Namma Metro: ವೈಟ್ಫೀಲ್ಡ್ ನಿಲ್ದಾಣದಿಂದ ಮೆಟ್ರೋ ವಿಸ್ತರಣೆ-ಕಾರಣ ಏನು ಹಾಗೂ ವೆಚ್ಚ ಎಷ್ಟು ಕೋಟಿ?
ಬೆಂಗಳೂರು, ಮಾರ್ಚ್, 04: ರಾಜ್ಯ ರಾಜಧಾನಿ ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಹಾಗೆಯೇ ನಮ್ಮ ಮೆಟ್ರೋ ಕೂಡ ಅಷ್ಟೇ ಜನಮನ್ನಣೆ ಪಡೆಯುವ ಮೂಲಕ ವಿಸ್ತರಣೆ ಆಗುತ್ತಲೇ ಇದೆ. ಹಾಗೆಯೇ ವೈಟ್ಫೀಲ್ಡ್ ಮಾರ್ಗದ ಮೆಟ್ರೋ ಮಾರ್ಗವನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಹಾಗಾದರೆ ಇದಕ್ಕೆ ಪ್ರಮುಖ ಕಾರಣ ಏನು ಹಾಗೂ ಇದಕ್ಕೆ ತಗಲುವ ವೆಚ್ಚ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳ ಸುಗಮ ಸಂಚಾರದ ಉದ್ದೇಶದಿಂದ ಈಗಿನ ವೈಟ್ಫೀಲ್ಡ್ ನಿಲ್ದಾಣದಿಂದ ಮೆಟ್ರೋ ಮಾರ್ಗವನ್ನು 588 ಮೀಟರ್ನಷ್ಟು ವಿಸ್ತರಣೆ ಮಾಡಲು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ (ಬಿಎಂಆರ್ಸಿಎಲ್) ನಿರ್ಧರಿಸಿದೆ. ಈ ಬಗ್ಗೆ ಕಾಮಗಾರಿ ನಡೆಸಲು ಇತ್ತೀಚೆಗಷ್ಟೇ ₹48.62 ಕೋಟಿ ರೂಪಾಯಿ ಟೆಂಡರ್ ಅನ್ನು ಎಂ.ವೆಂಕಟರಾವ್ ಇನ್ಫ್ರಾ ಪ್ರೊಜೆಕ್ಟ್ ಪ್ರೈ.ಲಿ.ಕಂಪನಿಗೆ ನೀಡಲಾಗಿದ್ದು, ಶೀಘ್ರವೇ ಕಾರ್ಯಾದೇಶ ನೀಡುವ ಸಾಧ್ಯತೆ ಇದೆ.

ಇದರಿಂದ ಸದ್ಯ ಪೂರ್ವದ ವೈಟ್ಫೀಲ್ಡ್-ಪಶ್ಚಿಮದ ಚಲ್ಲಘಟ್ಟದವರೆಗೆ 43.49 ಕಿಲೋ ಮೀಟರ್ ಇರುವ ನೇರಳೆ ಮಾರ್ಗ ವೈಟ್ಫೀಲ್ಡ್ನ ಬೆಳತ್ತೂರು ಕಾಲೋನಿವರೆಗೆ ಕೊಂಚ ವಿಸ್ತರಣೆಯಾಗಲಿದೆ. ಮಾರ್ಗ ವಿಸ್ತರಣೆಯಾಗುತ್ತಿದೆ ವಿನಃ ಹೊಸದಾಗಿ ಕೊನೆಯ ಹಂತದಲ್ಲಿ ಯಾವುದೇ ನಿಲ್ದಾಣವನ್ನು ನಿರ್ಮಾಣ ಮಾಡಲಾಗುತ್ತಿಲ್ಲ. ಪ್ರಯಾಣಿಕರಿಗೆ ಇದರಿಂದ ನೇರವಾಗಿ ಯಾವುದೇ ಪ್ರಯೋಜನ ಇಲ್ಲ.
ಇನ್ನು ರೈಲುಗಳು ನಿಲ್ದಾಣದಿಂದ ಮುಂದಕ್ಕೆ ಹೋಗಿ ಹಿಂದಿರುಗಿ ಬರಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಮತ್ತು ವೈಟ್ಫೀಲ್ಡ್ ಡಿಪೋದ 3ನೇ ಲೈನ್ ಅನ್ನು 28 ಮೀಟರ್ ವಿಸ್ತರಣೆ ಮಾಡುವ ಉದ್ದೇಶದಿಂದ ಒಟ್ಟಾರೆ ಮಾರ್ಗವನ್ನು ವಿಸ್ತರಣೆ ಮಾಡಲಾಗುತ್ತಿದೆ. ಕಳೆದ ಅಕ್ಟೋಬರ್ನಲ್ಲಿ ಬಿಎಂಆರ್ಸಿಎಲ್ ಈ ಟೆಂಡರ್ ಕರೆದಿತ್ತು. ಮುಂದಿನ ಒಂದೂವರೆ ವರ್ಷದಲ್ಲಿ ಈ ವಿಸ್ತರಣೆ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
BMTC ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಓಡಾಡುವವರೇ ಎಚ್ಚರ! ಫೆಬ್ರವರಿಯಲ್ಲೇ 5 ಲಕ್ಷ ರೂ.ದಂಡ ವಸೂಲಿ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications