Namma Metro: ಹೊಸ ಮಾರ್ಗದಲ್ಲಿ ಸೆಪ್ಟಂಬರ್ನಲ್ಲಿ ಮೆಟ್ರೋ ಸಂಚಾರ?
ಬೆಂಗಳೂರು, ಆಗಸ್ಟ್ 06: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಯಾಣಿಕರು ಓಡಾಡಲು ಕಾತರರಾಗಿದ್ದಾರೆ. ಈ ಮಾರ್ಗದಲ್ಲಿ ರೈಲು ಕಾರ್ಯಾಚರಣೆ ಆರಂಭಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಇದಕ್ಕಿಂತ ಮೊದಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈ ವಿಸ್ತೃತ ಹೊಸ ಮಾರ್ಗದಲ್ಲಿ ರೈಲು ಕಾರ್ಯಾಚರಣೆ ನಡೆಸಲಿದೆ.
ಹೌದು, ನಮ್ಮ ಮೆಟ್ರೋ ರೇಷ್ಮೆ ಮಂಡಳಿ ಮತ್ತು ನಾಗಸಂದ್ರವರೆಗಿನ ಹಸಿರು ಮಾರ್ಗವು 3.7 ಕಿಲೋ ಮೀಟರ್ ವಿಸ್ತರಣೆಗೊಂಡಿದೆ. ಈ ಮಾರ್ಗದಲ್ಲಿ ಇಂದು ಆಗಸ್ಟ್ 06 ಮಂಗಳವಾರದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಹಾಗಾದರೆ ಪ್ರಾಯೋಗಿಕ ಸಂಚಾರ ಯಾವಾಗ ಅಂತ್ಯವಾಗಲಿದೆ?, ವಾಣಿಜ್ಯ ಕಾರ್ಯಾಚರಣೆ ಆರಂಭ ಯಾವಾಗ? ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಅಧಿಕಾರಿಗಳು ನಾಗಸಂದ್ರದಿಂದ ಮಾದಾವರ ವರೆಗೆ ವಿಸ್ತರಣೆ ಆಗಿರುವ ಹಸಿರು ಮಾರ್ಗದಲ್ಲಿ ಇಂದಿನಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಒಂದು ತಿಂಗಳು ಕಾಲಾವಕಾಶ ಹಿಡಿಯಲಿದೆ.
ಆಯುಕ್ತ ತಪಾಸಣೆ ಮಾಡಿ ಅನುಮತಿ
ಸದ್ಯ ಆಗಸ್ಟ್ 6ರಂದು ಆರಂಭವಾಗಿರುವ ಪ್ರಾಯೋಗಿಕ ಸಂಚಾರ ಸೆಪ್ಟಂಬರ್ ಮೊದಲ ವಾರದ ಹೊತ್ತಿಗೆ ಪೂರ್ಣಗೊಳ್ಳಲಿದೆ. ಇದಾದ ನಂತರ ಮೆಟ್ರೋ ಆಯುಕ್ತರು ಸಿಗ್ನಲಿಂಗ್, ಟ್ರ್ಯಾಕ್ ಸೇರಿದಂತೆ ಪ್ರತಿಯೊಂದನ್ನು ತಪಾಸಣೆ ನಡೆಸಲಿದ್ದಾರೆ. ಇದಾಗಿ ಸಾರ್ವಜನಿಕರಿಗೆ ಈ ವಿಸ್ತೃತ ಮಾರ್ಗವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲು ಅನುಮತಿ ನೀಡಲಾಗುತ್ತಿದೆ.
ಇದೆಲ್ಲ ಪ್ರಕ್ರಿಯೆಯು ಸೆಪ್ಟಂಬರ್ ಎರಡು ಇಲ್ಲವೇ ಮೂರನೇ ವಾರ ಮುಗಿದರೆ, ಅದೇ ತಿಂಗಳ ಅಂತ್ಯಕ್ಕೆ ಇಲ್ಲವೇ ಅಕ್ಟೋಬರ್ ಆರಂಭದಲ್ಲಿ ಸಾರ್ವಜನಿಕರು ಮಾದಾವರವರೆಗೂ ಓಡಾಡಬಹುದಾಗಿದೆ. ಈ ಮಾರ್ಗವು ನೆಲಮಂಗಲ, ತುಮಕೂರು ಭಾಗದಿಂದ ಬರುವವರಿಗೆ ಮತ್ತು ಇಲ್ಲಿಗೆ ಹೋಗುವ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಸ್ತರಣೆ ಮಾರ್ಗಕ್ಕೆ ತಗುಲಿದ್ದು ರೂ.298 ಕೋಟಿ
ವಿಸ್ತರಣೆಗೊಂಡ 3.7 ಕಿಲೋ ಮೀಟರ್ ನಾಗಸಂದ್ರ-ಮಾದಾವರವರೆಗಿನ ಮಾರ್ಗದ ಕಾಮಗಾರಿಗೆ ಬರೋಬ್ಬರಿ 298 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಸದ್ಯ ಕಾಮಗಾರಿ ಮುಗಿದು ಇಂದಿನಿಂದ ಒಂದು ತಿಂಗಳು ವಿವಿಧ ರೀತಿಯ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ಈ ಮಾರ್ಗದ ನಂತರ ಡಿಸೆಂಬರ್ ನಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ.
ಅಪ್ಡೇಟ್ ಮಾಹಿತಿಯ ಪ್ರಕಾರ, ಕಳೆದ ಎರಡು ದಿನಗಳಿಂದ ಉತ್ತಮವಾಗಿ ರೈಲುಗಳು ಪ್ರಾಯೋಗಿಕ ಸಂಚಾರ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ಭರದಿಂದ ಸಾಗಿದೆ. ಆದಷ್ಟು ಶೀಘ್ರವೇ ಕೊನೆ ಹಂತದ ಪ್ರಕ್ರಿಯೆಗಳೂ ಪೂರ್ಣಗೊಂಡು, ವಾಣಿಜ್ಯ ಕಾರ್ಯಾಚರಣೆ ಆರಂಭಿಸಲಿದ್ದೇವೆ ಎಂದು ಬಿಎಂಆರ್ಸಿಎಲ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications