Namma Metro; ಚಾಲಕ ರಹಿತ ಮೆಟ್ರೋ ಬೋಗಿ ಪರೀಕ್ಷೆ ವಿವರ ತಿಳಿಯಿರಿ
ಬೆಂಗಳೂರು, ಫೆಬ್ರವರಿ 19: ನಮ್ಮ ಮೆಟ್ರೋ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ರೈಲ ಅನ್ನು ಬೆಂಗಳೂರಿನಲ್ಲಿ ಪರಿಚಯಿಸಲು ಬಿಎಂಆರ್ಸಿಎಲ್ ಮುಂದಾಗಿದೆ. ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಭರದಿಂದ ಸಿದ್ಧತೆ ಸಾಗುತ್ತಿದ್ದು ಈಗಾಗಲೇ ಚಾಲಕ ರಹಿತ ರೈಲಿನ ಬೋಗಿಗಳು ಹೆಬ್ಬಗೋಡಿಗೆ ಬಂದು ತಲುಪಿವೆ.
ಮೊದಲ ಚಾಲಕ ರಹಿತ ರೈಲು ಚೀನಾದಿಂದ ಸಮುದ್ರ ಮಾರ್ಗವಾಗಿ ಚೆನ್ನೈ ಬಂದು ಬಳಿಕ ರಸ್ತೆ ಮಾರ್ಗವಾಗಿ ಹೆಬ್ಬಗೋಡಿಗೆ ಬಂದು ತಲುಪಿವೆ. ಹೊಸದಾಗಿ ಬಂದ ನಮ್ಮ ಮೆಟ್ರೋದ ಚಾಲಕ ರಹಿತ ರೈಲಿನ ಬೋಗಿಗಳನ್ನು ಅನ್ಲೋಡ್ ಮಾಡಿ ಹಳಿಗಳ ಮೇಲೆ ಜೋಡಿಸುವ ಪ್ರಕ್ರಿಯೆ ಮುಗಿದಿದೆ.

ಕಳೆದ ವಾರ ದಿನದ ಹಿಂದೆ ನಮ್ಮ ಮೆಟ್ರೋದ ಕೋಚ್ಗಳು ಚೆನ್ನೈನಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ್ದು, ಲಾರಿಗಳಿಂದ ಅನ್ಲೋಡ್ ಮಾಡಿ ಹಳಿಗಳ ಮೇಲೆ ಜೋಡಿಸಲಾಗಿದೆ. ಸುಮಾರು ಮೂರ್ನಾಲ್ಕು ತಿಂಗಳು ಈ ಚಾಲಕ ರಹಿತ ರೈಲು ಸಂಚಾರದ ಪ್ರಯೋಗ ನಡೆಯಲಿದ್ದು, ಬಳಿಕ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.
ಸದ್ಯ ಎಲೆಕ್ಟ್ರಾನಿಕ್ ಸಿಟಿಯ ಮೆಟ್ರೋ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋದ ಪ್ರಯೋಗಾರ್ಥ ಪರೀಕ್ಷೆ ಮಾರ್ಚ್1 ರಂದು ನಡೆಸಲು ಬಿಎಂಆರ್ಸಿಎಲ್ ಮುಂದಾಗಿದೆ ಎನ್ನಲಾಗಿದೆ. ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದ್ದು, ಒಟ್ಟು 45 ದಿನಗಳವರೆಗೆ ಸಿಗ್ನಲಿಂಗ್ ಪರೀಕ್ಷೆಗಳು ನಡೆಯಲಿವೆ. ಈ ಮೆಟ್ರೋ ಕೋಚ್ಗಳು ಚಾಲಕ ರಹಿತ ಆಗಿರುವುದರಿಂದ ಇವುಗಳ ಪ್ರಾಯೋಗಿಕ ಸಂಚಾರಕ್ಕೆ ಸಹಕಾರಿಯಾಗುವಂತೆ ಮಾಹಿತಿ ನೀಡಲು ಬೋಗಿ ನಿರ್ಮಿಸಿದ ಚೀನಾ ಕಂಪನಿಯ ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಚೀನಾ ಕಂಪನಿಯ ಅಧಿಕಾರಿಗಳಿಂದ ನಮ್ಮ ಮೆಟ್ರೋ ಅಧಿಕಾರಿಗಳಿಗೆ ಚಾಲಕ ರಹಿತ ಕೋಚ್ಗಳ ಬಗ್ಗೆ ತರಬೇತಿ ನೀಡಲಿದ್ದು, ಆ ಬಳಿಕ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ. ಬಳಿಕ ಟ್ರ್ಯಾಕ್ನಲ್ಲಿ 15 ಪರೀಕ್ಷೆಗಳು ನಡೆಯಬೇಕಿದೆ. ಹೀಗಾಗಿ ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟದ ಬಗ್ಗೆ ರೈಲ್ವೆ ಸುರಕ್ಷತೆಯ ಮುಖ್ಯ ಆಯುಕ್ತರು, ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ಮತ್ತು ರೈಲ್ವೆ ಮಂಡಳಿಯಿಂದ ಅನುಮೋದನೆಯ ಅಗತ್ಯವಿದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ಹಳದಿ ಮಾರ್ಗದಲ್ಲಿ ಈ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎನ್ನಲಾಗಿದೆ. ರಾಷ್ಟ್ರೀಯ ವಿದ್ಯಾಲಯ ರೋಡ್ (ಆರ್.ವಿ ರಸ್ತೆ) - ಬೊಮ್ಮಸಂದ್ರ ನಮ್ಮ ಮೆಟ್ರೋ ಹಳದಿ ಮಾರ್ಗ ಸದ್ಯವೇ ಕಾರ್ಯಾರಂಭ ಮಾಡಲಿದ್ದು ಅದರಲ್ಲಿ ಈ ಚಾಲಕ ರಹಿತ ರೈಲು ಓಡಾಡಲಿದೆ ಎನ್ನಲಾಗಿದೆ.
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ











Click it and Unblock the Notifications