Namma Metro: ಒಂದು ತಿಂಗಳ ಕಾಲ ಈ 2 ಮಾರ್ಗಗಳಲ್ಲಿ ಮೆಟ್ರೋ ರೈಲು ಓಡಾಡಲ್ಲ- ಯಾವ ಸಮಯ, ಯಾವ ಮಾರ್ಗ ತಿಳಿಯಿರಿ
ಬೆಂಗಳೂರು, ಜುಲೈ 08: ಸಿಗ್ನಲಿಂಗ್ ಹಾಗೂ ಇತರ ಕಾಮಗಾರಿಗಳು ನಡೆಯುತ್ತಿರುವುದರಿಂದ ನಮ್ಮ ಮೆಟ್ರೋದ ( Bengaluru Metro ) ಎರಡು ಮಾರ್ಗಗಳಲ್ಲಿ ಬೆಳಿಗ್ಗೆ ಸಮಯ ರೈಲುಗಳ ಸಂಚಾರವನ್ನು ಮೊಟಕುಗೊಳಿಸಲಾಗಿದೆ. ಇದು ಒಂದು ತಿಂಗಳ ಕಾಲ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ವಿ ರಸ್ತೆ- ಬೈಪ್ಪನಹಳ್ಳಿ ಮತ್ತು ಕೆಆರ್ ಪುರಂ- ವೈಟ್ಫೀಲ್ಡ್ನ ಎರಡು ಮಾರ್ಗಗಳಲ್ಲಿ ರೈಲುಗಳ ಸಂಚಾರವನ್ನು ತಡೆಯಲಾಗಿದೆ. ಬೆಳಿಗ್ಗೆ 5 ರಿಂದ 7 ರ ವರೆಗೆ ರೈಲು ಸೇವೆಗಳನ್ನು ಮೊಟಕುಗೊಳಿಸಲಾಗಿದೆ. ಈ ಕ್ರಮವು ಜುಲೈ 10 ರಿಂದ ಜಾರಿಗೆ ಬರಲಿದೆ. ಆಗಸ್ಟ್ 9, 2023 ರ ವರೆಗೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರಂ ನಡುವೆ ಸಿಗ್ನಲಿಂಗ್ ಮತ್ತು ಇತರ ಕೆಲಸಗಳಿಗೆ ಅನುಕೂಲವಾಗಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಬೈಯಪ್ಪನಹಳ್ಳಿ- ಕೆಆರ್ ಪುರಂ ಕಾರಿಡಾರ್ ಪರ್ಪಲ್ ಲೈನ್ನಲ್ಲಿ ಬರುತ್ತದೆ. ಅದರ ವಾಣಿಜ್ಯ ಕಾರ್ಯಾಚರಣೆಗೆ ಇನ್ನೂ ಆರಂಭವಾಗಿಲ್ಲ. ನಮ್ಮ ಮೆಟ್ರೋದ 2 ನೇ ಹಂತದ ಅಡಿಯಲ್ಲಿ, ಬೈಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ವರೆಗೆ ನೇರಳೆ ಮಾರ್ಗವನ್ನು ಬಿಎಂಆರ್ಸಿಎಲ್ ವಿಸ್ತರಿಸಿತು.
ಕೆಆರ್ ಪುರಂನಿಂದ ವೈಟ್ಫೀಲ್ಡ್ವರೆಗಿನ 13.75 ಕಿಮೀ ಮಾರ್ಗವನ್ನು ವಾಣಿಜ್ಯ ಕಾರ್ಯಾಚರಣೆಗಾಗಿ ತೆರೆಯಲಾಗಿದೆ. ಬೆನ್ನಿಗಾನಹಳ್ಳಿ ರೈಲ್ವೆ ಹಳಿಯಲ್ಲಿ ತೆರೆದ ವೆಬ್ ಗರ್ಡರ್ ನಿರ್ಮಾಣ ವಿಳಂಬದಿಂದಾಗಿ ಬೈಯಪ್ಪನಹಳ್ಳಿಯಿಂದ ಕೆಆರ್ ಪುರಂವರೆಗಿನ 2 ಕಿಮೀ ಮಾರ್ಗವನ್ನು ತೆರೆಯಲು ಇನ್ನೂ ಸಾಧ್ಯವಾಗಿಲ್ಲ.

ಪರಿಷ್ಕೃತ ಗಡುವಿನ ಪ್ರಕಾರ, ಆಗಸ್ಟ್ ವೇಳೆಗೆ ಕೆಂಗೇರಿಯಿಂದ ವೈಟ್ಫೀಲ್ಡ್ವರೆಗೆ ಸಂಪೂರ್ಣ ನೇರಳೆ ಮಾರ್ಗವನ್ನು ತೆರೆಯಲು ಬಿಎಂಆರ್ಸಿಎಲ್ ಯೋಜಿಸುತ್ತಿದೆ.
'ವಿಸ್ತೃತ ಪರ್ಪಲ್ ಲೈನ್ನಲ್ಲಿ ಸಿಗ್ನಲಿಂಗ್ ಮತ್ತು ಇತರ ಕೆಲಸಗಳನ್ನು ಪೂರ್ಣಗೊಳಿಸಲು ಬೆಳಗಿನ ಸಮಯದಲ್ಲಿ ರೈಲು ಸೇವೆಗಳನ್ನು ಮೊಟಕುಗೊಳಿಸುವುದು ಅವಶ್ಯಕವಾಗಿದೆ. ಮೆಟ್ರೋ ಓಡಾಟವು ಮಧ್ಯರಾತ್ರಿ ಬೈಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ. ಆ ಕಾರಣ 12 ಗಂಟೆಯ ನಂತರ ಮಾತ್ರ ಕೆಲಸ ಮಾಡಬಹುದು. ಕಾಮಗಾರಿ ಪೂರ್ಣಗೊಂಡ ನಂತರ, ವಿಸ್ತೃತ ಪರ್ಪಲ್ ಲೈನ್ನಲ್ಲಿ ರೈಲುಗಳ ಪ್ರಾಯೋಗಿಕ ಓಡಾಟವನ್ನು ಕೈಗೊಳ್ಳಲಾಗುತ್ತದೆ' ಎಂದು ಬಿಎಂಆರ್ಸಿಎಲ್ ಮುಖ್ಯ ಪಿಆರ್ಒ ಯಶವಂತ ಚವಾಣ್ ಹೇಳಿದ್ದಾರೆ.
ಕೆಂಗೇರಿ ಮತ್ತು ಎಸ್ವಿ ರಸ್ತೆ ನಡುವೆ ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ನಿಗದಿತ ರೈಲು ಸೇವೆಗಳು ಲಭ್ಯವಿರುತ್ತವೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಬೆಳಗ್ಗೆ 7 ಗಂಟೆಯ ನಂತರ ಬೈಯಪ್ಪನಹಳ್ಳಿಯಿಂದ ಕೆಂಗೇರಿ ಮತ್ತು ಕೆಆರ್ ಪುರಂನಿಂದ ವೈಟ್ಫೀಲ್ಡ್ಗೆ ಎಂದಿನಂತೆ ರಾತ್ರಿ 11 ಗಂಟೆಯವರೆಗೆ ರೈಲುಗಳು ಕಾರ್ಯನಿರ್ವಹಿಸಲಿವೆ.
ಕೆಆರ್ ಪುರಂ-ವೈಟ್ಫೀಲ್ಡ್ ಮೆಟ್ರೋ ಮಾರ್ಗವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿದಾಗಿನಿಂದ ದಿನಕ್ಕೆ ಸರಾಸರಿ 30,000 ಪ್ರಯಾಣಿಕರು ಈ ಮಾರ್ಗವನ್ನು ಬಳಸುತ್ತಿದ್ದಾರೆ. ಆದಾಗ್ಯೂ, ಕೆಆರ್ ಪುರಂ ಮತ್ತು ಬೈಯಪ್ಪನಹಳ್ಳಿ ನಡುವಿನ ಸಂಪರ್ಕ ತಪ್ಪಿದ ಕಾರಣ, ಬೈಯಪ್ಪನಹಳ್ಳಿಯಲ್ಲಿ ಇಳಿದ ನಂತರ ಕೆಆರ್ ಪುರಂ ನಿಲ್ದಾಣವನ್ನು ತಲುಪಲು ಪ್ರಯಾಣಿಕರಿಗೆ ಫೀಡರ್ ಬಸ್ ಸೇವೆಗಳು ಅಥವಾ ಇತರ ಸಾರಿಗೆ ವಿಧಾನಗಳನ್ನು ಬಳಸುವುದು ಅನಿವಾರ್ಯವಾಗಿದೆ.
-
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್











Click it and Unblock the Notifications