Namma Metro: ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗದ ಸುರಕ್ಷತಾ ಪರಿಶೀಲನೆ ಮುಂದಕ್ಕೆ
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರ ನಡುವಿನ ರೈಲು ಓಡಾಟ ಮತ್ತಷ್ಟು ತಡವಾಗುವ ಸಾಧ್ಯತೆ ಇದೆ. ಬುಧವಾರ ನಿಗದಿಯಾಗಿದ್ದ ಬೆಂಗಳೂರು ಮೆಟ್ರೋದ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರಂ ನಡುವಿನ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ (ಸಿಎಂಆರ್ಎಸ್) ಬಹುನಿರೀಕ್ಷಿತ ಪರಿಶೀಲನೆಯನ್ನು ಮುಂದೂಡಲಾಗಿದೆ. ಇದು ಈ ಭಾಗದ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದೆ .
ಮುಂದಿನ ತಪಾಸಣೆ ದಿನಾಂಕ ಯಾವಾಗ ಎಂದು ಇನ್ನೂ ನಿಗದಿಯಾಗಿಲ್ಲ ಎಂದು ಬಿಎಂಆರ್ ಸಿಎಲ್ ಹೇಳಿದೆ. ನಿಗದಿತ ಕಾರ್ಯಕ್ರಮದ ಪ್ರಕಾರ, ಸಿಎಮ್ಆರ್ಎಸ್ ಸೆ.13 ರಂದು ನೇರಳೆ ಮಾರ್ಗದ ಪೂರ್ವ-ಪಶ್ಚಿಮ ಕಾರಿಡಾರ್ನಲ್ಲಿ ಬೈಯಪ್ಪನಹಳ್ಳಿಯಿಂದ ಕೆಆರ್ ಪುರಂವರೆಗೆ ತಪಾಸಣೆ ನಡೆಸಿ ಬೆಳಿಗ್ಗೆ 9.45 ಕ್ಕೆ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಆಗಮಿಸಿ, ನಂತರ ಮೋಟಾರ್ ಟ್ರಾಲಿಯಲ್ಲಿ ಕೆಆರ್ ಪುರಂ ಕಡೆಗೆ ಹೊರಡಬೇಕಿತ್ತು. ಬೆಳಗ್ಗೆ 11.45 ರ ವೇಳೆಗೆ ತೆರೆದ ವೆಬ್ ಗರ್ಡರ್ ಸೇತುವೆಯನ್ನೂ ಪರಿಶೀಲಿಸಬೇಕಿತ್ತು.

ಸಂಜೆ 4.40ಕ್ಕೆ ಸಿಎಂಆರ್ಎಸ್ ತಂಡ ಬೆನ್ನಿಗಾನಹಳ್ಳಿಯಿಂದ ಬೈಯಪ್ಪನಹಳ್ಳಿವರೆಗೆ ರೋಲಿಂಗ್ ಸ್ಟಾಕ್ ತಪಾಸಣೆ ನಡೆಸಿ, ಸಂಜೆ 6.30ರ ಸುಮಾರಿಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ಗೆ ಲಘು ಓಟದ ನಂತರ ತಪಾಸಣೆ ಮುಕ್ತಾಯಗೊಳಿಸಬೇಕಿತ್ತು. ಕೆಂಗೇರಿ ಮತ್ತು ಚಲ್ಲಘಟ್ಟ ನಡುವಿನ ಮೆಟ್ರೋ ಮಾರ್ಗದ ಪರಿಶೀಲನೆಯ ಸಮಯ ಲಭ್ಯವಾಗಿಲ್ಲ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮೆಟ್ರೋ ಓಡಾಟ ಯಾವಾಗ?
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ವಕ್ತಾರರು, ಸಿಎಂಆರ್ ಎಸ್ನ ಕಾರ್ಯಕ್ರಮದ ಬದಲಾವಣೆಯಿಂದಾಗಿ, ಬಿಎಂಆರ್ ಸಿಎಲ್ ಭಾಗದಲ್ಲಿ ಎಲ್ಲವೂ ಸಿದ್ಧವಾಗಿದ್ದರೂ ತಪಾಸಣೆಯನ್ನು ಮರು ನಿಗದಿಪಡಿಸಬೇಕಾಗಿದೆ.
ಬಿಎಂಆರ್ಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ಈ ಹಿಂದೆ ಸಿಎಂಆರ್ಎಸ್ಗೆ ಸೆಪ್ಟೆಂಬರ್ 15 ರಿಂದ ಕಾರ್ಯಾಚರಣೆಗೆ ಮಾರ್ಗವನ್ನು ತೆರೆಯುವ ಸಲುವಾಗಿ ತಪಾಸಣೆ ಪ್ರಕ್ರಿಯೆಯನ್ನು ಬೇಗನೆ ಮುಗಿಸುವಂತೆ ಮನವಿ ಮಾಡಿದ್ದರು.
ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರಂ ನಡುವಿನ ಸಂಪರ್ಕ ಮತ್ತು ಕೆಂಗೇರಿಯಿಂದ ಚಲ್ಲಘಟ್ಟಕ್ಕೆ ವಿಸ್ತರಣೆಯು ಕ್ರಮವಾಗಿ ಬೆಂಗಳೂರಿನ ಪೂರ್ವ ಮತ್ತು ಪಶ್ಚಿಮಕ್ಕೆ ಸಂಪರ್ಕಿಸುವ ಮೆಟ್ರೋದ ನೇರಳೆ ಮಾರ್ಗದ ಭಾಗವಾಗಿದೆ. ಕಾರ್ಯಾಚರಣೆಗಳು ಪ್ರಾರಂಭವಾದ ನಂತರ, ಪ್ರಯಾಣಿಕರ ಸಂಖ್ಯೆ 75,000 ರಿಂದ ಸುಮಾರು 1 ಲಕ್ಷಕ್ಕೆ ಹೆಚ್ಚಾಗುವ ನಿರೀಕ್ಷೆಯಿದೆ.
ಈ ತಪಾಸಣೆ ಮುಂದೆ ಹೋಗಿರುವ ಕಾರಣ ಈ ಭಾಗದಲ್ಲಿ ಮೆಟ್ರೋ ಓಡಾಟ ಕೂಡ ತಡವಾಗುವ ಸಾಧ್ಯತೆ ಇದೆ. ಆದರೂ ಸಾಧ್ಯವಾದಷ್ಟು ಬೇಗನೆ ಕಾರ್ಯಾಚರಣೆ ಆರಂಭಿಸಲು ಬಿಎಂಆರ್ ಸಿಎಲ್ ಸಜ್ಜಾಗಿದ್ದು, ತಪಾಸಣೆ ಮುಗಿದ ತಕ್ಷಣ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ.
-
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ











Click it and Unblock the Notifications