Get Updates
Get notified of breaking news, exclusive insights, and must-see stories!

Namma Metro Fare Hike: ಜನರಿಗಾಗಿ ಯುದ್ಧ, ಮೆಟ್ರೋ ಹಾಗೂ ಜನ ಇಬ್ಬರೂ ಉಳಿಯಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್‌

Namma Metro Fare Hike: ರಾಜ್ಯ ರಾಜಧಾನಿ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ನಿರ್ಧಾರದ ವಿರುದ್ಧ ಎಲ್ಲೆಡೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ ಇದನ್ನು ಕೈಬಿಡಲಾಗಿದೆ. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಹೇಳಿದರು.

ವಿಧಾನಸೌಧದಲ್ಲಿ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವಾಗಿ ಉಂಟಾಗಿರುವ ವಿವಾದದ ಬಗ್ಗೆ ಡಿಸಿಎಂ ಸ್ಪಷ್ಟನೆ ನೀಡಿದರು.
"ಇಲ್ಲಿ ಯಾವುದೇ ರಾಜಕೀಯವಿಲ್ಲ. ನಮಗೆ ಯಾವುದೇ ರೀತಿಯ ನಿರ್ದೇಶನ ನೀಡುವ ಹಾಗೂ ಹಸ್ತಕ್ಷೇಪ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲ. ದೆಹಲಿ ಮೆಟ್ರೋ ಅಳವಡಿಸಿಕೊಂಡಿರುವ ಸೂತ್ರದ ಅನ್ವಯದಂತೆ ಹೊಸದಾಗಿ ಲೆಕ್ಕಾಚಾರ ಮಾಡಲು ತಿಳಿಸಿದ್ದೇನೆ," ಎಂದು ಹೇಳಿದರು.

Namma Metro Karnataka Government Halts Fare Hike Says Deputy CM DK Shivakumar in Bengaluru

"ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ದೆಹಲಿಯಲ್ಲಿ ಸಭೆ ಕರೆಯುತ್ತಾರೆ ಎಂದುಕೊಂಡಿದ್ದೆ. ಸಭೆ ನಡೆಸಿ ಏನು ಆದೇಶ ಕೊಡುತ್ತಾರೆ ಎಂದು ಕಾಯುತ್ತಿದ್ದೆ. ಏನು ರಾಜಕಾರಣ ಮಾಡುತ್ತಾರೆ ಎಂದು ನೋಡುತ್ತಿದ್ದೆ. ವಾಸ್ತವತೆ ಬಿಟ್ಟು ಇದರಲ್ಲಿ ರಾಜಕಾರಣ ಹೆಚ್ಚಾಗಿದೆ. ಆದ್ದರಿಂದ ನಾನು ಇದರ ಬಗ್ಗೆ ಏನೂ ಮಾತನಾಡದೇ ಸುಮ್ಮನಿದ್ದೆ. ದೆಹಲಿ ಸಭೆಯನ್ನು ಮುಂದಕ್ಕೆ ಹಾಕಲಾಗಿದೆ. ತಾತ್ಕಾಲಿಕ ಜಯ ಎಂದು ಹೇಳುತ್ತಿರುವವರು ಇಂದು ಬೋರ್ಡ್‌ ಮೀಟಿಂಗ್‌ ಮಾಡಿ ನಿರ್ದೇಶನ ನೀಡಬೇಕಿತ್ತು," ಎಂದರು.

ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರ ಕೇಳಿಕೊಂಡಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, "ದರ ಏರಿಕೆ ತಡೆ ಹಿಡಿಯಿರಿ ಎಂದು ಕೇಂದ್ರ ಸರ್ಕಾರದವರು ಪತ್ರ ಬರೆದಿರಬಹುದು. ಆದರೆ, ಈ ರೀತಿ ಮಾಡಲು ಅವರಿಗೂ ಕಾನೂನಿನಲ್ಲಿ ಅವಕಾಶವಿಲ್ಲ. ಅವರು ಯಾವ ಕಾನೂನಿನ ಅಡಿ, ಯಾವ ಆಕ್ಟ್‌ ಅನ್ವಯ ಪತ್ರ ಬರೆದಿದ್ದಾರೆ ಎಂದು ಹೇಳಿದರೆ ಒಪ್ಪಿಕೊಳ್ಳೋಣ. ಇದನ್ನು ಹೊಸದಾಗಿ ತೀರ್ಮಾನ ಮಾಡಬೇಕು ಎಂದಾದರೆ ನೂತನ ದರ ನಿಗದಿ ಸಮಿತಿ ರಚನೆ ಆಗಬೇಕು. ನಾನು ನಮ್ಮ ಜನರ ದನಿಯಾಗಬೇಕು ಎಂದು ಕೆಲಸ ಮಾಡುತ್ತಿದ್ದೇನೆ," ಎಂದರು.

ನನ್ನ ರಾಜಕೀಯದ ಅನುಭವದ ಆಧಾರದ ಮೇಲೆ ಹಾಗೂ ನಾನು ಇತರೇ ರಾಜ್ಯಗಳ ಮೇಲೆ ಮೆಟ್ರೋ ನಿಗಮದ ಬಳಿ, ವಿಷಯ ತಜ್ಞರು, ಕೇಂದ್ರದ ತಜ್ಞರ ಬಳಿ ಇದರ ಬಗ್ಗೆ ಚರ್ಚೆ ನಡೆಸಿ ಗಮನಿಸಿದಾಗ ಹೊಸ ಸಮಿತಿ ರಚನೆಯಾಗುವ ತನಕ ಈ ರೀತಿ ಶಿಫಾರಸ್ಸು ಮಾಡಲು ಕೇಂದ್ರ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಹೊಸ ಸಮಿತಿ ಇದರ ಬಗ್ಗೆ ನಿರ್ದೇಶನ ನೀಡುತ್ತದೆ. ಪತ್ರ ಬರೆದಿರುವವರಿಗೆ ಈ ಬಗ್ಗೆ ಗೊತ್ತಿಲ್ಲ ಎಂದೇನಲ್ಲ. ಅವರು ದಡ್ಡರಲ್ಲ ಎಂದು ಕೊಂಡಿದ್ದೇನೆ.

ಇದರ ಬಗ್ಗೆ ಸ್ಥಳೀಯ ಸಂಸದರು ಒಂದಷ್ಟು ಜನ ಮಾತನಾಡಬಹುದಷ್ಟೇ. ಅವರೂ ಸಹ ಎಲ್ಲಾ ರಾಜ್ಯಗಳನ್ನು ನಡೆಸಬೇಕಲ್ಲವೇ? ಈಗ ಬರೆದಿರುವ ಪತ್ರವನ್ನು ಇಟ್ಟುಕೊಂಡು ಯಾರೋ ಹೆಸರು ತೆಗೆದುಕೊಳ್ಳುತ್ತಿದ್ದಾರಲ್ಲ ಅದು ಸಾಧ್ಯವಿಲ್ಲ. ನಾವು ದರ ಏರಿಕೆ ಮಾಡಿ ಎಂದು ಕೇಳಿಲ್ಲ. ಈ ಹಿಂದಿನ ಸಮಿತಿ ಏನು ತೀರ್ಮಾನ ಮಾಡಿದೆ ಅದರಂತೆ ಮುನ್ನಡೆದಿದೆ ಎಂದರು.

ಜನರಿಗಾಗಿ ಯುದ್ಧ: ನಮ್ಮಿಂದ ದರ ಏರಿಕೆಗೆ ತಡೆ ಬಿದ್ದಿದೆ ಎಂದು ಹೇಳುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿ, ಇದರಿಂದ ಹೆಸರನ್ನು ಯಾರು ಬೇಕಾದರೂ ತೆಗೆದುಕೊಳ್ಳಲಿ. ಅಂತಿಮವಾಗಿ ಜನರಿಗೆ ಒಳ್ಳೆಯದಾಗಬೇಕು ಅಷ್ಟೇ. ನನ್ನ ವಾರ್‌ ಕ್ರೆಡಿಟ್‌ ಪಡೆಯಲು ಅಲ್ಲ. ಜನರಿಗೆ ಒಳ್ಳೆಯದಾಗಬೇಕು ಎಂದು ಯುದ್ಧ ಮಾಡುತ್ತಿರುವೆ. ಜನರಿಗೆ ಹಾಗೂ ಮೆಟ್ರೋ ಸಂಸ್ಥೆಗೂ ಭಾರ ಆಗಬಾರದು. ನಾನು ಯಾರ ಒತ್ತಡಕ್ಕೂ ಒಳಗಾಗಿ ಕೆಲಸ ಮಾಡುತ್ತಿಲ್ಲ. ನನಗೆ ಅಂತಿಮವಾಗಿ ಬಿಎಂಆರ್‌ಸಿಎಲ್‌ ಸಂಸ್ಥೆ ಹಾಗೂ ಜನರೂ ಉಳಿಬೇಕು ಎಂದು ಹೇಳಿದರು.

ಒಂದು ವರ್ಷದ ಹಿಂದೆಯೇ ತೀರ್ಮಾನ: ದರ ಏರಿಕೆ ಬಗ್ಗೆ ನಮ್ಮ ಬಳಿ ಏನೂ ಕೇಳಿಲ್ಲ, ಮಾತನಾಡಿಲ್ಲ. ನಾವು ಚರ್ಚೆ ಮಾಡಿಲ್ಲ. ನಾವು ಅವರನ್ನು ಕೇಳೇ ಇಲ್ಲ, ಇದರ ಬಗ್ಗೆ ಹೇಳಿಯೇ ಇಲ್ಲ. ಮೆಟ್ರೋ ದರ ಏರಿಕೆ ಬಗ್ಗೆ ತೀರ್ಮಾನ ಆಗಿರುವುದು ಈಗಲ್ಲ. ಒಂದು ವರ್ಷದ ಹಿಂದೆ. ಅಂದರೆ 09.02.2025ರಂದೇ ಶೇಕಡ 5ರಷ್ಟು ದರ ಏರಿಕೆಯನ್ನು 9.02.26ರಂದು ಮಾಡಬೇಕು ಎಂದು ದರ ಏರಿಕೆ ಸಮಿತಿ ಅಂದೇ ಆದೇಶ ನೀಡಿದೆ. ಆ ಪ್ರಕಾರ ದರ ಏರಿಕೆ ಮಾಡಲಾಗಿದೆ. ಈಗ ಮಾತನಾಡುತ್ತಿರುವವರು ಯಾರು ಸಹ ಅವತ್ತು ಇದರ ಬಗ್ಗೆ ಮಾತನಾಡಲಿಲ್ಲ. ಬೆಂಗಳೂರಿನ ಜನತೆ ಗೌರವದಿಂದ ಇದನ್ನು ಸ್ವೀಕಾರ ಮಾಡಿದ್ದಾರೆ ಎಂದರು.

ದರ ಏರಿಕೆಯನ್ನು ತಡೆಯುವುದರ ಕುರಿತಂತೆ ರಾಜ್ಯ ಸರ್ಕಾರ, ಅಧಿಕಾರಿಗಳು ಒಂದು ತೀರ್ಮಾನ ಮಾಡಿದ್ದೇವೆ. ಬಿಎಂಆರ್‌ಸಿಎಲ್‌ ದರ ಏರಿಕೆಗೆ ಮೂರು ಮುಖ್ಯ ಮಾನದಂಡಗಳಿವೆ. ಓಎಂಆರ್‌ ವೆಚ್ಚ, ಬದಲಾಗುವ ಸಿಪಿಐ, ಸಿಬ್ಬಂದಿ ವೆಚ್ಚ, ಪ್ರತಿ ಯುನಿಟ್‌ ವೆಚ್ಚ, ಇಂಧನ ವೆಚ್ಚವನ್ನು ಲೆಕ್ಕಚಾರ ಮಾಡಲು ಅವಕಾಶವಿದೆ. ಇವುಗಳ ಆಧಾರದ ಮೇಲೆ ಮತ್ತೊಮ್ಮೆ ಮರು ಲೆಕ್ಕಚಾರವನ್ನು ಮಾಡಿಕೊಂಡು ಬನ್ನಿ ಎಂದು ನಮ್ಮ ಸರ್ಕಾರ ಮಾರ್ಗದರ್ಶನ ನೀಡಿದೆ. ಅಲ್ಲಿಯವರೆಗೂ ದರ ಏರಿಕೆಯನ್ನು ತಡೆಯಿಡಿಯಿರಿ ಎಂದು ಸೂಚನೆ ನೀಡಿದ್ದೇನೆ ಎಂದರು.

ಬೇರೆ ಮೆಟ್ರೋಗಳಿಗೆ ಹೋಲಿಕೆ ಮಾಡಿದರೆ, ನಮ್ಮ ಮೆಟ್ರೋ ದರ ಪಟ್ಟಿ ಹೆಚ್ಚಿದೆ ಎಂದು ಹೇಳುತ್ತಾರೆ. ಉದಾಹರಣೆಗೆ ದೆಹಲಿಯಲ್ಲಿ ಭದ್ರತಾ ವಿಭಾಗದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿಯಲ್ಲಿದೆ. ಸಿಎಸ್‌ಎಫ್‌ ಅಲ್ಲಿನ ಜವಾಬ್ದಾರಿ ತೆಗೆದುಕೊಂಡಿದೆ. ಇಲ್ಲಿ ನಾವೇ ಭದ್ರತೆಯ ಜವಾಬ್ದಾರಿ ಹೊತ್ತಿದ್ದೇವೆ. ಜೊತೆಗೆ ನಾವು ಇಲ್ಲಿ ಇದಕ್ಕೆ ಜಿಎಸ್‌ಟಿಯನ್ನೂ ಸಹ ಪಾವತಿಸುತ್ತಿದ್ದೇವೆ. ಕ್ಯಾಶ್‌ ಲಾಸ್‌ ಮರುಪಾವತಿಗೆ ಎಂದು 1064.32 ಸಾವಿರ ಕೋಟಿ ರೂಪಾಯಿ ರಾಜ್ಯ ಸರ್ಕಾರ ನೀಡಿದೆ. ಸಾಲ ಮರುಪಾವತಿಗೆ ಎಂದು ಕೇಂದ್ರ ಸರ್ಕಾರಕ್ಕೆ 4,002.23 ಕೋಟಿ ರೂಪಾಯಿ ನೀಡಿದ್ದೇವೆ. ಒಟ್ಟು 5,066. 55 ಕೋಟಿ ರೂಪಾಯಿ ಕೊಟ್ಟಿದ್ದೇವೆ ಎಂದರು.

ದರ ಏರಿಕೆ ತಡೆ ಎಷ್ಟು ಸಮಯ ಎಂದು ಕೇಳಿದಾಗ, ಪ್ರತಿಯೊಂದಕ್ಕೂ ಹಂತಗಳಿವೆ. ಒಂದೆರಡು ದಿನಗಳಲ್ಲಿ ಎಂದು ಹೇಳಲು ಆಗುವುದಿಲ್ಲ. ಬೇರೆಯವರು ಹೇಗೆ ಎಷ್ಟು ವೇಗದಲ್ಲಿ ಇರುವರೋ ನಮ್ಮ ರೈಲು ಸಹ ಅಷ್ಟೇ ವೇಗವಾಗಿ ಹೋಗುತ್ತದೆ ಎಂದು ಹೇಳಿದರು. ಇನ್ನೂ ಹಲವಾರು ಕಡೆ ಮೆಟ್ರೋ ಇದ್ದರೂ ಇಲ್ಲಿ ಮಾತ್ರ ರಾಜಕೀಯ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಲ್ಲಿ ಕೇವಲ ಟ್ರಂಕ್‌ಗಳು, ದನಿ, ಮೈಕ್‌ ಮಾತ್ರ ಇವೆ. ದೆಹಲಿ, ಮುಂಬೈ ಹೈದರಾಬಾದ್‌ ಹೀಗೆ ಎಲ್ಲಾದರೂ ಮಾತನಾಡಿದ್ದಾರಾ? ಎಲ್ಲಿಯೂ ಮಾತನಾಡಿಲ್ಲ ಎಂದು ಹೇಳಿದರು.

ದರ ಏರಿಕೆಯಲ್ಲಿ ನಮ್ಮ ಪಾಲಿಲ್ಲ ಎಂದು ಕೇಂದ್ರಕ್ಕೆ ಪತ್ರ ಬರೆಯಿರಿ ಎಂದು ಆರ್‌.ಆಶೋಕ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾಧ್ಯಮದ ಮುಂದೆ ಅವರು ಏನು ಬೇಕಾದರೂ ತಿಳಿಸಲಿ. ಏನು ಬೇಕು ಎಂದು ನನಗೆ ತಿಳಿಸಿದರೆ, ನಾನು ಅದಕ್ಕೆ ಉತ್ತರ ನೀಡುತ್ತೇನೆ ಎಂದರು. ಹೊಸ ದರ ನಿಗದಿ ಸಮಿತಿಗೆ ಒತ್ತಾಯ ಮಾಡುವ ಬಗ್ಗೆ ಪ್ರತಿಕ್ರಿಯಿಸಿ, ಸದ್ಯ ಈ ಗೊಂದಲಕ್ಕೆ ನಾನು ಹೋಗುವುದಿಲ್ಲ. ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಯಲ್ಲಿ ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್‌ ಏನು ಮಾಡಲು ಸಾಧ್ಯವೋ ಅದನ್ನು ಮಾಡಲಾಗುವುದು. ಇದು ನಮ್ಮ ಭೂಮಿ. ನಮ್ಮ ಗ್ರಾಹಕರಿಗೆ ಯಾವ ರೀತಿ ಸಹಾಯ ಮಾಡಲಾಗುವುದೋ ಆ ದಾರಿಯನ್ನು ಹುಡುಕಲಾಗಿದೆ ಎಂದರು.

ಶೇಕಡ 5ರಷ್ಟು ದರ ಇಳಿಕೆಯಾಗುತ್ತದೆ ಎಂದು ಆಶಾಭಾವನೆ ಇಟ್ಟುಕೊಳ್ಳಬಹುದೇ ಎಂದು ಕೇಳಿದಾಗ, ಮರು ಲೆಕ್ಕಾಚಾರ ಮಾಡಿ ಎಂದು ಸೂಚನೆ ನೀಡಿದ್ದೇನೆ. ಯಾವುದೇ ಸಂಸ್ಥೆಯಾದರೂ ಅಲ್ಲಿನ ಖರ್ಚುವೆಚ್ಚದಲ್ಲಿ ವ್ಯತ್ಯಯ ಉಂಟಾಗುತ್ತಿರುತ್ತದೆ. ಅದೇ ರೀತಿ ಇಲ್ಲಿ ಇಂಧನ ದರ ಏರಿಕೆ ಸೇರಿದಂತೆ ಇತರೇ ಲೆಕ್ಕಾಚಾರಗಳು ಇರುತ್ತವೆ ಎಂದರು.

ದರ ಏರಿಕೆ ನಿರ್ಧಾರ ಯಾರ ವ್ಯಾಪ್ತಿಗೆ ಬರುತ್ತದೆ?: ದರ ಏರಿಕೆ ನಿರ್ಧಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆಯೇ ಎಂದು ಕೇಳಿದಾಗ, ಯಾರ ವ್ಯಾಪ್ತಿಗೂ ಬರುವುದಿಲ್ಲ. ದರ ಪರಿಷ್ಕರಣಾ ಸಮತಿಯ ಅಡಿಯಲ್ಲಿ ಬರುತ್ತದೆ. ಈ ಮೊದಲು ರಾಜ್ಯ ಸರ್ಕಾರದವರು ಈ ಸಮಿತಿಯಲ್ಲಿ ಇರುತ್ತಿದ್ದರು. ಈಗ ಇಲ್ಲ ಎಂದರು. ಹಳೇ ಸಮಿತಿ ಅನ್ವಯ ದರ ಪರಿಷ್ಕರಣೆ ಮಾಡುವ ಬಗ್ಗೆ ಮಾತನಾಡಿ, ಈ ರೀತಿ ಮಾಡಲು ಅಧಿಕಾರವಿಲ್ಲ. ಹೊಸ ಸಮಿತಿ ರಚನೆ ಆಗುವವರೆಗೂ ಕೇಂದ್ರ, ರಾಜ್ಯ, ಬಿಎಂಆರ್‌ಸಿಎಲ್‌ ಯಾರಿಗೂ ಅಧಿಕಾರ ಇಲ್ಲ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+