Namma Metro: ಮೆಟ್ರೋ ರೈಲಿನಲ್ಲಿ 'ಗೋಬಿ ತಿಂದ' ವ್ಯಕ್ತಿಗೆ ಬಿತ್ತು ಭಾರೀ ದಂಡ, ಕ್ರಮ
ಬೆಂಗಳೂರು, ಅಕ್ಟೋಬರ್ 06: ಬೆಂಗಳೂರು ನಮ್ಮ ಮೆಟ್ರೋ ರೈಲಿನಲ್ಲಿ ನಿಯಮ ಮಿರಿ 'ಗೋಬಿ ಮಂಚೂರಿ' ತಿಂದ ವ್ಯಕ್ತಿ ವಿಡಿಯೋ ಆತನ ಸ್ನೇಹಿತರಿಂದಲೇ ವೈರಲ್ ಆಗಿದೆ. ಈ ವ್ಯಕ್ತಿ ವಿರುದ್ಧ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಪ್ರಕರಣ ದಾಖಲಿಸಿ ಅವರಿಂದ ದಂಡ ಕಟ್ಟಿಸಿಕೊಂಡಿದೆ.
ಬೆಂಗಳೂರು ನಮ್ಮ ಮೆಟ್ರೋ (Namma Metro) ರೈಲಿನೊಳಗೆ ಆಹಾರ ತಿಂದ ಘಟನೆ ಮತ್ತು ಆ ವಿಚಾರವಾಗಿ ದಂಡ ವಿಧಿಸಿರುವುದು ಇದೇ ಮೊದಲು ಎಂದು ಬಿಎಂಆರ್ಸಿಎಲ್ ಮೂಲಗಳು ಮಾಹಿತಿ ನೀಡಿವೆ.

ಕೆಲವು ದಿನಗಳ ಹಿಂದೆ ಸುನೀಲ್ ಕುಮಾರ್ ಮತ್ತು ಅವರ ಸ್ನೇಹಿತರು ಜಯನಗರದ ಪ್ರಮುಖ ಆಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ನಿತ್ಯದಂತೆ ಮೊನ್ನೆ ಮಂಗಳವಾರವು ಸಹ ಕೆಲಸಕ್ಕೆ ತೆರಳಲು ಸಂಪಿಗೆ ರಸ್ತೆ ನಿಲ್ದಾಣದಲ್ಲಿ ಮೆಟ್ರೋ ಏರಿದ್ದಾರೆ. ಈ ವೇಳೆ ಪಾರ್ಸೆಲ್ ತಂದಿದ್ದ ಗೋಬಿ ಮಂಚೂರಿಯನ್ನು ಸುನೀಲ್ ತಿಂದಿದ್ದಾರೆ. ಇದನ್ನು ಅವರ ಸ್ನೇಹಿತರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಆಧರಿಸಿ ಪ್ರಕರಣ ದಾಖಲಾಗಿದೆ.
ವೈರಲ್ ಆದ ಈ ವಿಡಿಯೋದಲ್ಲಿ ಸುನೀಲ್ ಅವರಿಗೆ ಮೆಟ್ರೋದಲ್ಲಿ ಆಹಾರ ತಿನ್ನಬಾರದು ಎಂದು ಸಲಹೆ ನೀಡುವುದು ಸಹ ಕೇಳುತ್ತದೆ. ಅವರ ಮಾತನ್ನು ಕೇಳಿಸಿಕೊಳ್ಳುತ್ತಲೆ ಗೋಬಿ ತಿಂದ ಸುನೀಲ್ ವಿರುದ್ಧ ನಿಯಮ ಉಲ್ಲಂಘನೆ ಅಡಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜೊತೆಗೆ ಅವರ ಮೇಲೆ 500 ರೂಪಾಯಿ ದಂಡ ವಿಧಿಸಲಾಗಿದೆ.
ನಮ್ಮ ಮೆಟ್ರೋಗೆ ಓಡಾಡುವ ಎಲ್ಲ ಪ್ರಯಾಣಿಕರು ನಿಯಮಗಳನ್ನು ಪಾಲಿಸುತ್ತಾರೆ. ಆದರೆ ಸುನೀಲ್ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆ ಗಮನಿಸಿದ ಮೆಟ್ರೋ ನಿಗಮದ ಸಿಬ್ಬಂದಿ ಅವರಿಗಾಗಿ ಜಯನಗರದಲ್ಲಿ ಕಾಯುತ್ತಿದ್ದರು. ಅವರು ಬರುತ್ತಿದ್ದಂತೆ ಹಿಡಿದು ಜಯನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ತಪ್ಪಿತಸ್ಥರ ಸುನೀಲ್ ಮತ್ತು ಅವರ ಸ್ನೇಹಿತರನ್ನು ಅರ್ಧ ದಿನ ಪೊಲೀಸ್ ಠಾಣೆಯಲ್ಲಿಯೆ ಇರಿಸಿಕೊಂಡು ಬುದ್ಧಿ ಹೇಳಿ ಕಳುಹಿಸಿದ್ಆರೆ ಎಂದು ತಿಳಿದು ಬಂದಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ










Click it and Unblock the Notifications