Namma Metro: 3ನೇ ಹಂತದ ಯೋಜನೆಗೆ 'ಡಬಲ್ ಡೆಕ್ಕರ್' ಪ್ರಸ್ತಾವನೆಯೇ ಅಡ್ಡಿ!, ಮುಂದೇನು?
ಬೆಂಗಳೂರು, ಆಗಸ್ಟ್ 02: ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)ವು ನಮ್ಮ ಮೆಟ್ರೋ ಮೂರನೇ ಹಂತ ಯೋಜನೆ ಆರಂಭಿಸಲು ಉತ್ಸುಕದಲ್ಲಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಬಹುಕೋಟಿ ವೆಚ್ಚದ ಈ ಯೋಜನೆಗೆ ಅನುಮೋದನೆ ನೀಡಿದೆ. ಆದರೆ ಸಂಪುಟ ಅನುಮೋದನೆ ನೀಡುವ ಮೊದಲೇ BMRCL ಗೆ ಮತ್ತೊಂದು ತಲೆನೋವು ಶುರುವಾಗಿದೆ.
ಮೂರು ಎಲಿವೆಟೆಡ್ ಕಾರಿಡಾರ್ಗಳಲ್ಲಿ ಸರಿಸುಮಾರು 80 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಪ್ಲಾನ್ ಮಾಡಲಾಗಿದೆ. ಯೋಜನೆ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಸುಮಾರು ರೂ.15000 ಕೋಟಿಯ ಯೋಜನೆಗೆ ಮತ್ತೊಂದು ಸವಾಲು ಎದುರಾಗಿದೆ.

ಬೆಂಗಳೂರು ನಮ್ಮ ಮೆಟ್ರೋ ರೈಲು ನಿಗಮವು (BMRCL) ಯೋಜನೆ ಆರಂಭಿಸಲು ಸಂಪುಟ ಅಂತಿಮ ಅನುಮೋದನೆಗೆ ಕಾಯುತ್ತಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಮುಂದಿನ ಎಲ್ಲ ನೂತನ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಿಸಬೇಕು ಎಂದು ಸೂಚಿಸಿದೆ.
ಹೊಸ ಪ್ರಸ್ತಾವನೆ, ಉದ್ದೇಶಿತ ಯೋಜನೆಗಳಿಗೆ ಅಡ್ಡಿ?
ಸರ್ಕಾರದ ಈ ಸೂಚನೆಯು ಈಗಾಗಲೇ ವರ್ಷಗಳ ಕಾಲ ಅಧ್ಯಯನ ಮಾಡಿ, ಜಾಗ ಗುರುತಿಸಿ, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ, ಅಡೆತಡೆ ನಿವಾರಿಸಿ ಅನುಮೋದನೆ ಪಡೆಯಲಾಗಿದೆ. ಇನ್ನೇನು ಯೋಜನೆ ಆರಂಭವಾಗಬೇಕು ಎಂದಾಗಿ, ಈ ಡಬಲ್ ಡೆಕ್ಕರ್ ಮಾದರಿ ಮೆಟ್ರೋ ಮಾರ್ಗ ನಿರ್ಮಾಣದ ನಿರ್ಧಾರ (ಹೊಸ ಪ್ರಸ್ತಾವನೆ) ಬಿಎಂಆರ್ಸಿಎಲ್ಗೆ ಅಡ್ಡಿ ಆಗಲಿದೆ ಎಂಬುದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಯೋಜನೆಗೆ ಅಂತಿಮ ಒಪ್ಪಿಗೆ ನಿರೀಕ್ಷೆಯಲ್ಲಿದ್ದ ಅಧಿಕಾರಿಗಳು
ಈಗಾಗಲೇ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಸಾರ್ವಜನಿಕ ಹೂಡಿಕೆ ಮಂಡಳಿ ಒಪ್ಪಿಗೆ ನೀಡಿತ್ತು. ತದನಂತರವೇ ಹಣಕಾಸು ಸಚಿವಾಲಯವು ಅನುಮೋದನೆ ನೀಡಿತ್ತು. ಇದರ ಬೆನ್ನಲ್ಲೆ ಇನ್ನೇನು ಕೇಂದ್ರ ಸಂಪುಟದಿಂದ ಒಪ್ಪಿಗೆ ಸಿಗುತ್ತದೆ. ತಕ್ಷಣವೇ ಯೋಜನೆ ಆರಂಭಿಸಿದರಾಯಿತು ಎಂದುಕೊಂಡಿದ್ದ ಬಿಎಂಆರ್ಸಿಎಲ್ಗೆ ರಾಜ್ಯ ಸರ್ಕಾರದ ಡಬಲ್ ಡೆಕ್ಕರ್ ಮಾದರಿಯಲ್ಲಿ ಮೆಟ್ರೋ ಮಾರ್ಗ ನಿರ್ಮಾಣ ಪ್ರಸ್ತಾವ ಸವಾಲು ಒಡ್ಡಿದೆ.

ಯೋಜನೆಗೆ ಒಂದು ವೇಳೆ ಅನುಮೋದನೆ ದೊರೆತರೂ ನಮ್ಮ ಮೆಟ್ರೋ 3ನೇ ಹಂತ ಕಾಮಗಾರಿ ಆರಂಭವಾಗುವುದು ಅನುಮಾನ ಎನ್ನಲಾಗಿದೆ. ಏಕೆಂದರೆ ಯೋಜನೆ ಪ್ಲಾನ್ ಮತ್ತೊಮ್ಮೆ ಸಿದ್ದಪಡಿಸಿ, ಅಂದಾಜು ವೆಚ್ಚ ಪರಿಷ್ಕರಿಸಿ, ಇವೆಲ್ಲವುಗಳನ್ನು ಮತ್ತೆ ಚರ್ಚಿಸಿ ಸಂಬಂಧಿಸಿದ ಇಲಾಖೆಗಳಿಂದ ಮತ್ತೆ ಅನುಮೋದನೆ ಪಡೆಯುವ ಅನಿವಾರ್ಯತೆಯು ಎದುರಾಗಬೇಕು.
ಹೀಗಾದರೆ ಮತ್ತಷ್ಟು ವರ್ಷಗಳ ಕಾಲ ಮೂರು ಕಾರಿಡಾರ್ನಲ್ಲಿ ನಿರ್ಮಾಣವಾಗಬೇಕಿದ್ದ ಹಾಗೂ ನಮ್ಮ ಮೆಟ್ರೋ ಪ್ರಮುಖ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.
ನಮ್ಮ ಮೆಟ್ರೋ 3ನೇ ಹಂತದ ಯೋಜನೆ
* ಮೊದಲ ಕಾರಿಡಾರ್: ಜೆ.ಪಿ ನಗರ ನಾಲ್ಕನೇ ಹಂತದಿಂದ ಕೆಂಪಾಪುರ ವರೆಗೆ ಮಾರ್ಗ (32.15 ಕಿ.ಮೀ.) ಯೋಜನೆ.
* ಹೆಬ್ಬಾಳ-ಸರ್ಜಾಪುರವರೆಗೆ ಮಾರ್ಗ (37 ಕಿ.ಮೀ.) ಯೋಜನೆ.
* ಎರಡನೇ ಕಾರಿಡಾರ್: ಹೊಸಹಳ್ಳಿ-ಮಾಗಡಿರಸ್ತೆ ಕಡುಬಗೆರೆ ನಿಲ್ದಾಣವರೆಗಿನ ಮಾರ್ಗ ಯೋಜನೆ.
-
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications