Bengaluru Metro: ORR ರಸ್ತೆಯ ನೀಲಿ ಮಾರ್ಗದಲ್ಲಿ ಸಂಯೋಜಿತ ಗರ್ಡರ್ ಸ್ಥಾಪನೆ
ಬೆಂಗಳೂರು: ನಮ್ಮ ಮೆಟ್ರೋ ನಿಗಮದಿಂದ ನಗರದ ಹೊರ ವರ್ತುಲ ರಸ್ತೆಯ ಮಾರತ್ತಹಳ್ಳಿ, ಎಚ್ಎಸ್ಆರ್ ಬಡಾವಣೆ, ಮಹಾದೇವಪುರ ಉದ್ದಕ್ಕೂ ನೀಲಿ ಮೆಟ್ರೋ ಮಾರ್ಗದ (Blue Line Metro) ಕಾಮಗಾರಿ ನಡೆಯುತ್ತಿದೆ. ಇದರ ಭಾಗವಾಗಿ ಮಾರತ್ತಹಳ್ಳಿ ಸೇತುವೆಯ ಬಳಿ ನಾಲ್ಕು ಸಂಯೋಜಿತ ಗರ್ಡರ್ಗಳಲ್ಲಿ ಎರಡನ್ನು ನಿರ್ಮಿಸಲಾಗಿದೆ
ನಮ್ಮ ಮೆಟ್ರೋ ಹಂತ 2ಎ ಯೋಜನೆಯಡಿ ಸಿಲ್ಕ್ ಬೋರ್ಡ್ನಿಂದ ಕೆ.ಆರ್.ಪುರಂವರೆಗೆ ನೀಲಿ ಮಾರ್ಗದ ನಿರ್ಮಾಣ ಕೆಲಸ ಆಗುತ್ತಿದೆ. ಇದರ ವ್ಯಾಪ್ತಿಯಲ್ಲಿ ಗರ್ಡರ್ ಸ್ಥಾಪಿಸಲಾಗಿದೆ. ಅದಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮತ್ತು ಶಂಕರನಾರಾಯಣ ಕನ್ಸ್ಟ್ರಕ್ಷನ್ಸ್ (SNC) ತಂಡಗಳು ಜಂಟಿಯಾಗಿ ಶನಿವಾರ ಬೆಳಗ್ಗೆ ಹೊತ್ತಿಗೆ ಹಳೆಯ ವಿಮಾನ ನಿಲ್ದಾಣ ರಸ್ತೆಯ ಹೊರ ವರ್ತುಲ ರಸ್ತೆಯ ಜಂಕ್ಷನ್ನಲ್ಲಿ ಎರಡು ಸಂಯೋಜಿತ ಗರ್ಡರ್ ಸ್ಥಾಪಿಸಿದ್ದನ್ನು ಅಧಿಕಾರಿಗಳು ಖಚಿಪಡಿಸಿದ್ದಾರೆ.

ಗರ್ಡರ್ ಅಳವಡಿಕೆ ಮುಂದುವರಿದಿದೆ ಎಂದ ತಿಳಿಸಿರುವ ಮಹಾದೇವಪುರ ಟಾಸ್ಕ್ ಫೋರ್ಸ್-ಮೊಬಿಲಿಟಿ, ನಾಗರಿಕರ ಗುಂಪು ಬಾಕಿ ಗರ್ಡರ್ಗಳ ಅಳವಡಿಕೆಗೆ ಮತ್ತಷ್ಟು ಪೂರ್ವ ಸಿದ್ಧತೆ ಕಾರ್ಯ ನಡೆಸಿದೆ. ಅದೆಲ್ಲವು ಸೋಮವಾರ (ಮಾ.30) ಹೊತ್ತಿಗೆ ಕೆಲಸ ಪೂರ್ಣಗೊಳ್ಳಲಿವೆ. ಮಧ್ಯರಾತ್ರಿಯಿಂದ ಬೆಳಗಿನ ಜಾವ 3 ಗಂಟೆಯ ನಡುವೆ ಸ್ಥಾಪಿಸಲಾಗುವುದು ಎಂದು ತಿಳಿಸಿದೆ.
ಎತ್ತರ ಮೆಟ್ರೋ ಹಳಿಗಳ ನಿರ್ಮಾಣದಲ್ಲಿ ಬಳಸಲಾಗುವ ಈ ಸಂಯೋಜಿತ ಗಿರ್ಡರ್ ಎರಡು ವಿಭಿನ್ನ ವಸ್ತುಗಳನ್ನು ಸಂಯೋಜಿಸಿ ರಚನಾತ್ಮಕವಾಗಿ ಬಳಕೆಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತದೆ. ಇದೇ ವರ್ಷ ಡಿಸೆಂಬರ್ ವೇಳೆಗೆ ಅಥವಾ 2027ರ ಮೊದಲಾರ್ಧದಲ್ಲಿ ಸಿಲ್ಕ್ ಬೋರ್ಡ್-ಕೆ.ಆರ್.ಪುರಂ 2ಎ ಯೋಜನೆ ಪ್ರಯಾಣಿಕರಿಗೆ ಮುಕ್ತವಾಗಲಿದೆ.
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ
ಚಲಘಟ್ಟ ಮತ್ತು ವೈಟ್ಫಿಲ್ಡ್ವರೆಗಿನ ನೇರಳೆ ಮಾರ್ಗದಲ್ಲಿ ಇಂದು ಭಾನುವಾರ ಬೆಳಗ್ಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಈ ಮಾರ್ಗದ ಎಂಜಿ ರಸ್ತೆ ಹಾಗೂ ಗರುಡಾಚಾರ್ ಪಾಳ್ಯದಲ್ಲಿ ಮೆಟ್ರೋ ನಿಲ್ದಾಣಗಳ ಮಧ್ಯ ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿದ್ದರಿಂದಾಗಿ ಬೆಳಗ್ಗೆ 7 ಗಂಟೆಯಿಂದ 7.45ರವರೆಗೆ ಸಂಚಾರ ಸ್ಥಗಿತವಾಗಿತ್ತು. ಬಳಿಕ ಅಧಿಕಾರಿಗಳ ತಂಡ ಉಂಟಾದ ಸಂಚಾರ ಸಮಸ್ಯೆಯನ್ನು 7.45ರ ಹೊತ್ತಿಗೆ ಪೂರ್ಣಗೊಳಿಸುತ್ತಿದ್ದಂತೆ ಸುಗಮ ಸಂಚಾರ ಪುನಾರಂಭವಾಯಿತು ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಹಸಿರು ಮಾರ್ಗ (ಮಾದಾವರ-ರೇಷ್ಮೆ ಸಂಸ್ಥೆ) ಹಾಗೂ ಮೂರನೇ ಮಾರ್ಗವಾದ ಹಳದಿ ಲೈನ್ನಲ್ಲಿ (ಆರ್.ವಿ.ರಸ್ತೆ-ಬೊಮ್ಮಸಂದ್ರ) ಯಾವುದೇ ಅಡಚಣೆ ಇಲ್ಲದೇ ಸುಗಮ ಸಂಚಾರ ಕಂಡು ಬಂದಿದೆ. ಆದ ತೊಂದರೆಗೆ ಸಹಕರಿಸುವಂತೆ ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ಕೋರಿತ್ತು.
-
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ













Click it and Unblock the Notifications