Bengaluru-Tumakuru Metro: ತುಮಕೂರಿಗೆ ಮೆಟ್ರೋ ರೈಲು: ಮಹತ್ವದ ಮಾಹಿತಿ
ಬೆಂಗಳೂರು ನಗರದ ಟ್ರಾಫಿಕ್ ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಿಸಲು ಈಗಾಗಲೇ ವ್ಯಾಪಕ ಚಿಂತನೆ ನಡೆಯುತ್ತಿದೆ. ನಗರದ ಮೇಲೆ ಒತ್ತಡ ಕಡಿಮೆ ಮಾಡಲು ಅಕ್ಕ-ಪಕ್ಕದ ಜಿಲ್ಲೆಗಳನ್ನು ಸಂಪರ್ಕ ವ್ಯವಸ್ಥೆ ಸರಿ ಮಾಡುವತ್ತ ಸರ್ಕಾರ ಚಿಂತನೆ ನಡೆಸುತ್ತಿದ್ದು, ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ಯೋಜನೆ ಮುನ್ನಲೆಗೆ ಬಂದಿದೆ.
ಬೆಂಗಳೂರು ನಗರದ ಮೇಲೆ ಒತ್ತಡ ಕಡಿಮೆ ಮಾಡಲು ಪರ್ಯಾಯವಾಗಿ ಸುತ್ತಮುತ್ತಲಿನ ನಗರಗಳ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದೆ. ತುಮಕೂರು ಬೆಂಗಳೂರು ಮೆಟ್ರೋ ಕಾಮಗಾರಿ ಬಗ್ಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್ಸಿಎಲ್) ಸರ್ಕಾರ ಸೂಚಿಸಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಈ ಮೆಟ್ರೋ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸರ್ಕಾರ ಯೋಜಿಸುತ್ತಿದೆ ಎಂದು ಪರಮೇಶ್ವರ ಹೇಳಿದ್ದಾರೆ.
ತುಮಕೂರು ಅಭಿವೃದ್ಧಿಗೆ ಒತ್ತು
ಬೆಂಗಳೂರಿನ ಮೇಲಿನ ಹೊರೆ ಕಡಿಮೆ ಮಾಡಲು ತುಮಕೂರಿನ ಅಭಿವೃದ್ಧಿಗೆ ಯೋಜನೆ ರೂಪಿಸುತ್ತಿದ್ದೇವೆ. ಸಂಪರ್ಕವನ್ನು ಹೆಚ್ಚಿಸಿದರೆ, ತುಮಕೂರು ಬೆಂಗಳೂರಿನ ವಿಸ್ತರಣೆಯಾಗಬಹುದು ಮತ್ತು ಬೃಹತ್ ಬೆಂಗಳೂರು ಆಗಬಹುದು. ಸರ್ಕಾರ ಈ ಬಗ್ಗೆ ಚರ್ಚಿಸಿದ್ದು, ಡಿಪಿಆರ್ ಸಿದ್ಧಪಡಿಸುವಂತೆ ಬಿಎಂಆರ್ಸಿಎಲ್ಗೆ ಸೂಚಿಸಿದೆ ಎಂದು ಹೇಳಿದ್ದಾರೆ.
ಯೋಜನೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅನುಮೋದನೆ ನಿರ್ಣಾಯಕ. ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗೆ ಅನುಮೋದನೆ ನೀಡಬೇಕು. ನಾವು ಹೆದ್ದಾರಿಯಲ್ಲಿ ಮೆಟ್ರೋ ಪಿಲ್ಲರ್ಗಳನ್ನು ನಿರ್ಮಿಸಬೇಕಾಗಿದೆ ಮತ್ತು ಆದ್ದರಿಂದ ಕೇಂದ್ರದ ಅನುಮತಿ ಅಗತ್ಯವಿದೆ. ಕೆಲವು ಕಂಪನಿಗಳು ಪಿಪಿಪಿ ಮಾದರಿಯಲ್ಲಿ ಹೂಡಿಕೆಗೆ ಸಿದ್ಧವಾಗಿರುವುದರಿಂದ ನಾವು ಯೋಜನೆಗೆ ಹಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂದರು.
ಬೆಂಗಳೂರು ಮತ್ತು ತುಮಕೂರಿನ ನಡುವಿನ ಅಂತರವು ಸುಮಾರು 70 ಕಿಮೀ ಮತ್ತು ರಸ್ತೆಯ ಮೂಲಕ ಎರಡು ಗಂಟೆಗಳಿಗಿಂತ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ. ಎರಡು ನಗರಗಳು ರಾಷ್ಟ್ರೀಯ ಹೆದ್ದಾರಿ-48 ನೊಂದಿಗೆ ರಸ್ತೆಯ ಮೂಲಕ ಸಂಪರ್ಕ ಹೊಂದಿವೆ. ತುಮಕೂರಿನವರೆಗೆ ಇದೇ ಹೆದ್ದಾರಿಯಲ್ಲಿ ಮೆಟ್ರೋ ಪಿಲ್ಲರ್ಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ.
ನಮ್ಮ ಮೆಟ್ರೋವನ್ನು ರಾಮನಗರದವರೆಗೆ ವಿಸ್ತರಿಸಲು ಡಿಸಿಎಂ ಡಿಕೆ ಶಿವಕುಮಾರ್ ಆಸಕ್ತಿ ತೋರಿದ್ದರು. ರಾಮನಗರ ಹೆಸರನ್ನು ಬದಲಾಯಿಸುವ ಬಗ್ಗೆ ಕೂಡ ಮಾತನಾಡಿದ್ದರು. ಆದರೆ ರಾಮನಗರ ಹೆಸರು ಬದಲಾವಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications