Namma Metro rules violation: ಮಹಿಳೆಯಿಂದ ಮೆಟ್ರೋದಲ್ಲಿ ದೇಣಿಗೆ ಸಂಗ್ರಹ, ದಂಡ ಹೇರಿಕೆ
ಬೆಂಗಳೂರು, ನವೆಂಬರ್ 27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಮ್ಮ ಮಟ್ರೋ (Namma Metro) ನಿಯಮಗಳನ್ನು ಉಲ್ಲಂಘಿಸುವ, ದಂಡ ಕಟ್ಟುವ ಪ್ರಕರಣಗಳು ಹೆಚ್ಚಾಗುತ್ತಿವೆ. ಮೆಟ್ರೋ ರೈಲಿನಲ್ಲಿ ತಿಂಡಿ ತಿನ್ನುವ, ಸಿಸಿಟಿವಿ ಮುಚ್ಚುವ ಪ್ರಕರಣಗಳ ಬೆನ್ನಲ್ಲೆ ಇತ್ತೀಚೆಗೆ ಯುವಕನೊಬ್ಬ ಭಿಕ್ಷೆ ಬೇಡಿದ್ದ ಪ್ರಕರಣ ವರದಿ ಆಗಿತ್ತು. ಅದರ ನಂತರ ಮತ್ತೊಂದು ಪ್ರಕರಣ ದಾಖಲಾಗಿದ್ದು, BMRCL ಮಹಿಳೆಗೆ ದಂಡ ವಿಧಿಸಲಾಗಿದೆ.
ಮಹಿಳೆಯೊಬ್ಬರು ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲಿನಲ್ಲಿ ದೇಣಿಗೆ ಕೇಳಿದ್ದಕ್ಕೆ ಅವಳ ವಿರುದ್ಧ ಮೆಟ್ರೋ ಕಾಯಿದೆ ಸೆಕ್ಷನ್ 59 ರ ಅಡಿ ಪ್ರಕರಣ ದಾಖಲಿಸಲಾಗಿದೆ. ಭಾಗ್ಯ ಎಂಬ ಹೆಸರಿನ ಮಹಿಳೆಯು ದೂರವಾಣಿ ನಗರದಲ್ಲಿರುವ ಸಮಾಜ ಸೇವೆ ಸಂಸ್ಥೆಯೊಂದರ ಹೆಸರು ಹೇಳಿಕೊಂಡು ದೇಣಿಗೆ ಸಂಗ್ರಹಕ್ಕೆ ಮುಂದಾಗಿದ್ದರು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮೂಲಗಳು ತಿಳಿಸಿವೆ.

ಜ್ಞಾನಜ್ಯೋತಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಎಂದು ಗುರುತಿಸಿಕೊಂಡು ಮೆಟ್ರೋದಲ್ಲಿ ದೇಣಿಗೆ ಸಂಗ್ರಹಿಸಿದ್ದಾರೆ. ಈ ಮೂಲಕ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ ಎಂಬ ಆರೋಪ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಈ ಮಹಿಳೆಯಿಂದ 500 ರೂಪಾಯಿ ದಂಡ ಕಟ್ಟಿಸಿಕೊಂಡು, ಕ್ಷಮಾಪಣೆ ಪತ್ರ ಪಡೆದುಕೊಂಡು ಕಳುಹಿಸಲಾಗಿದೆ.
ದೇಣಿಗೆ ಪೆಟ್ಟಿಗೆ ಸಮೇತ ಮೆಟ್ರೋ ಏರಿದ ಮಹಿಳೆ
ಈ ಮಹಿಳೆ ಭಾಗ್ಯ ಶನಿವಾರ ಬೆನ್ನಿಗಾನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ರೈಲು ಏರಿದ್ದಾಳೆ. ಬರುವಾಗ ಕೈಯಲ್ಲಿ ದೇಣಿಗೆ ಸಂಗ್ರಹದ ಪೆಟ್ಟಿಗೆ ಜೊತೆಗೆ ತೆಗೆದುಕೊಂಡು ಬಂದಿದ್ದಾಳೆ. ಅಲ್ಲದೇ ಕ್ಯೂಆರ್ ಕೋಡ್ ಸಹ ತಂದಿದ್ದಾರೆ. ಇವರಿಗೆ ಕೆಲವು ಮಂದಿ 10, 20 ರೂಪಾಯಿ ಹಾಕಿದ್ದಾರೆ.

ದೇಣಿ ಸಂಗ್ರಹ ಮಹಿಳೆ ಗಮನಿಸಿದ ಸಹಾಯಕ ಭದ್ರತಾ ಸಿಬ್ಬಂದಿ ಅವರನ್ನು ಬಯ್ಯಪನಹಳ್ಳಿ ನಿಲ್ದಾಣದಲ್ಲಿ ಇಳಿಸಿ ನಿಯಂತ್ರಣ ಕೊಠಡಿಯಲ್ಲಿ ವಿಚಾರಿಸಿದ್ದಾರೆ. ಬಳಿಕ ಮಹಿಳೆ ಹೇಳಿಕೆ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಮ್ಮ ಮೆಟ್ರೋದಲ್ಲಿ ಗುರುವಾರ ದೇಣಿಗೆ ಸಂಗ್ರಹಿಸಲು ಮುಂದಾದರೆ, ಬಹುತೇಕ ಮಂದಿ ಹತ್ತು ರೂಪಾಯಿ ನೀಡಿದ್ದರು. ಶುಕ್ರವಾರ ಯಾರು ಹಣ ನೀಡಿರಲಿಲ್ಲ. ಶನಿವಾರ ಸಿಬ್ಬಂದಿ ನನ್ನನ್ನು ಕಂಡು ರೈಲಿನಿಂದ ಕೆಳಕ್ಕೆ ಇಳಿಸಿದ್ದಾರೆ ಎಂದು ಭಾಗ್ಯ ತಿಳಿಸಿದ್ದಾರೆ.
ಭಿಕ್ಷೆ ಬೇಡಿದ್ದ ಯುವಕ
ಇತ್ತೀಚೆಗಷ್ಟೇ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಯುವಕನೊಬ್ಬ ಭಿಕ್ಷೆ ಬೇಡಿದ್ದ. ಆತನನ್ನು ನೋಡಿದ ಸಿಬ್ಬಂದಿಯೊಬ್ಬರು ನಿಯಂತ್ರಣ ಕೊಠಡಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದು ಆತನನ್ನು ಸಿಬ್ಬಂದಿ ವಿಚಾರಿಸಿದ್ದಾರೆ. ಆತನ ಜೇಬಿನಲ್ಲಿ ಸುಮಾರು 1,000 ರೂ. ಇದ್ದು, ಆತನಿಂದ 500 ರೂಪಾಯಿ ದಂಡ ಕಟ್ಟಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಎಚ್ಚರಿಕೆ ಕೊಟ್ಟು ಯುವಕನನ್ನು ಬಿಟ್ಟು ಕಳುಹಿಸಿದ್ದಾರೆ. ಅದರ ಬೆನ್ನಲ್ಲೆ ದೇಣಿಗೆ ಸಂಗ್ರಹ ಪ್ರಕರಣ ಬೆಳಕಿಗೆ ಬಂದಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications