Namma Metro; ಚಾಲಕ ರಹಿತ ಮೆಟ್ರೋ ಬೋಗಿ ಪರೀಕ್ಷೆ ವಿವರ ತಿಳಿಯಿರಿ
ಬೆಂಗಳೂರು, ಫೆಬ್ರವರಿ 19: ನಮ್ಮ ಮೆಟ್ರೋ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ರೈಲ ಅನ್ನು ಬೆಂಗಳೂರಿನಲ್ಲಿ ಪರಿಚಯಿಸಲು ಬಿಎಂಆರ್ಸಿಎಲ್ ಮುಂದಾಗಿದೆ. ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಭರದಿಂದ ಸಿದ್ಧತೆ ಸಾಗುತ್ತಿದ್ದು ಈಗಾಗಲೇ ಚಾಲಕ ರಹಿತ ರೈಲಿನ ಬೋಗಿಗಳು ಹೆಬ್ಬಗೋಡಿಗೆ ಬಂದು ತಲುಪಿವೆ.
ಮೊದಲ ಚಾಲಕ ರಹಿತ ರೈಲು ಚೀನಾದಿಂದ ಸಮುದ್ರ ಮಾರ್ಗವಾಗಿ ಚೆನ್ನೈ ಬಂದು ಬಳಿಕ ರಸ್ತೆ ಮಾರ್ಗವಾಗಿ ಹೆಬ್ಬಗೋಡಿಗೆ ಬಂದು ತಲುಪಿವೆ. ಹೊಸದಾಗಿ ಬಂದ ನಮ್ಮ ಮೆಟ್ರೋದ ಚಾಲಕ ರಹಿತ ರೈಲಿನ ಬೋಗಿಗಳನ್ನು ಅನ್ಲೋಡ್ ಮಾಡಿ ಹಳಿಗಳ ಮೇಲೆ ಜೋಡಿಸುವ ಪ್ರಕ್ರಿಯೆ ಮುಗಿದಿದೆ.

ಕಳೆದ ವಾರ ದಿನದ ಹಿಂದೆ ನಮ್ಮ ಮೆಟ್ರೋದ ಕೋಚ್ಗಳು ಚೆನ್ನೈನಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ್ದು, ಲಾರಿಗಳಿಂದ ಅನ್ಲೋಡ್ ಮಾಡಿ ಹಳಿಗಳ ಮೇಲೆ ಜೋಡಿಸಲಾಗಿದೆ. ಸುಮಾರು ಮೂರ್ನಾಲ್ಕು ತಿಂಗಳು ಈ ಚಾಲಕ ರಹಿತ ರೈಲು ಸಂಚಾರದ ಪ್ರಯೋಗ ನಡೆಯಲಿದ್ದು, ಬಳಿಕ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.
ಸದ್ಯ ಎಲೆಕ್ಟ್ರಾನಿಕ್ ಸಿಟಿಯ ಮೆಟ್ರೋ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋದ ಪ್ರಯೋಗಾರ್ಥ ಪರೀಕ್ಷೆ ಮಾರ್ಚ್1 ರಂದು ನಡೆಸಲು ಬಿಎಂಆರ್ಸಿಎಲ್ ಮುಂದಾಗಿದೆ ಎನ್ನಲಾಗಿದೆ. ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದ್ದು, ಒಟ್ಟು 45 ದಿನಗಳವರೆಗೆ ಸಿಗ್ನಲಿಂಗ್ ಪರೀಕ್ಷೆಗಳು ನಡೆಯಲಿವೆ. ಈ ಮೆಟ್ರೋ ಕೋಚ್ಗಳು ಚಾಲಕ ರಹಿತ ಆಗಿರುವುದರಿಂದ ಇವುಗಳ ಪ್ರಾಯೋಗಿಕ ಸಂಚಾರಕ್ಕೆ ಸಹಕಾರಿಯಾಗುವಂತೆ ಮಾಹಿತಿ ನೀಡಲು ಬೋಗಿ ನಿರ್ಮಿಸಿದ ಚೀನಾ ಕಂಪನಿಯ ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಚೀನಾ ಕಂಪನಿಯ ಅಧಿಕಾರಿಗಳಿಂದ ನಮ್ಮ ಮೆಟ್ರೋ ಅಧಿಕಾರಿಗಳಿಗೆ ಚಾಲಕ ರಹಿತ ಕೋಚ್ಗಳ ಬಗ್ಗೆ ತರಬೇತಿ ನೀಡಲಿದ್ದು, ಆ ಬಳಿಕ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ. ಬಳಿಕ ಟ್ರ್ಯಾಕ್ನಲ್ಲಿ 15 ಪರೀಕ್ಷೆಗಳು ನಡೆಯಬೇಕಿದೆ. ಹೀಗಾಗಿ ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟದ ಬಗ್ಗೆ ರೈಲ್ವೆ ಸುರಕ್ಷತೆಯ ಮುಖ್ಯ ಆಯುಕ್ತರು, ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ಮತ್ತು ರೈಲ್ವೆ ಮಂಡಳಿಯಿಂದ ಅನುಮೋದನೆಯ ಅಗತ್ಯವಿದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ಹಳದಿ ಮಾರ್ಗದಲ್ಲಿ ಈ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎನ್ನಲಾಗಿದೆ. ರಾಷ್ಟ್ರೀಯ ವಿದ್ಯಾಲಯ ರೋಡ್ (ಆರ್.ವಿ ರಸ್ತೆ) - ಬೊಮ್ಮಸಂದ್ರ ನಮ್ಮ ಮೆಟ್ರೋ ಹಳದಿ ಮಾರ್ಗ ಸದ್ಯವೇ ಕಾರ್ಯಾರಂಭ ಮಾಡಲಿದ್ದು ಅದರಲ್ಲಿ ಈ ಚಾಲಕ ರಹಿತ ರೈಲು ಓಡಾಡಲಿದೆ ಎನ್ನಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications