Namma metro: ಇನ್ಮುಂದೆ ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದ್ರೆ ಮೊದಲಿಗಿಂತ 20ಪಟ್ಟು ದಂಡ ಬೀಳುತ್ತೆ ಹುಷಾರ್!
ಬೆಂಗಳೂರು, ಜನವರಿ 31: ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಘಟನೆಗಳಿಗೆ ಬ್ರೇಕ್ ಹಾಕುವಂತೆ ಬಿಎಂಆರ್ಸಿಎಲ್ ಮೇಲೆ ಒತ್ತಡ ಹೆಚ್ಚುತ್ತಲೇ ಇದೆ. ಹೀಗಾಗಿ ನಮ್ಮ ಮೆಟ್ರೋ ಸಂಸ್ಥೆಯು ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.
ಈಗಾಗಲೇ ನಮ್ಮ ಮೆಟ್ರೋದಲ್ಲಿ ಹಲವು ನಿಮಯಗಳಿದ್ದು, ಅದನ್ನು ಮೀರಿದವರಿಗೆ ದಂಡ ಕೂಡ ವಿಧಿಸಲಾಗುತ್ತಿದೆ. ಇನ್ನು ದಂಡದ ದರವನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಹಾಕಲಾಗಿದೆ. ಈ ಪಟ್ಟಿಯಲ್ಲಿ ಒಂದು ನಿಯಮದ ದಂಡದ ದರ ಬದಲಾಗುತ್ತಿದ್ದು, ಒಂದಲ್ಲ, ಎರಡಲ್ಲ ಬರೋಬ್ಬರಿ 20ಪಟ್ಟು ಹೆಚ್ಚಿಸಲಾಗಿದೆ.

ಮಹಿಳಾ ಪ್ರಯಾಣಿಕರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಮೆಟ್ರೋ ಈ ದಂಡದ ಮೊತ್ತವನ್ನು ಹೆಚ್ಚಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಮ್ಮ ಮೆಟ್ರೋ ಅಸಭ್ಯ ವರ್ತನೆಗೆ ವಿಧಿಸುತ್ತಿದ್ದ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಈ ಮೊದಲು 500 ರೂಪಾಯಿ ಇದ್ದ ದಂಡವನ್ನು 10,000 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ವರದಿಯಾಗಿದೆ. ನಮ್ಮ ಮೆಟ್ರೋದಲ್ಲಿ ಕಿರುಕುಳ ನೀಡುವ ಕಾಮುಕರಿಗೆ ಇನ್ನುಮುಂದೆ ಬರೋಬ್ಬರಿ 10,000 ರೂಪಾಯಿ ದಂಡ ಬೀಳಲಿದೆ.
ಇನ್ನು ಈ ಹಿಂದೆಯೇ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಮಹತ್ವದ ನಿರ್ಧಾರವನ್ನು ನಮ್ಮ ಮೆಟ್ರೋ ಸಂಸ್ಥೆಗೆ ಮುಂದಾಗಿತ್ತು. ಮಹಿಳೆಯರ ಸುರಕ್ಷತೆಗಾಗಿ ಈಗಿರುವ ಬೋಗಿ ಜೊತೆಗೆ ಮತ್ತೊಂದು ಬೋಗಿಯನ್ನು ಮಹಿಳೆಯರಿಗಾಗಿ ಮೀಸಲಿಡುವಂತೆ ಬಿಎಂಆರ್ಸಿಎಲ್ಗೆ ಅನೇಕ ಬೇಡಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಸ್ಥೆ ಶೀಘ್ರದಲ್ಲೇ ಮಹಿಳೆಯರಿಗೆ ಮತ್ತೊಂದು ಬೋಗಿ ಮೀಸಲಿಡಲು ಚಿಂತನೆ ನಡೆಸಿದೆ.
ಟ್ರಾಫಿಕ್ನಿಂದ ತಪ್ಪಿಸಿಕೊಳ್ಳಲು ಹಾಗೂ ವೇಗವಾಗಿ ಸಂಚರಿಸಲು ಜನ ನಮ್ಮ ಮೆಟ್ರೋವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಎಲ್ಲಾ ಬೋಗಿಗಳು ಜನದಟ್ಟಣೆಯಿಂದ ಕೂಡಿರುತ್ತದೆ. ಇದರ ಮಧ್ಯ ಮಹಿಳೆಯರು ಸಂಚರಿಸುತ್ತಿದ್ದಾರೆ. ಈ ವೇಳೆ ಕೆಲ ಕಾಮುಕರು ಮಹಿಳೆಯರ ಮೇಲೆ ಬೀಳುವುದು, ಖಾಸಗಿ ಅಂಗಗಳನ್ನು ಮುಟ್ಟುವುದು ಸೇರಿದಂತೆ ವಿವಿಧ ರೀತಿಯಲ್ಲಿ ಲೈಂಗಿಕ ದೌರ್ಜನ್ಯವನ್ನು ಎಸಗುತ್ತಿದ್ದಾರೆ. ಇಂತಹ ಅನೇಕ ಘಟನೆಗಳು ಇತ್ತೀಚಿಗೆ ಬೆಳಕಿಗೆ ಬರುತ್ತಿದೆ. ಹೀಗಾಗಿ ಇಂತಹ ಘಟನೆಗೆ ಬ್ರೇಕ್ ಹಾಕಲು ನಮ್ಮ ಮೆಟ್ರೋ ಸಂಸ್ಥೆ ಮಹತ್ವ ನಿರ್ಧಾರ ತೆಗೆದುಕೊಂಡು ದಂಡ ಪರಿಷ್ಕರಣೆ ಮಾಡಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್










Click it and Unblock the Notifications