Namma Metro: ಒಂದು ಮೆಟ್ರೋ ರೈಲು ಕ್ಲೀನ್ ಮಾಡೋಕೆ 6,200 ಲೀಟರ್ ನೀರು ಬೇಕಂತೆ.!-ಮೆಟ್ರೋ ಅಧಿಕಾರಿ ಹೇಳಿದ್ದೇನು?
ಬೆಂಗಳೂರು, ಮಾರ್ಚ್, 18: ಇದೀಗ ದೇಶದ ಬಹುತೇಕ ಭಾಗಗಳಲ್ಲಿ ಮಳೆ ಕೊರತೆ ಕಾರಣ ಭೀಕರ ಬರಗಾಲದಿಂದ ಜನರು ಬೇಸತ್ತು ಹೋಗಿದ್ದಾರೆ. ಹಾಗೆಯೇ ಮತ್ತೊಂದೆಡೆ ಈಗಾಗಲೇ ಪ್ರಮುಖ ಜಲಾಶಯಗಳಲ್ಲೂ ಕೂಡ ನೀರು ತಳ ಹಂತವನ್ನು ತಲುಪಿದೆ. ಅಲ್ಲದೇ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಅದರಲ್ಲೂ ಕರ್ನಾಟಕ ರಾಜ್ಯದ ರಾಜಧಾನಿಯಲ್ಲಂತೂ ನೀರಿಗೆ ಬರಬಂದಂತಾಗಿದೆ.
ಇನ್ನು ಒಂದು ಬೆಂಗಳೂರು ನಮ್ಮ ಮೆಟ್ರೋದ ಒಂದು ರೈಲನ್ನು ಸ್ವಚ್ಛಗೊಳಿಸಲು 6,200 ಲೀಟರ್ ನೀರು ಬೇಕು ಅಂತೆ ಎಂದು ಬಿಎಂಆರ್ಸಿಎಲ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇಂತಹ ಸಮಯದಲ್ಲಿ ಇಷ್ಟುಂದು ನೀರು ದುಂದುವೆಚ್ಚ ಬೇಕಾ ಅಂತಿದ್ದಾರೆ ನಮ್ಮ ಜನರು. ಹಾಗದರೆ ಇದಕ್ಕೆ ಇನ್ನೇನೆಲ್ಲ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ ಹಾಗೂ ಮೆಟ್ರೋ ರೈಲಿನ ಸ್ವಚ್ಛತೆ ಕಾರ್ಯ ಹೇಗೆ ನಡೆಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನ ನಮ್ಮ ಮೆಟ್ರೋ ನಗರದ ಅತ್ಯಂತ ಸ್ವಚ್ಛ ಸಾರಿಗೆ ಎಂದೇ ಪ್ರಖ್ಯಾತಿ ಪಡೆದಿದೆ. ನಮ್ಮ ಮೆಟ್ರೋ ರೈಲಿನ್ನು ಸ್ವಚ್ಛಗೊಳಿಸುವ ಹಂತ-ಹಂತದ ಪ್ರಕ್ರಿಯೆಯನ್ನು ಇಲ್ಲಿ ತಿಳಿಯಿರಿ. ಎರಡು ವಾರಗಳಿಗೆ ಒಮ್ಮೆ ಎಲ್ಲಾ ರೈಲುಗಳನ್ನು ಸ್ವಚ್ಛಗೊಳಿಸಲಾಗುತ್ತದೆ ಎನ್ನುವ ಮಾಹಿತಿ ಇದೆ. ಮರುಬಳಕೆಯ ನೀರಿನಿಂದ ಮೆಟ್ರೋವನ್ನು ಸ್ವಚ್ಛಗೊಳಿಸಲಾಗುತ್ತದೆ ಎನ್ನುವ ಮಾಹಿತಿಯೂ ಇದೆ.
ಇನ್ನು ಬಿಎಂಆರ್ಸಿಎಲ್ ಮೆಟ್ರೋ ಸ್ವಚ್ಛಗೊಳಿಸಲು 2 ಸಾವಿರಕ್ಕೂ ಹೆಚ್ಚು ಕಾರ್ಮಿಕರನ್ನು ನೇಮಿಸಿಕೊಂಡಿದೆ. ಒಟ್ಟು ಪ್ರತೀ ತಿಂಗಳು ನಮ್ಮ ಮೆಟ್ರೋ ಸ್ವಚ್ಛತೆಗೆಂದು 30 ಸಾವಿರ ಲೀಟರ್ ನೀರನ್ನು ವಿನಿಯೋಗಿಸಲಾಗುತ್ತದೆ. ಇನ್ನು ಒಂದು ಮಟ್ರೋ ಸ್ವಚ್ಛತೆಗೆ 6,200 ಲೀಟರ್ ನೀರು ಬಳಸಲಾಗುತ್ತದೆ ಎನ್ನುವ ಮಾಹಿತಿ ಇದೆ.
ಇದೀಗ ರಾಜ್ಯದಲ್ಲಿ ಬರಗಾಲ ತಾಂಡವ ಆಡುತ್ತಿದ್ದು, ರೈತರು, ಜನರು ಬಿಸಿಲಿನ ಧಗೆಗೆ ಬೆಂದು ಹೋಗಿದ್ದಾರೆ. ಈಗಲೇ ಹಿಂಗಾದ್ರೆ, ಇನ್ನು ಮುಂದಿನ ದಿನಗಳಲ್ಲಿ ಹೆಚ್ಚಳ ಆಗುವ ಬಿಸಿಲಿಗೆ ಹೇಗೆ ತಡೆದುಕೊಳ್ಳಬೇಕು ಎನ್ನುವ ಆತಂಕ ಜನರಲ್ಲಿ ಕಾಡುತ್ತಿದೆ. ಈ ನಡುವೆ ಕೊಡಗು, ಮೈಸೂರು, ಚಿಕ್ಕಗಳೂರು, ದಕ್ಷಿಣ ಕನ್ನಡದ ಕೆಲವೆಡೆ ಅಲ್ಪ ಮಳೆಯಾಗಿದೆ. ಬಿಟ್ಟರೆ ಉಳಿದೆಡೆ ತಾಪಮಾನ ಏರಿಕೆ ಆಗುತ್ತಲೇ ಇದೆ.
ಹವಾಮಾನ ಇಲಾಖೆ ಮಾರ್ಚ್ 20 ರ ಬಳಿಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ನೀಡಿದ್ದು, ಇದರಿಂದ ಜನರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ಈಗಾಗಲೇ ಹಲವು ಮುನ್ಸೂಚನೆಗಳು ಸುಳ್ಳಾಗಿದ್ದು, ಈ ಸೂಚನೆಯಾದರೂ ನಿಜವಾಗದಿದ್ದರೆ ನಮ್ಮ ಗತಿ ಏನು ಅಂತಿದ್ದಾರೆ ಜನರು.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ಬೋರ್ವೆಲ್ಗಳಲ್ಲಿ ನೀರಿಲ್ಲದ ಕಾರಣ ಟ್ಯಾಂಕರ್ಗಳನ್ನಿಟ್ಟು ನೀರು ಹೊಡೆಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಮಯದಲ್ಲಿ ಒಂದು ನಮ್ಮ ಮಟ್ರೋ ರೈಲು ಸ್ವಚ್ಛತೆ ಮಾಡಲು ಇಷ್ಟು ನೀರು ಬೇಕಾ ಎಂದು ಜನರು ಕೆಂಡಕಾರುತ್ತಿದ್ದಾರೆ. ಇದಕ್ಕೆ ಬಿಎಂಆರ್ಸಿಎಲ್ ಅಧಿಕಾರಿಗಳು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದು ನೋಡಬೇಕಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications