Namma Metro: ಭಾನುವಾರ ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ, ಕಾರಣವೇನು
ನಮ್ಮ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಸೇವೆ ಕೊಡುತ್ತದೆ. ಇದೀಗ ನಮ್ಮ ಮೆಟ್ರೋ ಭಾನುವಾರ ತನ್ನ ಸೇವೆಯ ಅವಧಿಯನ್ನು ವಿಸ್ತರಣೆ ಮಾಡುತ್ತಿದೆ. ಡಿಸೆಂಬರ್ 8ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ಭಾನುವಾರದ ಮೆಟ್ರೋ ಸೇವೆಯನ್ನು ಬದಲಾಯಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಇದೇ 8ಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೊ ರೈಲು ಸಂಚಾರ ಸೇವೆಯನ್ನು ಭಾನುವಾರದಂದು ಬೆಳಿಗ್ಗೆ 5.30ಕ್ಕೆ ಶುರು ಮಾಡಲು ಮೆಟ್ರೋ ಆಡಳಿತ (ಬಿಎಂಆರ್ಸಿಎಲ್) ಮಂಡಳಿ ನಿರ್ಧರಿಸಿದೆ.
ಈ ಪರೀಕ್ಷೆಗೆ ವಿವಿಧ ಭಾಗದಿಂದ ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಆ ವಿದ್ಯಾರ್ಥಿಗಳಿಗೆ ಸಂಚಾರದಲ್ಲಿ ತೊಂದರೆ ಆಗಬಾರದು ಹಾಗೂ ಸುಗಮವಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು ಎನ್ನುವ ಉದ್ದೇಶದಿಂದ ನಮ್ಮ ಮೆಟ್ರೋ ಈ ನಿರ್ಧಾರ ತೆಗೆದುಕೊಂಡಿದೆ. ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳು ಇರುವಾಗ ಹಾಗೂ ವಿಶೇಷ ಕಾರ್ಯಕ್ರಮಗಳು ಇರುವಾಗ ನಮ್ಮ ಮೆಟ್ರೋ ಸೇವೆ ವಿಸ್ತರಿಸುವುದು ಇದೆ. ಇದೀಗ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೆಟ್ರೋ ಅವಧಿಯನ್ನು ವಿಸ್ತರಿಸಲಾಗುತ್ತಿದೆ.

ಬೆಂಗಳೂರಿನ ನಮ್ಮ ಮೆಟ್ರೋದ ನಾಲ್ಕು ಟರ್ಮಿನಲ್ಗಳಲ್ಲೂ ಈ ಸೇವೆ ಇರಲಿದೆ. ಬೆಂಗಳೂರು ಮೆಟ್ರೋದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಹಾಗೂ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಲ್ಲಿ ಭಾನುವಾರ ಬೆಳಿಗ್ಗೆ 5.30ರಿಂದಲೇ ಮೆಟ್ರೋ ಸಂಚಾರ ಪ್ರಾರಂಭವಾಗಲಿದೆ. ಅಲ್ಲದೇ ಮೆಜೆಸ್ಟಿಕ್ನಿಂದಲೂ ಎಲ್ಲಾ ನಾಲ್ಕು ಟರ್ಮಿನಲ್ ಕಡೆಗೆ ಬೆಳಿಗ್ಗೆ 5.30ಕ್ಕೆ ರೈಲು ಸಂಚಾರ ಪ್ರಾರಂಭವಾಗಲಿದೆ. ಪ್ರತಿ 30 ನಿಮಿಷಗಳಿಗೆ ಒಂದರಂತೆ ಬೆಳಿಗ್ಗೆ 7ರ ವರೆಗೆ ಮೆಟ್ರೋ ಸಂಚರಿಸಲಿದೆ. 7 ಗಂಟೆಯ ನಂತರ ಸಾಮಾನ್ಯ ಸಂಚಾರದಂತೆ ಸೇವೆ ಮುಂದುವರಿಯಲಿದೆ ಎಂದು ಮೆಟ್ರೋ ಹೇಳಿದೆ.
ನಮ್ಮ ಮೆಟ್ರೋ ಸೇವೆಯು ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಶುರುವಾಗುತ್ತಿತ್ತು. ಆದರೆ, ಆ ದಿನ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ಈ ರೀತಿಯ ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 8ರಂದು ಇದೇ ಭಾನುವಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರೀಕ್ಷೆ ನಡೆಸುತ್ತಿದೆ. ಹೀಗಾಗಿ, ಅಭ್ಯರ್ಥಿಗಳು ಪರೀಕ್ಷಾ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಲ್ಲೂ ಬೆಳಿಗ್ಗೆ 5.30ರಿಂದಲೇ ಸೇವೆ ಪ್ರಾರಂಭವಾಗಲಿದೆ. ಮಾದಾವರ, ರೇಷ್ಮೆ ಸಂಸೆ, ಚಲ್ಲಘಟ್ಟ ಹಾಗೂ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣಗಳಿಂದ ಈ ಸೇವೆ ಪ್ರಾರಂಭಿಸುವುದಾಗಿ ಮೆಟ್ರೋ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಕ್ಯೂಆರ್ ಟಿಕೆಟ್ ಬಳಸಲು ಮನವಿ
ಎಂದಿನಿಂತೆ ವಿಶೇಷ ಸೇವೆಯನ್ನು ನೀಡುವಾಗ ಮೆಟ್ರೋ ನೀಡುವ ಸಂದೇಶದಂತೆ ಈ ಬಾರಿಯೂ ಒಂದು ಸಂದೇಶವನ್ನು ನೀಡಲಾಗಿದೆ. ಸಾಮಾನ್ಯವಾಗಿ ಜನ ಹೆಚ್ಚಾಗಿ ಸೇರುವ ಸಂದರ್ಭಗಳಲ್ಲಿ ಹಾಗೂ ಸಾಮಾನ್ಯ ದಿನಗಳಲ್ಲೂ ನಗದು ರಹಿತ ಪಾವತಿ ಹಾಗೂ ಕ್ಯೂಆರ್ ಟಿಕೆಟ್ಗಳ ಮೂಲಕ ಟಿಕೆಟ್ಗಳನ್ನು ಖರೀದಿಸಲು ಮೆಟ್ರೋ ನಿಗಮ ಕೇಳುತ್ತದೆ. ಅದೇ ರೀತಿ ಡಿಸೆಂಬರ್ 8ಕ್ಕೆ ಸಾವಾಜನಿಕರು ಹಾಗೂ ಪರೀಕ್ಷೆಗೆ ಹೋಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ನಗದು ರಹಿತ ಪಾವತಿ ಹಾಗೂ ಕ್ಯೂಆರ್ ಟಿಕೆಟ್ಗಳ ಮೂಲಕ ಟಿಕೆಟ್ ಖರೀದಿಗೆ ಮನವಿ ಮಾಡಿದೆ.
-
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications