ಐಪಿಎಲ್ ಪಂದ್ಯ : ಮೆಟ್ರೋ, ಬಿಎಂಟಿಸಿ ಸಂಚಾರ ವಿಸ್ತರಣೆ
ಬೆಂಗಳೂರು, ಏಪ್ರಿಲ್ 12 : ಮಂಗಳವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 9ನೇ ಆವೃತ್ತಿಯ ಮೊದಲ ಪಂದ್ಯ ನಡೆಯಲಿದೆ. ಕ್ರಿಕೆಟ್ ಪಂದ್ಯದ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಸಮಯ ವಿಸ್ತರಣೆಯಾಗಿದೆ. ಬಿಎಂಟಿಸಿ ವಿಶೇಷ ಬಸ್ ಸೇವೆ ಒದಗಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮಂಗಳವಾರ ಮುಖಾಮುಖಿಯಾಗಲಿವೆ. ತವರಿನಲ್ಲಿ ಆರ್ಸಿಬಿ ಮೊದಲ ಪಂದ್ಯವಾಡುತ್ತಿದ್ದು, ಸಾವಿರಾರು ಅಭಿಮಾನಿಗಳು ಪಂದ್ಯ ವೀಕ್ಷಿಸಲು ಆಗಮಿಸಲಿದ್ದಾರೆ. [ಐಪಿಎಲ್ ನಿಂದ ಹರ್ಷ ಭೋಗ್ಲೆ ಹೊರಹಾಕಲು ಯಾರು ಕಾರಣ?]

ಸಂಚಾರ ಸಮಯ ವಿಸ್ತರಣೆ : ಐಪಿಎಲ್ ಪಂದ್ಯದ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಸಮಯವನ್ನು ವಿಸ್ತರಣೆ ಮಾಡಿದೆ. ಬೈಯಪ್ಪನಹಳ್ಳಿ ಮತ್ತು ಎಂ.ಜಿ.ರಸ್ತೆ ನಡುವೆ ನಮ್ಮ ಮೆಟ್ರೋ ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿ 1ರ ತನಕ ಸಂಚಾರ ನಡೆಸಲಿದೆ. ಪ್ರತಿ 30 ನಿಮಿಷಗಳಿಗೆ ಒಂದರಂತೆ ರೈಲುಗಳು ಸಂಚಾರ ನಡೆಸಲಿವೆ.[ಐಪಿಎಲ್ ವೇಳಾಪಟ್ಟಿ]
ಬಿಎಂಟಿಸಿ ಬಸ್ ವ್ಯವಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕ್ರಿಕೆಟ್ ಪಂದ್ಯದ ಹಿನ್ನಲೆಯಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ನಗರದ ಹಲವು ಪ್ರದೇಶಗಳಿಂದ ಸಂಜೆ 5 ಗಂಟೆಗೆ ಹೊರಡುವ ಬಸ್ಸುಗಳು ಚಿನ್ನಸ್ವಾಮಿ ಕ್ರೀಡಾಂಗಣ ತಲುಪಲಿವೆ. ಪಂದ್ಯ ಮುಗಿದ ಬಳಿಕ ರಾತ್ರಿ 12 ಗಂಟೆಯ ತನಕ ಸ್ಟೇಡಿಯಂನಿಂದ ವಿವಿಧ ಪ್ರದೇಶಗಳಿಗೆ ಸಂಚಾರ ನಡೆಸಲಿವೆ.
ಎಲ್ಲಿಂದ, ಎಲ್ಲಿಗೆ ಬಸ್ : ಮಾಣೆಕ್ ಷಾ ಪರೇಡ್ ನಿಲ್ದಾಣ-ಕಾಡುಗೋಡಿ ಬಸ್ ನಿಲ್ದಾಣ, ಮೆಯೋಹಾಲ್-ಕಾಡುಗೋಡಿ ಬಸ್ ನಿಲ್ದಾಣ, ಮೆಯೋಹಾಲ್-ಸರ್ಜಾಪುರ, ಬ್ರಿಗೇಡ್ ರಸ್ತೆ-ಎಲೆಕ್ಟ್ರಾನಿಕ್ ಸಿಟಿ, ಬ್ರಿಗೇಡ್ ರಸ್ತೆ-ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಚಿನ್ನಸ್ವಾಮಿ ಕ್ರೀಡಾಂಗಣದ ನಿಲ್ದಾಣ-ಕೆಂಗೇರಿ ಕೆಎಚ್ಬಿ ಕ್ವಾರ್ಟರ್ಸ್, ಬಿಆರ್ವಿ ಪರೇಡ್ ಮೈದಾನ-ಜನಪ್ರಿಯ ಟೌನ್ ಶಿಪ್
ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ನೆಲಮಂಗಲ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ಯಲಹಂಕ 5ನೇ ಹಂತ, ಬಿಆರ್ವಿ ಪರೇಡ್ ಮೈದಾನ-ಆರ್.ಕೆ.ಹೆಗಡೆ ನಗರ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ಬಾಗಲೂರು, ಮೆಯೋಹಾಲ್-ಹೊಸಕೋಟೆ ನಡುವೆ ಹೆಚ್ಚುವರಿ ಬಸ್ಸುಗಳು ಸಂಚಾರ ನಡೆಸಲಿವೆ.
ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ನೇರಪ್ರಸಾರ : ಸೋನಿ ಸಿಕ್ಸ್, ಸೆಟ್ ಮ್ಯಾಕ್ಸ್, ಸೋನಿ ಇಎಸ್ಪಿಎನ್
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications