BREAKING: ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಸಾವು, ರೈಲು ಸಂಚಾರ ಸ್ಥಗಿತ: BMRCL
ಬೆಂಗಳೂರು, ಮಾರ್ಚ್ 21: ರಾಜಧಾನಿ ಬೆಂಗಳೂರು ನಮ್ಮ ಮೆಟ್ರೋ (Namma Metro) ಹಳಿಗೆ ಜಿಗಿಯುವ ಪ್ರಕರಣಗಳು ಮೇಲಿಂದ ಮೇಲೆ ವರದಿ ಆಗುತ್ತಲೇ ಇವೆ. ಇಂದು ಗುರುವಾರದಂದು (ಮಾರ್ಚ್ 21) ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಜಿಗಿದ ಘಟನೆ ನೇರಳೆ ಮಾರ್ಗದಲ್ಲಿ (Metro Purple Line) ನಡೆದಿದೆ.
ಗುರುವಾರ ಮಧ್ಯಾಹ್ನ 2.10ಕ್ಕೆ ಅತ್ತಿಗುಪ್ಪೆ ಮಟ್ರೋ ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆ ವ್ಯಕ್ತಿ ಟ್ರ್ಯಾಕ್ಗೆ ಜಿಗಿದಿದ್ದಾರೆ. ಈ ಟ್ಯಾಕ್ ವೇಳೆ 750 ವ್ಯಾಟ್ ವಿದ್ಯುತ್ ಪ್ರವಹಿಸುತ್ತಿರುತ್ತದೆ. ಹಳಿಗೆ ಜಿಗಿದ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ. ಹಳಿಗೆ ಜಿಗಿಯುತ್ತಿದ್ದಂತೆ ರೈಲು ಆತನ ಮೇಲೆ ಹರಿದು ಮುಂದೆ ಸಾಗಿದೆ. ವ್ಯಕ್ತಿ ಶವ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅತ್ತಿಗುಪ್ಪೆಯಲ್ಲಿ ಈ ಘಟನೆ ನಡೆಯುತ್ತಿದ್ದಂತೆ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಇದೇ ಮೊದಲ ಬಾರಿಗೆ ಟ್ರ್ಯಾಕ್ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಹಿಂದೆ ಒಂದೆರಡು ಬಾರಿ ಮೆಟ್ರೋ ಟ್ರ್ಯಾಕ್ ಮೇಲೆ ಪ್ರಯಾಣಿಕರು ಜಿಗಿದ ವರದಿ ಆಗಿತ್ತು. ಆದರೆ ಸಾವು ನೋವು ಸಂಭವಿಸಿರಲಿಲ್ಲ. ಸಾವಿನ ಘಟನೆ ಇದೇ ಮೊದಲು ಎನ್ನಲಾಗಿದೆ.
ಮೆಟ್ರೋ ಟ್ರ್ಯಾಕ್ಗೆ ಜಿಗಿದು ಮೃತಪಟ್ಟ ವ್ಯಕ್ತಿಯನ್ನು 20 ವರ್ಷದ ಯುವಕ ಎಂದು ತಿಳಿದು ಬಂದಿದೆ. ಬೆಂಗಳೂರಿನ ನ್ಯಾಷನಲ್ ಕಾನೂನು ಕಾಲೇಜು ವಿದ್ಯಾರ್ಥಿ. ಈತ ಮುಂಬೈ ಮೂಲದ ಧ್ರುವ ಎಂದು ಗುರುತಿಸಲಾಗಿದೆ ಎಂದು ನಮ್ಮ ಮೆಟ್ರೋ ಮೂಲಗಳು ಖಚಿತಪಡಿಸಿವೆ. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಾಗಡಿ ರಸ್ತೆಯಿಂದ ಕೆಂಗೇರಿ ಕಡೆ ಮೆಟ್ರೋ ಸಂಚಾರ ಬಂದ್
ರೈಲು ಮೈಸೂರು ರಸ್ತೆಯ ಚಲ್ಲಘಟ್ಟದಿಂದ ವೈಟ್ಫಿಲ್ಡ್ಗೆ ತೆರಳುವ ರೈಲು ಅತ್ತಿಗುಪ್ಪೆ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ಮಧ್ಯಾಹ್ನ ಈ ಘಟನೆ ಜರುಗಿದೆ.
This is to inform that one person has jumped in front of the train at Attiguppe station at the 2.10 pm . Presently trains are running only between Magadi road to Whitefield Feild and no services between magadi road to Challaghatta . fKI
— ನಮ್ಮ ಮೆಟ್ರೋ (@OfficialBMRCL) March 21, 2024
ವ್ಯಕ್ತಿ ಮೆಟ್ರೋ ಹಳಿಗೆ ಜಿಗದ ಘಟನೆ ತಿಳಿಯುತ್ತಿದ್ದಂತೆ ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆಯಿಂದ ಮಾತ್ರ ವೈಟ್ಫಿಲ್ಡ್ವರೆಗೆ ಓಡುತ್ತಿವೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟವರೆಗಿನ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ BMRCL ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ.
-
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications