ಟದವರೆಗೆ ವಿಸ್ತರಿಸಲಾಗಿದೆ. ನಾವು ಕಾಡುಗೋಡಿಯ (ವೈಟ್ಫೀಲ್ಡ್) ಪೂರ್ವ ಭಾಗದಲ್ಲಿ ಮತ್ತೊಂದು ಡಿಪೋವನ್ನು ಸೇರಿಸಿದ್ದೇವೆ ಎಂದರು.
ಖರ್ಚು ಏರಿಕೆಗೆ ಕಾರಣ ತಿಳಿಸಿದ BMRCL
ಯೋಜನೆಗಾಗಿಯೇ ಹೆಚ್ಚುವರಿಯಾಗಿ 44 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳುತ್ತಿದ್ದೇವೆ. ಪರಿಹಾರದ ಮೊತ್ತವು 438 ಕೋಟಿ ರೂ.ನಿಂದ ಸುಮಾರು 6,300 ಕೋಟಿ ರೂ.ಗೆ ಏರಿಕೆ ಆಗಿದೆ. ನಾವು ಮೂಲತಃ ಯೋಜಿತ 84.33 ಹೆಕ್ಟೇರ್ ಬದಲಿಗೆ 128.36 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದೇವೆ. ಇನ್ನೂ ರೀಚ್ 5 ವ್ಯಾಪ್ತಿಯಲ್ಲಿ ಆರ್ವಿ. ರಸ್ತೆ, ಬೊಮ್ಮಸಂದ್ರ ಮಾರ್ಗಕ್ಕಾಗಿ ಹೆಚ್ಚುವರಿ ಭೂಮಿ ಸ್ವಾಧೀನ ಮಾಡಿಕೊಂಡಿದ್ದೇವೆ ಎಂದು ಖರ್ಚು ಹೆಚ್ಚಾಗುತ್ತಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications