Bengaluru Metro: ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ, ನಿಲ್ದಾಣದಲ್ಲಿ ಶಿಕ್ಷಕಿಗೆ ಮೈ, ಕೈ ಮುಟ್ಟಿದ ಯುವಕ
ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿಗರಿಗೆ ಆರಾಮದಾಯಕ ಸಾರಿಗೆ ಸೇವೆ ನೀಡುತ್ತಿರುವ ನಮ್ಮ ಮೆಟ್ರೋ (Bengaluru Namma Metro) ರೈಲಿನಲ್ಲಿ ಇತ್ತೀಚಿನ ದಿನಗಳಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಆಗಾಗ ನಡೆಯುತ್ತಲೇ ಇದ್ದು, ಇವುಗಳಿಗೆ ಕಡಿವಾಣ ಹಾಕಬೇಕಿದೆ. ಇದೀಗ ಮತ್ತೊಂದು ಅಂತದ್ದೇ ಪ್ರಕರಣದಲ್ಲಿ ಶಿಕ್ಷಕಿಯೊಬ್ಬರು ಯುವಕನಿಂದ ಲೈಂಗಿಕ ಕಿರುಕುಳ ಎದುರಿಸಿದ ಘಟನೆ ನಡೆದಿದ್ದು, ಇದು ತಡವಾಗಿ ಬೆಳಕಿದೆ ಬಂದಿದೆ.
ಹೌದು, ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊಬ್ಬರಿಗೆ ಯುವಕ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವ್ಯಕ್ತಿಯನ್ನು ಮನೋಜ್ (26) ಎಂದು ಗುರುತಿಸಲಾಗಿದೆ. ಶಿಕ್ಷಕಿ ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ಇದೇ ತಿಂಗಳ ಡಿಸೆಂಬರ್ 25ರಂದು ಶಿಕ್ಷಕಿಯೊಬ್ಬರು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಯುವಕನಿಂದ ಲೈಂಗಿಕ ಕಿರುಕುಳ ಎದುರಿಸಿದ್ದಾರೆ. ಇವರು ಮೂಲತಃ ಶಂಕರಪುರ ಬಡಾವಣೆ ನಿವಾಸಿಯಾಗಿದ್ದು, ಘಟನೆ ದಿನ ಇವರು ವೈಟ್ಫಿಲ್ಡ್ಗೆ ಹೊರಟಿದ್ದರು. ಈ ಸಂಬಂಧ ಅವರು ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ರೈಲು ಹತ್ತಿದ್ದರು. ಅದೇ ರೈಲಿನಲ್ಲಿ ಆರೋಪಿ ಮನೋಜ್ ಸಹ ಸಂಚರಿಸುತ್ತಿದ್ದ.
ಕೈ,ಮೈ ಮುಟ್ಟಿ ಅಸಭ್ಯ ವರ್ತನೆ
ಮೆಜೆಸ್ಟಿಕ್ ಜಂಕ್ಷನ್ನಲ್ಲಿ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ರೈಲು ಬದಲಿಸಲು ಇಳಿದಾಗ ಈ ಮನೋಜ್ ಆ ಶಿಕ್ಷಕಿಯ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಇದರ ವಿರುದ್ಧ ಶಿಕ್ಷಕಿ ಕೂಡಲೇ ಮೆಟ್ರೋ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆಗ ಸಿಬ್ಬಂದಿ ಅರೋಪಿಯನ್ನು ಹಿಸಿದು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದರು.
ಆರೋಪಿಯು ಮದ್ಯದ ಅಮಲಿನಲ್ಲಿದ್ದು, ಈ ಕೃತ್ಯ ನಡೆಸಿದ್ದಾನೆ ಎಂಬುದು ಪತ್ತೆ ಆಗಿದೆ. ಹೀಗಾಗಿ ಆತನಿಗೆ ಎಚ್ಚರಿಕೆ ಕೊಟ್ಟು, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ನವೆಂಬರ್ ತಿಂಗಳಲ್ಲಿ ಕಿರುಕುಳ ಘಟನೆ
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನರು ತುಂಬಿ ತುಳುಕುತ್ತಿದ್ದರು. ಈ ವೇಳೆ ಗುಂಪಿನಲ್ಲಿ ರೈಲು ಏರುವಾಗಿ ಹಿಂದಿನಿಂದ ವ್ಯಕ್ತಿಯೊಬ್ಬರು ಅವರನ್ನು ಮುಟ್ಟಿದ್ದಾರೆ. ಕೂಡಲೇ ಯುವತಿಗೆ ಅರಿವಿಗೆ ಬರದಿದ್ದರೂ, ನಂತರ ಅವರು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಯುವತಿ ಸ್ನೇಹಿತರ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಡಿ. 8ರಂದು ರಾಜಾಜಿನಗರದಲ್ಲಿ ಘಟನೆ
ಈ ದಿನದಿಂದು ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ರೈಲು ಹತ್ತಿದ್ದ 22 ವರ್ಷದ ಯುವತಿಯ ಕೈ, ಮೈಯಿ ಮುಟ್ಟಿದ್ದ ಆರೋಪಿ ಲೋಕೇಶ್ ಎಂಬಾತ ಪರಾರಿಯಾಗಲು ಯತ್ನಿಸಿದ್ದ. ಕೂಡಲೇ ಭದ್ರತಾ ಸಿಬ್ಬಂದಿಯು ಆತನನ್ನು ಹಿಡಿದು ಹತ್ತಿರ ಪೊಲೀಸ ಠಾಣೆಗೆ ನೀಡಿದ್ದರು. ಇಂತಹ ಘಟನೆಗಳು ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮರುಕಳಿಸುತ್ತಲೇವೆ. ಮಹಿಳಾ ಸುರಕ್ಷತೆಗಾಗಿಯೇ ಮೆಟ್ರೋ ಪ್ಯಾನಿಕ್ ಬಟನ್, ಸಹಾಯವಾಣಿ ಆರಂಭಿಸಿದೆ. ಈ ಬಗ್ಗೆ ಪ್ರತಿ ಮಹಿಳೆಯು ಮಾಹಿತಿ ಪಡೆಯಬೇಕು. ತುರ್ತು ಸಂದರ್ಭದಲ್ಲಿ ಸಂಪರ್ಕಿಸಬೇಕು ಎಂಬುದು ನಮ್ಮ ಮೆಟ್ರೋ ಕಳಕಳಿಯಾಗಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications